Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢದ ಬಿಜಾಪುರದಲ್ಲಿ 8 ನಕ್ಸಲರ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲರು ಐಇಡಿ ಬಳಸಿ ತಮ್ಮ ವಾಹನವನ್ನು ಸ್ಫೋಟಿಸಿದ್ದರಿಂದ 8 ಜಿಲ್ಲಾ ಮೀಸಲು ಪಡೆ (DRG) ಯೋಧರು ಮತ್ತು ಒಬ್ಬ ಚಾಲಕ ಪ್ರಾಣ ಕಳೆದುಕೊಂಡಿದ್ದರು. ಇದಾದ ನಂತರ ಜನವರಿ 6ರಂದು ಗೃಹ ಸಚಿವ ಅಮಿತ್ ಶಾ 2026ರ ವೇಳೆಗೆ ನಕ್ಸಲಿಸಂ ಅನ್ನು ಕೊನೆಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ್ದರು. ಅದಕ್ಕೆ ಅನುಗುಣವಾಗಿ ಈ ಬೆಳವಣಿಗೆ ನಡೆದಿದೆ. ಇಂದು ಛತ್ತೀಸ್​ಗಢದಲ್ಲಿ 8 ನಕ್ಸಲರನ್ನು ಎನ್​ಕೌಂಟರ್ ಮಾಡಲಾಗಿದೆ.

ಛತ್ತೀಸ್‌ಗಢದ ಬಿಜಾಪುರದಲ್ಲಿ 8 ನಕ್ಸಲರ ಎನ್‌ಕೌಂಟರ್‌
Naxal Attack
Follow us
ಸುಷ್ಮಾ ಚಕ್ರೆ
|

Updated on: Feb 01, 2025 | 6:26 PM

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಶನಿವಾರ) ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 8 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿ ಮುಂದುವರೆದಿದೆ. 10 ನಕ್ಸಲರು ಪೊಲೀಸರ ಮುಂದೆ ಶರಣಾದ ಒಂದು ದಿನದ ಬಳಿಕ ಬಿಜಾಪುರದಲ್ಲಿ ಈ ಎನ್‌ಕೌಂಟರ್ ನಡೆದಿದೆ.

ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ 8.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ ವಿರೋಧಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಜಿಲ್ಲಾ ಮೀಸಲು ಪಡೆ (DRG), ವಿಶೇಷ ಕಾರ್ಯಪಡೆ (STF), ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಅದರ ಗಣ್ಯ ಘಟಕವಾದ CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಪಶ್ಚಿಮ ಬಸ್ತಾರ್ ವಿಭಾಗದ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ವರದಿಗಳ ನಂತರ ಶುಕ್ರವಾರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಇದನ್ನೂ ಓದಿ: ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರ ಪೊಲೀಸ್ ಕಸ್ಟಡಿ ನಾಳೆ ಅಂತ್ಯ; ಮುಂದೇನು?

ಈ ಜಿಲ್ಲೆಯಲ್ಲಿ ಒಟ್ಟು 6 ಲಕ್ಷ ರೂ. ಬಹುಮಾನ ಹೊಂದಿದ್ದ 10 ನಕ್ಸಲರು ಶರಣಾದ ಒಂದು ದಿನದ ನಂತರ ಈ ಎನ್‌ಕೌಂಟರ್ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯ 2016ರಲ್ಲೇ ನಿರ್ಧಾರ ಪ್ರಕಟಿಸಿದ್ದರು: ಗೋವಿಂದು
ಸಿಎಂ ಸಿದ್ದರಾಮಯ್ಯ 2016ರಲ್ಲೇ ನಿರ್ಧಾರ ಪ್ರಕಟಿಸಿದ್ದರು: ಗೋವಿಂದು
ಬಜೆಟ್ ರೂಪಿಸುವಾಗ ಉತ್ತರ-ದಕ್ಷಿಣ ತಾರತಮ್ಮ ಬೇಡ: ಮಲ್ಲಿಕಾರ್ಜುನ ಖರ್ಗೆ
ಬಜೆಟ್ ರೂಪಿಸುವಾಗ ಉತ್ತರ-ದಕ್ಷಿಣ ತಾರತಮ್ಮ ಬೇಡ: ಮಲ್ಲಿಕಾರ್ಜುನ ಖರ್ಗೆ
ಶಾಪಿಂಗ್ ಮಾಲ್ ಉದ್ಘಾಟಿಸಲು ಬಂದಿದ್ದ ಜನಪ್ರಿಯ ನಟಿ ಕೀರ್ತಿ ಸುರೇಶ್
ಶಾಪಿಂಗ್ ಮಾಲ್ ಉದ್ಘಾಟಿಸಲು ಬಂದಿದ್ದ ಜನಪ್ರಿಯ ನಟಿ ಕೀರ್ತಿ ಸುರೇಶ್
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದು 19ನೇ ಬಜೆಟ್ ಮಂಡಿಸಲಿದ್ದಾರೆ: ಯತೀಂದ್ರ
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದು 19ನೇ ಬಜೆಟ್ ಮಂಡಿಸಲಿದ್ದಾರೆ: ಯತೀಂದ್ರ
ಕೃಷಿಕ, ಮಹಿಳೆ, ಯುವಕರನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ: ವಿಜಯೇಂದ್ರ
ಕೃಷಿಕ, ಮಹಿಳೆ, ಯುವಕರನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ: ವಿಜಯೇಂದ್ರ
ಮುಸಲ್ಮಾನರಿಗೆ ಬಿರಿಯಾನಿ ಉಳಿದವರಿಗೆ ನೆಕ್ಕಲು ಉಪ್ಪಿನಕಾಯಿ: ನಿಖಿಲ್
ಮುಸಲ್ಮಾನರಿಗೆ ಬಿರಿಯಾನಿ ಉಳಿದವರಿಗೆ ನೆಕ್ಕಲು ಉಪ್ಪಿನಕಾಯಿ: ನಿಖಿಲ್
ದೇವೇಗೌಡರಿಗೆ ಸಿದ್ದರಾಮಯ್ಯ ಒಮ್ಮೆಯಾದರೂ ಕೃತಜ್ಞತೆ ಸಲ್ಲಿಸಿದರೆ? ವಿಶ್ವನಾಥ
ದೇವೇಗೌಡರಿಗೆ ಸಿದ್ದರಾಮಯ್ಯ ಒಮ್ಮೆಯಾದರೂ ಕೃತಜ್ಞತೆ ಸಲ್ಲಿಸಿದರೆ? ವಿಶ್ವನಾಥ
ಪುಂಡ ವಿದ್ಯಾರ್ಥಿಗಳ ಅಟ್ಟಾಡಿಸಿ ಲಾಠಿ ಬೀಸಿದ ಪೊಲೀಸರು, ವಿಡಿಯೋ ನೋಡಿ
ಪುಂಡ ವಿದ್ಯಾರ್ಥಿಗಳ ಅಟ್ಟಾಡಿಸಿ ಲಾಠಿ ಬೀಸಿದ ಪೊಲೀಸರು, ವಿಡಿಯೋ ನೋಡಿ
ಪಕ್ಷದ ನಾಯಕರು ಮೂಲತಃ ಕಾರ್ಯಕರ್ತರು ಅಂತ ಮರೆಯಬಾರದು: ರವಿ
ಪಕ್ಷದ ನಾಯಕರು ಮೂಲತಃ ಕಾರ್ಯಕರ್ತರು ಅಂತ ಮರೆಯಬಾರದು: ರವಿ
ಮೋದಿ ಬೆಂಗಾವಲು ವಾಹನ ರಿಹರ್ಸಲ್ ಮಾಡುತ್ತಿದ್ದ ರಸ್ತೆಯಲ್ಲಿ ಅಡ್ಡ ಬಂದ ಸೈಕಲ್
ಮೋದಿ ಬೆಂಗಾವಲು ವಾಹನ ರಿಹರ್ಸಲ್ ಮಾಡುತ್ತಿದ್ದ ರಸ್ತೆಯಲ್ಲಿ ಅಡ್ಡ ಬಂದ ಸೈಕಲ್