Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​ನಲ್ಲಿ ಮತ್ತೆ ಹಿಮಕುಸಿತ; 8 ಮಂದಿ ಸಾವು, ನೆರವಿಗೆ ಧಾವಿಸಿದ ಭಾರತೀಯ ಸೇನೆ

ಉತ್ತರಾಖಂಡ ಸಿಎಂ ಘಟನೆ ಬಗ್ಗೆ ಟ್ವೀಟ್ ಮಾಡಿದ್ದು, ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ. ಹಾಗೇ, ಗೃಹ ಸಚಿವರು ಕರೆ ಮಾಡಿ ಸ್ಥಳದ ಪರಿಸ್ಥಿತಿ ಬಗ್ಗೆ ವರದಿ ಪಡೆದಿದ್ದಾರೆ.

ಉತ್ತರಾಖಂಡ್​ನಲ್ಲಿ ಮತ್ತೆ ಹಿಮಕುಸಿತ; 8 ಮಂದಿ ಸಾವು, ನೆರವಿಗೆ ಧಾವಿಸಿದ ಭಾರತೀಯ ಸೇನೆ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Apr 24, 2021 | 1:21 PM

ಹಿಮಪಾತಕ್ಕೆ ಉತ್ತರಾಖಂಡ ಮತ್ತೊಮ್ಮೆ ನಲುಗಿದೆ. ಚಮೋಲಿ ಜಿಲ್ಲೆಯ ಇಂಡೋ -ಚೀನಾ ಗಡಿ ಶುಕ್ರವಾರ ಹಿಮಪಾತವಾಗಿ 8 ಮಂದಿ ಮೃತಪಟ್ಟಿದ್ದಾರೆ. ಸುಮ್ನಾದಲ್ಲಿ ಹಿಮನದಿ ಕುಸಿತದಿಂದ ಈ ಅವಘಡ ಸಂಭವಿಸಿದೆ. ಹೀಗೆ ಹಿಮಕುಸಿತ ಉಂಟಾದ ಸ್ಥಳದಲ್ಲಿ ಸುಮ್ನಾ-ರಿಮ್​ಕಿಮ್​ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಹಲವು ಕಾರ್ಮಿಕರು ಈ ಕೆಲಸದಲ್ಲಿ ತೊಡಗಿಕೊಂಡಿದ್ದರು.

ಹಿಮಕುಸಿತವಾದ ಕೂಡಲೇ ಸ್ಥಳಕ್ಕೆ ಧಾವಿಸಿ, ಕಾರ್ಯಪ್ರವೃತ್ತರಾದ ಭಾರತೀಯ ಸೇನೆ ಸೈನಿಕರು ಸುಮಾರು 430 ಜನರನ್ನು ರಕ್ಷಿಸಿದೆ. ಈ ವೇಳೆ 8 ಮೃತದೇಹಗಳು ಸಿಕ್ಕಿವೆ. 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆರ್ಮಿ ಕ್ಯಾಂಪ್​​ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜೋಶಿಮಠ್​ದ ಗಡಿ ಮಾರ್ಗ ತಂಡಗಳು ಭಪ್ಕುಂಡ್​ದಿಂದ ಸುಮ್ನಾವರೆಗೆ ಸ್ಥಳ ತೆರವುಕಾರ್ಯ ನಡೆಸುತ್ತಿದ್ದು, ಅದಿನ್ನೂ ಮುಗಿದಿಲ್ಲ. ಕಳೆದ ನಾಲ್ಕೈದು ದಿನಗಳಿಂದಲೂ ಇಲ್ಲಿ ಸಿಕ್ಕಾಪಟೆ ಮಳೆ, ಸಣ್ಣಪ್ರಮಾಣದ ಹಿಮಪಾತ ಆಗುತ್ತಲೇ ಇತ್ತು. ನಿನ್ನೆ ದೊಡ್ಡಪ್ರಮಾಣದಲ್ಲಿ ಹಿಮನದಿ ಕುಸಿದು 8 ಜನರನ್ನು ಬಲಿಪಡೆದಿದೆ. ಗೃಹಸಚಿವರರಿಂದ ನೆರವಿನ ಭರವಸೆ

ಉತ್ತರಾಖಂಡ ಸಿಎಂ ಘಟನೆ ಬಗ್ಗೆ ಟ್ವೀಟ್ ಮಾಡಿದ್ದು, ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ. ಹಾಗೇ, ಗೃಹ ಸಚಿವರು ಕರೆ ಮಾಡಿ ಸ್ಥಳದ ಪರಿಸ್ಥಿತಿ ಬಗ್ಗೆ ವರದಿ ಪಡೆದಿದ್ದಾರೆ. ಎಲ್ಲ ರೀತಿಯ ಸಹಾಯ ಮಾಡುವ ಭರವಸೆಯನ್ನೂ ನೀಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಹಿಮಪಾತ, ಹಿಮಕುಸಿತ ಹೊಸದಲ್ಲ. ಫೆಬ್ರವರಿಯಲ್ಲೂ ಸಹ ಭೀಕರವಾದ ಹಿಮನದಿ ಕುಸಿತವಾಗಿ, 136 ಮಂದಿ ಮೃತಪಟ್ಟಿದ್ದರು. ಆಗಲೂ ಸಹ ಇದೇ ಚಮೋಲಿ ಜಿಲ್ಲೆಯಲ್ಲೇ ಅವಘಡ ಸಂಭವಿಸಿತ್ತು.

ಇದನ್ನೂ ಓದಿ: Uttarakhand Glacier Burst ಸಂಕಷ್ಟದಲ್ಲಿರುವ ಉತ್ತರಾಖಂಡ್​ ಜನರಿಗೆ ಯಾವುದೇ ಸಹಾಯ ಮಾಡಲು ಸಿದ್ಧ: ದೆಹಲಿ ಸಿಎಂ ಟ್ವೀಟ್​

ಮಧ್ಯ ಪ್ರದೇಶದ ಕಾಂಗ್ರೆಸ್​ ಶಾಸಕಿ, ಉತ್ತರ ಪ್ರದೇಶದ ಇಬ್ಬರು ಬಿಜೆಪಿ ಶಾಸಕರು ಕೊರೊನಾ ಸೋಂಕಿಗೆ ಬಲಿ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ