Sign In

By signing in or creating an account, you agree with Associated Broadcasting Company's Terms & Conditions and Privacy Policy.

Mobile Battery Blast: ಬರೇಲಿಯಲ್ಲಿ ಮೊಬೈಲ್ ಬ್ಯಾಟರಿ ಸ್ಫೋಟ: 8 ತಿಂಗಳ ಮಗುವಿನ ದುರ್ಮರಣ

ಮೊಬೈಲ್ ಚಾರ್ಜಿಂಗ್​ನಲ್ಲಿರುವಾಗ ಫೋನಿನ ಬ್ಯಾಟರಿ ಸ್ಫೋಟಗೊಂಡಿದ್ದು, ಅಲ್ಲೇ ಇದ್ದ ಎಂಟು ತಿಂಗಳು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

Mobile Battery Blast: ಬರೇಲಿಯಲ್ಲಿ ಮೊಬೈಲ್ ಬ್ಯಾಟರಿ ಸ್ಫೋಟ: 8 ತಿಂಗಳ ಮಗುವಿನ ದುರ್ಮರಣ
Baby
Follow us
TV9 Web
| Updated By: ನಯನಾ ರಾಜೀವ್

Updated on: Sep 13, 2022 | 11:16 AM

ಮೊಬೈಲ್ ಚಾರ್ಜಿಂಗ್​ನಲ್ಲಿರುವಾಗ ಫೋನಿನ ಬ್ಯಾಟರಿ ಸ್ಫೋಟಗೊಂಡಿದ್ದು, ಅಲ್ಲೇ ಇದ್ದ ಎಂಟು ತಿಂಗಳು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಫೋನ್ ಅನ್ನು ಕೇವಲ ಆರು ತಿಂಗಳ ಹಿಂದಷ್ಟೇ ಖರೀದಿಸಲಾಗಿದೆ. ಈಗಾಗಲೇ ಬ್ಯಾಟರಿ ಊದಿಕೊಂಡಿರುವುದು ಗಮನಕ್ಕೆ ಬಂದಿತ್ತು, ಆದರೂ ಅದನ್ನು ಚಾರ್ಜಿಂಗ್​ಗೆ ಇಡಲಾಗಿತ್ತು.

ಪೊಲೀಸ್ ಅಧಿಕಾರಿಗಳ ಪ್ರಕಾರ, ಸ್ಫೋಟದ ಸಮಯದಲ್ಲಿ ಮಗುವಿನ ತಾಯಿ ಕುಸುಮ್ ಕಶ್ಯಪ್ ಕೋಣೆಯಲ್ಲಿ ಇರಲಿಲ್ಲ. ದೊಡ್ಡ ಶಬ್ದ ಕೇಳಿದ ನಂತರ ಅವರು ಅಲ್ಲಿ ಓಡಿಬಂದರು ಮತ್ತು ತನ್ನ ಇನ್ನೊಬ್ಬ ಮಗಳು ನಂದಿನಿಯ ಸಹಾಯಕ್ಕಾಗಿ ಕೂಗಿದಳು. ಮಗುವಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

‘ಪೋಷಕರ ನಿರ್ಲಕ್ಷ್ಯ’ ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ ಆದರೆ ಪೋಷಕರ ನಿರ್ಲಕ್ಷ್ಯವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಮಗುವಿನ ತಂದೆ ಸುನೀಲ್ ಕುಮಾರ್ ಕಶ್ಯಪ್, 30, ಕಾರ್ಮಿಕನಾಗಿದ್ದು, ವಿದ್ಯುತ್ ಸಂಪರ್ಕವಿಲ್ಲದೆ ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದಾರೆ.

ಅವರ ಕುಟುಂಬವು ಸೋಲಾರ್ ಪ್ಲೇಟ್ ಅನ್ನು ಬ್ಯಾಟರಿಗೆ ಹಾಗೂ ಮೊಬೈಲ್ ಫೋನ್‌ಗಳನ್ನು ಚಾರ್ಜ್ ಮಾಡಲು ಬಳಸುತ್ತದೆ. ಗೃಹಿಣಿಯಾಗಿರುವ ಪತ್ನಿ ಕುಸುಮ ಅವರು ತಮ್ಮ ಹೆಣ್ಣುಮಕ್ಕಳೊಂದಿಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಸುನೀಲ್ ಕೆಲಸಕ್ಕೆ ಹೋಗಿದ್ದರು.

ಊಟದ ನಂತರ, ಕುಸುಮ್ ತನ್ನ ಹೆಣ್ಣು ಮಕ್ಕಳನ್ನು ಪ್ರತ್ಯೇಕ ಕಡೆ ಮಲಗಿಸಿದ್ದರು, ಚಿಕ್ಕ ಮಗು ಮಲಗಿರುವ ಪಕ್ಕದಲ್ಲಿ ಫೋನ್ ಚಾರ್ಜಿಗ್​ ಹಾಕಲಾಗಿತ್ತು.

ನನ್ನ ಮೊಬೈಲ್ ಫೋನ್ ನನ್ನ ಮಗಳಿಗೆ ಮಾರಕವಾಗಬಹುದು ಎಂದು ನಾನು ಎಂದಿಗೂ ಯೋಚಿಸಲಿಲ್ಲ, ಇಲ್ಲದಿದ್ದರೆ ನಾನು ಅದನ್ನು ಅಲ್ಲಿ ಇಡುತ್ತಿರಲಿಲ್ಲ, ಎಂದು ಕಣ್ಣೀರು ಹಾಕಿದ್ದಾರೆ.

ಸುನೀಲ್ ಅವರ ಸಹೋದರ ಅಜಯ್ ಕುಮಾರ್, ಮಾತನಡಿ,ನಾವು ತುಂಬಾ ಬಡವರು, ಇನ್ನೂ ಕೀಪ್ಯಾಡ್ ಫೋನ್‌ಗಳನ್ನು ಬಳಸುತ್ತಿದ್ದೇವೆ. ಯುಎಸ್‌ಬಿ ಕೇಬಲ್ ಬಳಸಿ ಫೋನ್ ಚಾರ್ಜ್ ಆಗುತ್ತಿದೆ ಆದರೆ ಅಡಾಪ್ಟರ್ ಸಂಪರ್ಕಗೊಂಡಿಲ್ಲ, ಅದಕ್ಕಾಗಿಯೇ ಅದು ಸ್ಫೋಟಗೊಂಡಿದೆ.

ಖಾಸಗಿ ಆಸ್ಪತ್ರೆಯಲ್ಲಿ ನೇಹಾಳ ಚಿಕಿತ್ಸೆಗೆ ನನ್ನ ಸಹೋದರನ ಬಳಿ ಹೆಚ್ಚು ಹಣವಿರಲಿಲ್ಲ, ಇಲ್ಲದಿದ್ದರೆ ಆಕೆಯ ಜೀವ ಉಳಿಸಬಹುದಿತ್ತು.

ಫರೀದ್‌ಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಹರ್ವೀರ್ ಸಿಂಗ್ ಮಾತನಾಡಿ, ಮೊಬೈಲ್ ಸ್ಫೋಟದಿಂದ ಮಗು ಗಾಯಗೊಂಡಿರುವುದು ನಮ್ಮ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ