AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mobile Battery Blast: ಬರೇಲಿಯಲ್ಲಿ ಮೊಬೈಲ್ ಬ್ಯಾಟರಿ ಸ್ಫೋಟ: 8 ತಿಂಗಳ ಮಗುವಿನ ದುರ್ಮರಣ

ಮೊಬೈಲ್ ಚಾರ್ಜಿಂಗ್​ನಲ್ಲಿರುವಾಗ ಫೋನಿನ ಬ್ಯಾಟರಿ ಸ್ಫೋಟಗೊಂಡಿದ್ದು, ಅಲ್ಲೇ ಇದ್ದ ಎಂಟು ತಿಂಗಳು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

Mobile Battery Blast: ಬರೇಲಿಯಲ್ಲಿ ಮೊಬೈಲ್ ಬ್ಯಾಟರಿ ಸ್ಫೋಟ: 8 ತಿಂಗಳ ಮಗುವಿನ ದುರ್ಮರಣ
Baby
TV9 Web
| Edited By: |

Updated on: Sep 13, 2022 | 11:16 AM

Share

ಮೊಬೈಲ್ ಚಾರ್ಜಿಂಗ್​ನಲ್ಲಿರುವಾಗ ಫೋನಿನ ಬ್ಯಾಟರಿ ಸ್ಫೋಟಗೊಂಡಿದ್ದು, ಅಲ್ಲೇ ಇದ್ದ ಎಂಟು ತಿಂಗಳು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಫೋನ್ ಅನ್ನು ಕೇವಲ ಆರು ತಿಂಗಳ ಹಿಂದಷ್ಟೇ ಖರೀದಿಸಲಾಗಿದೆ. ಈಗಾಗಲೇ ಬ್ಯಾಟರಿ ಊದಿಕೊಂಡಿರುವುದು ಗಮನಕ್ಕೆ ಬಂದಿತ್ತು, ಆದರೂ ಅದನ್ನು ಚಾರ್ಜಿಂಗ್​ಗೆ ಇಡಲಾಗಿತ್ತು.

ಪೊಲೀಸ್ ಅಧಿಕಾರಿಗಳ ಪ್ರಕಾರ, ಸ್ಫೋಟದ ಸಮಯದಲ್ಲಿ ಮಗುವಿನ ತಾಯಿ ಕುಸುಮ್ ಕಶ್ಯಪ್ ಕೋಣೆಯಲ್ಲಿ ಇರಲಿಲ್ಲ. ದೊಡ್ಡ ಶಬ್ದ ಕೇಳಿದ ನಂತರ ಅವರು ಅಲ್ಲಿ ಓಡಿಬಂದರು ಮತ್ತು ತನ್ನ ಇನ್ನೊಬ್ಬ ಮಗಳು ನಂದಿನಿಯ ಸಹಾಯಕ್ಕಾಗಿ ಕೂಗಿದಳು. ಮಗುವಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

‘ಪೋಷಕರ ನಿರ್ಲಕ್ಷ್ಯ’ ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ ಆದರೆ ಪೋಷಕರ ನಿರ್ಲಕ್ಷ್ಯವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಮಗುವಿನ ತಂದೆ ಸುನೀಲ್ ಕುಮಾರ್ ಕಶ್ಯಪ್, 30, ಕಾರ್ಮಿಕನಾಗಿದ್ದು, ವಿದ್ಯುತ್ ಸಂಪರ್ಕವಿಲ್ಲದೆ ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದಾರೆ.

ಅವರ ಕುಟುಂಬವು ಸೋಲಾರ್ ಪ್ಲೇಟ್ ಅನ್ನು ಬ್ಯಾಟರಿಗೆ ಹಾಗೂ ಮೊಬೈಲ್ ಫೋನ್‌ಗಳನ್ನು ಚಾರ್ಜ್ ಮಾಡಲು ಬಳಸುತ್ತದೆ. ಗೃಹಿಣಿಯಾಗಿರುವ ಪತ್ನಿ ಕುಸುಮ ಅವರು ತಮ್ಮ ಹೆಣ್ಣುಮಕ್ಕಳೊಂದಿಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಸುನೀಲ್ ಕೆಲಸಕ್ಕೆ ಹೋಗಿದ್ದರು.

ಊಟದ ನಂತರ, ಕುಸುಮ್ ತನ್ನ ಹೆಣ್ಣು ಮಕ್ಕಳನ್ನು ಪ್ರತ್ಯೇಕ ಕಡೆ ಮಲಗಿಸಿದ್ದರು, ಚಿಕ್ಕ ಮಗು ಮಲಗಿರುವ ಪಕ್ಕದಲ್ಲಿ ಫೋನ್ ಚಾರ್ಜಿಗ್​ ಹಾಕಲಾಗಿತ್ತು.

ನನ್ನ ಮೊಬೈಲ್ ಫೋನ್ ನನ್ನ ಮಗಳಿಗೆ ಮಾರಕವಾಗಬಹುದು ಎಂದು ನಾನು ಎಂದಿಗೂ ಯೋಚಿಸಲಿಲ್ಲ, ಇಲ್ಲದಿದ್ದರೆ ನಾನು ಅದನ್ನು ಅಲ್ಲಿ ಇಡುತ್ತಿರಲಿಲ್ಲ, ಎಂದು ಕಣ್ಣೀರು ಹಾಕಿದ್ದಾರೆ.

ಸುನೀಲ್ ಅವರ ಸಹೋದರ ಅಜಯ್ ಕುಮಾರ್, ಮಾತನಡಿ,ನಾವು ತುಂಬಾ ಬಡವರು, ಇನ್ನೂ ಕೀಪ್ಯಾಡ್ ಫೋನ್‌ಗಳನ್ನು ಬಳಸುತ್ತಿದ್ದೇವೆ. ಯುಎಸ್‌ಬಿ ಕೇಬಲ್ ಬಳಸಿ ಫೋನ್ ಚಾರ್ಜ್ ಆಗುತ್ತಿದೆ ಆದರೆ ಅಡಾಪ್ಟರ್ ಸಂಪರ್ಕಗೊಂಡಿಲ್ಲ, ಅದಕ್ಕಾಗಿಯೇ ಅದು ಸ್ಫೋಟಗೊಂಡಿದೆ.

ಖಾಸಗಿ ಆಸ್ಪತ್ರೆಯಲ್ಲಿ ನೇಹಾಳ ಚಿಕಿತ್ಸೆಗೆ ನನ್ನ ಸಹೋದರನ ಬಳಿ ಹೆಚ್ಚು ಹಣವಿರಲಿಲ್ಲ, ಇಲ್ಲದಿದ್ದರೆ ಆಕೆಯ ಜೀವ ಉಳಿಸಬಹುದಿತ್ತು.

ಫರೀದ್‌ಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಹರ್ವೀರ್ ಸಿಂಗ್ ಮಾತನಾಡಿ, ಮೊಬೈಲ್ ಸ್ಫೋಟದಿಂದ ಮಗು ಗಾಯಗೊಂಡಿರುವುದು ನಮ್ಮ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ