AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ ಓದಿದ್ದು 8ನೇ ಕ್ಲಾಸ್ ಆದ್ರೂ, ಐಪಿಎಸ್ ಅಧಿಕಾರಿ ಎಂದು ಪೋಸ್ ಕೊಟ್ಟು 12ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ

ಓದಿದ್ದು 8ನೇ ತರಗತಿಯಾಗಿದ್ದರೂ ಐಪಿಎಸ್ ಅಧಿಕಾರಿ ಎಂದು ಸುಳ್ಳು ಹೇಳಿ ಮಹಿಳೆಯರಿಗೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 8ಕ್ಕೂ ಹೆಚ್ಚು ಮಹಿಳೆಯರ ಬಳಿ ಲಕ್ಷ ಲಕ್ಷ ರೂಪಾಯಿ ವಸೂಲಿ ಮಾಡಿ ವಂಚಿಸಿದ್ದಾನೆ ಎಂದು ದೆಹಲಿ ಪೊಲೀಸರು  ತಿಳಿಸಿದ್ದಾರೆ.

ಆತ ಓದಿದ್ದು 8ನೇ ಕ್ಲಾಸ್ ಆದ್ರೂ, ಐಪಿಎಸ್ ಅಧಿಕಾರಿ ಎಂದು ಪೋಸ್ ಕೊಟ್ಟು 12ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ
Vikas
TV9 Web
| Edited By: |

Updated on: Dec 20, 2022 | 8:13 AM

Share

ಓದಿದ್ದು 8ನೇ ತರಗತಿಯಾಗಿದ್ದರೂ ಐಪಿಎಸ್ ಅಧಿಕಾರಿ ಎಂದು ಸುಳ್ಳು ಹೇಳಿ ಮಹಿಳೆಯರಿಗೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 8ಕ್ಕೂ ಹೆಚ್ಚು ಮಹಿಳೆಯರ ಬಳಿ ಲಕ್ಷ ಲಕ್ಷ ರೂಪಾಯಿ ವಸೂಲಿ ಮಾಡಿ ವಂಚಿಸಿದ್ದಾನೆ ಎಂದು ದೆಹಲಿ ಪೊಲೀಸರು  ತಿಳಿಸಿದ್ದಾರೆ.  ವಿಕಾಸ್ ಗೌತಮ್ ಎಂಬಾತ ವಿಕಾಸ್ ಯಾದವ್ ಹೆಸರಿನಲ್ಲಿ ಟ್ವಿಟ್ಟರ್‌ (Twitter), ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ನಲ್ಲಿ ನಕಲಿ ಪ್ರೊಫೈಲ್‌ಗಳನ್ನು ಸೃಷ್ಟಿಸಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆತ ತನ್ನ ಪ್ರೊಫೈಲ್ ಅನ್ನು ಅಧಿಕೃತವಾಗಿ ಕಾಣುವಂತೆ ಮಾಡಲು, ಆತ ಕೆಂಪು ದೀಪ ಹೊಂದಿರುವ ಸರ್ಕಾರಿ ಕಾರಿನೊಂದಿಗೆ ಪೋಸ್ ನೀಡಿದ್ದ. ದೆಹಲಿಯ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯೆಯೊಬ್ಬರಿಗೆ ಮೋಸ ಮಾಡಿದಾಗ ವಂಚನೆ ಬೆಳಕಿಗೆ ಬಂದಿದೆ. ಮೊದಲು ಪರಿಚಯ ಮಾಡಿಕೊಂಡ ಈತ ಆನ್​ಲೈನ್​ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದ್ದಾನೆ, ನಂತರ ವೈದ್ಯೆ ಬಳಿಯಿಂದ 25 ಸಾವಿರ ರೂ. ಲಪಟಾಯಿಸಿದ್ದಾನೆ.

ನಂತರ ವೈದ್ಯೆಗೆ ತಾವು ಮೋಸ ಹೋಗಿರುವುದು ತಿಳಿದುಬಂದಿದೆ. ಆತ ಬೆದರಿಕೆ ಹಾಕಿದ ಹೊರತಾಗಿಯೂ ವೈದ್ಯೆ ಪೊಲೀಸರಲ್ಲಿ ದೂರು ದಾಖಲು ಮಾಡಿದಾಗ ಆತ ಸಿಕ್ಕಿಬಿದ್ದಿದ್ದು, 12ಕ್ಕೂ ಅಧಿಕ ಮಹಿಳೆಯರಿಗೆ ಮೋದ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: Matrimonial App fraud: ಮ್ಯಾಟ್ರಿಮೋನಿ ಆ್ಯಪ್ ವಂಚನೆ: ಕೇರಳ ಕುಟ್ಟಿಗಳ ಮಾತಿಗೆ ಮರುಳಾದ ಶಿಕ್ಷಕ, ಹಣದ ಜೊತೆಗೆ ಕೆಲಸವೂ ಕಳೆದುಕೊಂಡ

ಅಂತಿಮವಾಗಿ, ಅವನು ವಂಚಕನೆಂದು ವೈದ್ಯರ ದೂರಿನ ಆಧಾರದ ಮೇಲೆ, ಪೊಲೀಸರು ತಾಂತ್ರಿಕ ಕಣ್ಗಾವಲು ಆರಂಭಿಸಿ, ಅಂತಿಮವಾಗಿ ಆತನನ್ನು ಬಂಧಿಸಿದರು. ಈ ವೇಳೆ, ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು ಹತ್ತಾರು ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಕಾಸ್ ಗೌತಮ್ ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ ಎಂದು ದೆಹಲಿ ಪೊಲೀಸ್ ಅಧಿಕಾರಿ ಹರಿಂದರ್ ಸಿಂಗ್ ಹೇಳಿದ್ದು, ಆರೋಪಿ 8 ನೇ ತರಗತಿ ಉತ್ತೀರ್ಣರಾದ ನಂತರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೆಲ್ಡಿಂಗ್ ಕೋರ್ಸ್ ಮಾಡಿದ್ದಾರೆ. ವಿಕಾಸ್, ಉತ್ತರ ದೆಹಲಿಯ ಮುಖರ್ಜಿ ನಗರದ ರೆಸ್ಟೋರೆಂಟ್​ನಲ್ಲಿಯೂ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತಾನು ಕೆಲಸ ಮಾಡುತ್ತಿದ್ದ ಪ್ರದೇಶದಲ್ಲಿ ನಾಗರಿಕ ಸೇವೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದು, ಅವರನ್ನು ನೋಡಿ ಪ್ರಭಾವಗೊಂಡು ಐಪಿಎಸ್ ಅಧಿಕಾರಿಯಂತೆ ನಟಿಸುವಂತೆ ಆಲೋಚನೆ ಮಾಡಿದನು ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್