AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು

ಎಂಟು ಸಿಂಹಗಳಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಏಪ್ರಿಲ್​ 29ರಂದು ಅವುಗಳ ಗಂಟಲುದ್ರವದ ಮಾದರಿ ಸಂಗ್ರಹಿಸಿ, ಆರ್​ಟಿ-ಪಿಸಿಆರ್​​ ಟೆಸ್ಟ್​ ಮಾಡಿಸಲಾಗಿತ್ತು.

ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 04, 2021 | 5:53 PM

Share

ಹೈದರಾಬಾದ್​: ನಗರದ ಜೂಲಾಜಿಕಲ್ ಪಾರ್ಕ್​ನಲ್ಲಿರುವ ಎಂಟು ಸಿಂಹಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಷ್ಟು ದಿನ ಬೇರೆ ದೇಶಗಳಲ್ಲಿ ಪ್ರಾಣಿಗಳಿಗೂ ಕೊರೊನಾ ಸೋಂಕು ತಗುಲಿದ್ದ ಬಗ್ಗೆ ವರದಿಗಳನ್ನು ಓದಿದ್ದರೂ ನಮ್ಮ ದೇಶದಲ್ಲಿ ಇಂಥ ಪ್ರಕರಣಗಳು ಕಂಡುಬಂದಿರಲಿಲ್ಲ. ಆದರೆ ಇದೇ ಮೊದಲಬಾರಿಗೆ ಹೈದರಾಬಾದ್​ನಲ್ಲಿ ಎಂಟು ಸಿಂಹಗಳಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡಿದೆ.

ಎಂಟು ಸಿಂಹಗಳಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಏಪ್ರಿಲ್​ 29ರಂದು ಅವುಗಳ ಗಂಟಲುದ್ರವದ ಮಾದರಿ ಸಂಗ್ರಹಿಸಿ, ಆರ್​ಟಿ-ಪಿಸಿಆರ್​​ ಟೆಸ್ಟ್​ ಮಾಡಿಸಲಾಗಿತ್ತು. ಅದರ ವರದಿ ಈಗ ಬಂದಿದ್ದು ಎಲ್ಲ ಪ್ರಾಣಿಗಳಲ್ಲೂ ಸೋಂಕು ದೃಢಪಟ್ಟಿದೆ.

ಸದ್ಯ ಎಲ್ಲ ಸಿಂಹಗಳನ್ನೂ ಸಂಪೂರ್ಣವಾಗಿ ಐಸೋಲೇಟ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಿಂಹಗಳೂ ಸಹ ಚಿಕಿತ್ಸೆಗೆ ಸ್ಪಂದಿಸುತ್ತಿವೆ. ಈ ನೆಹರೂ ಜೂಲಾಜಿಕಲ್​ ಪಾರ್ಕ್​ನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಸಾರ್ವಜನಿಕರ ವೀಕ್ಷಣೆಗೂ ನಿರ್ಬಂಧ ಹೇರಲಾಗಿದೆ. ಮೃಗಾಲಯದ ಸಿಬ್ಬಂದಿ ಸಿಂಹಗಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದಾರೆ. ಆಹಾರವನ್ನೂ ಸಹ ಸೋಂಕು ರಹಿತಗೊಳಿಸಿ, ಪರೀಕ್ಷಿಸಿ ನೀಡಲಾಗುತ್ತಿದೆ.

ನಮ್ಮ ದೇಶದಲ್ಲಿ ಪ್ರಾಣಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಇದೇ ಮೊದಲಬಾರಿಗೆ ಆದರೂ, ಬೇರೆ ಕೆಲವು ದೇಶಗಳಲ್ಲಿ ಕಳೆದ ವರ್ಷವೇ ಇಂಥ ಕೇಸ್​ಗಳು ವರದಿಯಾಗಿವೆ. ಕಳೆದ ಏಪ್ರಿಲ್​ನಲ್ಲಿ ನ್ಯೂಯಾರ್ಕ್​ ಸಿಟಿಯಲ್ಲಿ ಹುಲಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಮನುಷ್ಯನ ಮೂಲಕ ಪ್ರಾಣಿಗಳಿಗೆ ಕೊರೊನಾ ಸೋಂಕು ತಗುಲುತ್ತದೆ ಎಂದು ತಜ್ಞರು ತಿಳಿಸುತ್ತಾರೆ. ಕೊರೊನಾ ಸೋಂಕು ಇದ್ದರೂ ಕೆಲವರಲ್ಲಿ ಅದರ ಲಕ್ಷಣಗಳು ಗೋಚರಿಸುವುದಿಲ್ಲ. ಅಂಥವರಿಂದಲೇ ಪ್ರಾಣಿಗಳಿಗೆ ಕೊವಿಡ್ ತಗುಲುತ್ತದೆ ಎಂಬುದು ದೃಢಪಟ್ಟಿದೆ.

ಇದನ್ನೂ ಓದಿ: 26 ಕ್ಕೂ ಹೆಚ್ಚು ಕೊರೊನಾ ರೋಗಿಗಳನ್ನು ಬದುಕುಳಿಸಿದ್ದಾರೆ ಈ ಶಿಕ್ಷಕ!

ಸಾಲ ಶೂಲ ಮಾಡಿ ದಿನನಿತ್ಯ ಕೂಲಿ ಮಾಡಿ ಆಸ್ಪತ್ರೆಗೆ 3 ಲಕ್ಷ ಹಣ ಕಟ್ಟಿದ್ರೂ ಉಳಿಯಲಿಲ್ಲ!

Follow Us
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್