AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿನ ಹೊಲದಲ್ಲಿ 8 ವರ್ಷದ ಬಾಲಕಿಯ ಶವ ಪತ್ತೆ

ಎಂಟು ವೈದ್ಯರೊಡನೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅವಳ ಕುತ್ತು ಹಿಸುಕುವ ಮೂಲಕ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಅತ್ಯಾಚಾರದ ಕುರಿತಾಗಿ ಯಾವುದೇ ದೃಢೀಕರಣ ಕಂಡು ಬಂದಿಲ್ಲ ಎಂದು ಖೇರಿಯ ಪೊಲೀಸ್​ ಅಧಿಕಾರಿ ವಿಜಯ್​ ಧುಲ್​ ಹೇಳಿಕೆ ನೀಡಿದ್ದಾರೆ.

ಕಬ್ಬಿನ ಹೊಲದಲ್ಲಿ 8 ವರ್ಷದ ಬಾಲಕಿಯ ಶವ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Updated By: shruti hegde|

Updated on:Jun 22, 2021 | 12:55 PM

Share

ಲಕ್ನೋ: 8 ವರ್ಷದ ಮುಗ್ಧ ಬಾಲಕಿಯನ್ನು ಹತ್ಯೆ ಮಾಡಿದ ಘಟನೆ ಭಾನುವಾರ ನಡೆದಿದೆ. ಲಕ್ನೋದಿಂದ 130 ಕಿಲೋ ಮೀಟರ್​ ದೂರದಲ್ಲಿರುವ ಖೇರಿ ಜಿಲ್ಲೆಯ ಹಳ್ಳಿಯೊಂದರ ಕಬ್ಬಿನ ಹೊಲದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆಕೆಯ ಮೈ ಮೇಲಿದ್ದ ಗಾಯದ ಆಧಾರದ ಮೆಲೆ ಅತ್ಯಾಚಾರ ಮಾಡಿ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬ ಶಂಕೆ ಮೂಡಿದೆ.

ಬಾಲಕಿ ಧರಿಸಿದ್ದ ಬಟ್ಟೆಯಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಅತ್ಯಾಚಾರ ಮಾಡಿರುವ ಶಂಕೆ ಇದೆ. ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೊಲದಲ್ಲಿ ಆಡುಗಳನ್ನು ಮೇಯಿಸಲು ಬಾಲಕಿ ಮತ್ತು ಅಜ್ಜಿ ಹೋಗಿದ್ದರು. ಮಧ್ಯಾಹ್ನದ ವೇಳೆಗೆ, ನಾನು ಮನೆಗೆ ಹೋಗುತ್ತೇನೆ ಎಂದು ಅಲ್ಲಿಂದ ಬಾಲಕಿ ಹೊರಟಿದ್ದಾಳೆ. ಸಂಜೆಯ ವೇಳೆಗೆ ಅಜ್ಜಿ ಮನೆಗೆ ಬರುವಷ್ಟರಲ್ಲಿ ಬಾಲಕಿ ಮನೆಯಲ್ಲಿ ಇರಲಿಲ್ಲ. ಆತಂಕಗೊಂಡ ಕುಟುಂಬವು ಅವಳನ್ನು ಹುಡುಕಲು ಪ್ರಾರಂಭಿಸಿದೆ.

ಆಡು ಮೇಯಿಸಲು ನನ್ನೊಂದಿಗೆ ಬಂದಿದ್ದ ಬಾಲಕಿ, ನನಗೆ ಆಯಾಸವಾಗುತ್ತಿದೆ ನಾನು ಮನೆಗೆ ಹೋಗುತ್ತೇನೆ ಎಂದು ಅಲ್ಲಿಂದ ಹೊರಟಳು. ನಾನು ಆಡು ಮೇಯಿಸಿಕೊಂಡು ಬರುತ್ತೇನೆ ಎಂದು ಹೇಳಿದೆ. ಸಂಜೆಯ ವೇಳೆಗೆ ನಾನು ಮನೆಗೆ ಬರುವಷ್ಟರಲ್ಲಿ ಆಕೆ ಮನೆಗೆ ಇನ್ನೂ ತಲುಪಿರಲಿಲ್ಲ ಎಂದು ಗೊತ್ತಾಯಿತು. ಗ್ರಾಮದಲ್ಲಿ ಎಲ್ಲೋ ಆಟವಾಡುತ್ತಿರುತ್ತಾಳೆ ಎಂದು ಭಾವಿಸಿ ಹುಡುಕಲು ಪ್ರಾರಂಭಿಸಿದೆವು. ಆದರೆ ಅವಳ ಮೃತದೇಹವು ಪತ್ತೆಯಾಗಿದೆ. ಅವಳ ಕಾಲುಗಳನ್ನು ಕಟ್ಟಿಹಾಕಲಾಗಿದೆ ಎಂದು ಬಾಲಕಿಯ ಅಜ್ಜಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಎಂಟು ವೈದ್ಯರೊಡನೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅವಳ ಕುತ್ತು ಹಿಸುಕುವ ಮೂಲಕ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಅತ್ಯಾಚಾರದ ಕುರಿತಾಗಿ ಯಾವುದೇ ದೃಢೀಕರಣ ಕಂಡು ಬಂದಿಲ್ಲ ಎಂದು ಖೇರಿಯ ಪೊಲೀಸ್​ ಅಧಿಕಾರಿ ವಿಜಯ್​ ಧುಲ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ಒತ್ತೆಹಣಕ್ಕಾಗಿ ಅಪಹೃತ ಬಾಲಕನ ಬರ್ಬರ ಹತ್ಯೆ: ನಂಜಾಪುರದಲ್ಲಿ ಶವ ಪತ್ತೆ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆ

Published On - 12:51 pm, Tue, 22 June 21

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ