AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು

Parliament Budget Session: ಲೋಕಸಭಾ ಅಧಿವೇಶನದ ವೇಳೆ ಸ್ಪೀಕರ್ ಮೇಲೆ ಪೇಪರ್ ತೂರಿದ್ದ ವಿಪಕ್ಷಗಳ 8 ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬಜೆಟ್ ಅಧಿವೇಶನ ಮುಗಿಯುವವರೆಗೂ ಈ ಸಂಸದರನ್ನು ಸದನಕ್ಕೆ ಹಾಜರಾಗದಂತೆ ಅಮಾನತುಗೊಳಿಸಲಾಗಿದೆ. ಸಂಸದರಾದ ಕಿರಣ್ ರೆಡ್ಡಿ, ರಾಜಾ ವಾರಿಂಗ್, ಗುರ್ಜಿತ್ ಔಜಲಾ, ಹಿಬಿ ಈಡನ್ ಸೇರಿದಂತೆ 8 ಸಂಸದರು ಈ ಪಟ್ಟಿಯಲ್ಲಿದ್ದಾರೆ. ಇವರಲ್ಲಿ 7 ಸಂಸದರು ಕಾಂಗ್ರೆಸ್​​ನವರೇ ಆಗಿದ್ದಾರೆ. ಅಮಾನತುಗೊಳಿಸಿದ ನಂತರವೂ ಸ್ಪೀಕರ್ ಮೇಲೆ ಸಂಸದರು ಪೇಪರ್ ತೂರಿದ್ದರು.

ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು
Parliament Session Image Credit source: PTI
ಸುಷ್ಮಾ ಚಕ್ರೆ
|

Updated on: Feb 03, 2026 | 4:26 PM

Share

ನವದೆಹಲಿ, ಫೆಬ್ರವರಿ 3: ಲೋಕಸಭೆಯಲ್ಲಿ ಸ್ಪೀಕರ್ ಪೀಠದ ಮೇಲೆ ಕಾಗದಗಳನ್ನು ಎಸೆದಿದ್ದಕ್ಕಾಗಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿದೆ. ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದಕ್ಕಾಗಿ ರಾಜಾ ವಾರಿಂಗ್ ಸೇರಿದಂತೆ 8 ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ (Lok Sabha Session) ಅಮಾನತುಗೊಳಿಸಲಾಗಿದೆ. ಸದನದ ಕಾರ್ಯವಿಧಾನಗಳಿಗೆ ಅಡ್ಡಿಪಡಿಸಿದ ಮತ್ತು ಪೀಠದ ಕಡೆಗೆ ಕಾಗದಗಳನ್ನು ಎಸೆದ ಆರೋಪದ ಮೇಲೆ ಅಶಿಸ್ತಿನ ವರ್ತನೆಗಾಗಿ 8 ವಿರೋಧ ಪಕ್ಷದ ಸದಸ್ಯರನ್ನು ಲೋಕಸಭೆ ಸ್ಪೀಕರ್ ಅಮಾನತುಗೊಳಿಸಿದ್ದಾರೆ.

ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸ್ಪೀಕರ್ ಈ ನಡವಳಿಕೆಯನ್ನು ಸಂಸತ್ತಿನ ಶಿಷ್ಟಾಚಾರದ ಗಂಭೀರ ಉಲ್ಲಂಘನೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಅದರಲ್ಲೂ ವಿಶೇಷವಾಗಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಇಂತಹ ನಡವಳಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಈ ಅವ್ಯವಸ್ಥೆ ಮತ್ತು ಸ್ಪೀಕರ್ ಕಡೆಗೆ ಕಾಗದಗಳನ್ನು ಎಸೆದ ಘಟನೆಯ ಬಗ್ಗೆ ಲೋಕಸಭಾ ಸ್ಪೀಕರ್‌ಗೆ ಔಪಚಾರಿಕ ದೂರು ನೀಡುವುದಾಗಿ ಬಿಜೆಪಿ ಘೋಷಿಸಿತು.

ಇದನ್ನೂ ಓದಿ: ಲೋಕಸಭೆ ಅಧಿವೇಶನದಲ್ಲಿ ಗಣಿ ಮತ್ತು ಖನಿಜ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರ

ಅಮಾನತುಗೊಂಡ ಶಾಸಕರಲ್ಲಿ ಮಾಣಿಕಮ್ ಟ್ಯಾಗೋರ್, ಗುರ್ಜೀತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಕಿರಣ್ ಕುಮಾರ್ ರೆಡ್ಡಿ, ಎಸ್ ವೆಂಕಟೇಶನ್, ಹಿಬಿ ಈಡನ್, ಡೀನ್ ಕುರಿಯಾಕೋಸ್ ಮತ್ತು ಪ್ರಶಾಂತ್ ಪಡೋಲೆ ಸೇರಿದ್ದಾರೆ. ಈ ಸಂಸದರಲ್ಲಿ 7 ಮಂದಿ ಕಾಂಗ್ರೆಸ್ ಪಕ್ಷದವರಾಗಿದ್ದರೆ, ವೆಂಕಟೇಶನ್ ಮಾತ್ರ ಸಿಪಿಎಂನವರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ಸಂಬಂಧ ನಿರ್ಣಯ ಮಂಡಿಸಿದ ನಂತರ ಸಂಸದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಸಂಸದರು ತಮ್ಮ ಸಹ ಶಾಸಕರ ಅಮಾನತು ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್