ಈ ಬಾರಿ ವಿದ್ಯುತ್ ಅವಘಡ: ಸುಟ್ಟು ಕರಕಲಾದ 8 ಕೃಷಿ ಕಾರ್ಮಿಕರು

ಹೈದರಾಬಾದ್: ಕಾರ್ಮಿಕರ ವಿಷಯದಲ್ಲಿ ಈ ಬಾರಿ ಆಂಧಪ್ರದೇಶದಿಂದ ಭಾರಿ ದಾರುಣ ಘಟನೆಯೊಂದು ವರದಿಯಾಗಿದೆ. ಮೆಣಿಸಿನ ಕಾಯಿ ತುಂಬಿಕೊಂಡು ಕಾರ್ಮಿಕರೊಂದಿಗೆ ತೆರಳುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್ ತಂತಿ ತಗುಲಿದೆ. ಆ ವೇಳೆ ವಿದ್ಯುತ್ ಹರಿದು 8 ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಟ್ರಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದದ್ದರಿಂದ ಘಟನೆ ಸಂಭವಿಸಿದೆ. ಪ್ರಕಾಶಂ ಜಿಲ್ಲೆಯ ನಾಗಲುಪ್ಪಲಪಾಡು ಮಂಡಲಂ ಮಾಚವರಂನಲ್ಲಿ ಈ ದುರ್ಘಟನೆ ನಡೆದಿದೆ. ಮೃತರ ಪೈಕಿ ಐವರು ಮಹಿಳಾ ಕಾರ್ಮಿಕರಿದ್ದರೆ, ಮೂವರು ಪುರುಷ ಕಾರ್ಮಿಕರು. ದುರಂತದ […]

ಈ ಬಾರಿ ವಿದ್ಯುತ್ ಅವಘಡ: ಸುಟ್ಟು ಕರಕಲಾದ 8 ಕೃಷಿ ಕಾರ್ಮಿಕರು
ಸಾಧು ಶ್ರೀನಾಥ್​

Updated on: May 15, 2020 | 11:12 AM

ಹೈದರಾಬಾದ್: ಕಾರ್ಮಿಕರ ವಿಷಯದಲ್ಲಿ ಈ ಬಾರಿ ಆಂಧಪ್ರದೇಶದಿಂದ ಭಾರಿ ದಾರುಣ ಘಟನೆಯೊಂದು ವರದಿಯಾಗಿದೆ. ಮೆಣಿಸಿನ ಕಾಯಿ ತುಂಬಿಕೊಂಡು ಕಾರ್ಮಿಕರೊಂದಿಗೆ ತೆರಳುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್ ತಂತಿ ತಗುಲಿದೆ. ಆ ವೇಳೆ ವಿದ್ಯುತ್ ಹರಿದು 8 ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಟ್ರಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದದ್ದರಿಂದ ಘಟನೆ ಸಂಭವಿಸಿದೆ. ಪ್ರಕಾಶಂ ಜಿಲ್ಲೆಯ ನಾಗಲುಪ್ಪಲಪಾಡು ಮಂಡಲಂ ಮಾಚವರಂನಲ್ಲಿ ಈ ದುರ್ಘಟನೆ ನಡೆದಿದೆ.

ಮೃತರ ಪೈಕಿ ಐವರು ಮಹಿಳಾ ಕಾರ್ಮಿಕರಿದ್ದರೆ, ಮೂವರು ಪುರುಷ ಕಾರ್ಮಿಕರು. ದುರಂತದ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ತೀವ್ರ ಆಘಾತ ವ್ಯಕ್ತಪಡಿಸಿದ್ದು, ದುರ್ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳೀಯವಾಗಿ ಕೂಡಲೇ ಚಿಕಿತ್ಸೆ ನೀಡಲು ಅದೇಶಿಸಿದ್ದಾರೆ.

Published On - 10:42 am, Fri, 15 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us