AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿನ ಹೊಲದಲ್ಲಿ 8 ವರ್ಷದ ಬಾಲಕಿಯ ಶವ ಪತ್ತೆ

ಎಂಟು ವೈದ್ಯರೊಡನೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅವಳ ಕುತ್ತು ಹಿಸುಕುವ ಮೂಲಕ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಅತ್ಯಾಚಾರದ ಕುರಿತಾಗಿ ಯಾವುದೇ ದೃಢೀಕರಣ ಕಂಡು ಬಂದಿಲ್ಲ ಎಂದು ಖೇರಿಯ ಪೊಲೀಸ್​ ಅಧಿಕಾರಿ ವಿಜಯ್​ ಧುಲ್​ ಹೇಳಿಕೆ ನೀಡಿದ್ದಾರೆ.

ಕಬ್ಬಿನ ಹೊಲದಲ್ಲಿ 8 ವರ್ಷದ ಬಾಲಕಿಯ ಶವ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 22, 2021 | 12:55 PM

Share

ಲಕ್ನೋ: 8 ವರ್ಷದ ಮುಗ್ಧ ಬಾಲಕಿಯನ್ನು ಹತ್ಯೆ ಮಾಡಿದ ಘಟನೆ ಭಾನುವಾರ ನಡೆದಿದೆ. ಲಕ್ನೋದಿಂದ 130 ಕಿಲೋ ಮೀಟರ್​ ದೂರದಲ್ಲಿರುವ ಖೇರಿ ಜಿಲ್ಲೆಯ ಹಳ್ಳಿಯೊಂದರ ಕಬ್ಬಿನ ಹೊಲದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆಕೆಯ ಮೈ ಮೇಲಿದ್ದ ಗಾಯದ ಆಧಾರದ ಮೆಲೆ ಅತ್ಯಾಚಾರ ಮಾಡಿ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬ ಶಂಕೆ ಮೂಡಿದೆ.

ಬಾಲಕಿ ಧರಿಸಿದ್ದ ಬಟ್ಟೆಯಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಅತ್ಯಾಚಾರ ಮಾಡಿರುವ ಶಂಕೆ ಇದೆ. ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೊಲದಲ್ಲಿ ಆಡುಗಳನ್ನು ಮೇಯಿಸಲು ಬಾಲಕಿ ಮತ್ತು ಅಜ್ಜಿ ಹೋಗಿದ್ದರು. ಮಧ್ಯಾಹ್ನದ ವೇಳೆಗೆ, ನಾನು ಮನೆಗೆ ಹೋಗುತ್ತೇನೆ ಎಂದು ಅಲ್ಲಿಂದ ಬಾಲಕಿ ಹೊರಟಿದ್ದಾಳೆ. ಸಂಜೆಯ ವೇಳೆಗೆ ಅಜ್ಜಿ ಮನೆಗೆ ಬರುವಷ್ಟರಲ್ಲಿ ಬಾಲಕಿ ಮನೆಯಲ್ಲಿ ಇರಲಿಲ್ಲ. ಆತಂಕಗೊಂಡ ಕುಟುಂಬವು ಅವಳನ್ನು ಹುಡುಕಲು ಪ್ರಾರಂಭಿಸಿದೆ.

ಆಡು ಮೇಯಿಸಲು ನನ್ನೊಂದಿಗೆ ಬಂದಿದ್ದ ಬಾಲಕಿ, ನನಗೆ ಆಯಾಸವಾಗುತ್ತಿದೆ ನಾನು ಮನೆಗೆ ಹೋಗುತ್ತೇನೆ ಎಂದು ಅಲ್ಲಿಂದ ಹೊರಟಳು. ನಾನು ಆಡು ಮೇಯಿಸಿಕೊಂಡು ಬರುತ್ತೇನೆ ಎಂದು ಹೇಳಿದೆ. ಸಂಜೆಯ ವೇಳೆಗೆ ನಾನು ಮನೆಗೆ ಬರುವಷ್ಟರಲ್ಲಿ ಆಕೆ ಮನೆಗೆ ಇನ್ನೂ ತಲುಪಿರಲಿಲ್ಲ ಎಂದು ಗೊತ್ತಾಯಿತು. ಗ್ರಾಮದಲ್ಲಿ ಎಲ್ಲೋ ಆಟವಾಡುತ್ತಿರುತ್ತಾಳೆ ಎಂದು ಭಾವಿಸಿ ಹುಡುಕಲು ಪ್ರಾರಂಭಿಸಿದೆವು. ಆದರೆ ಅವಳ ಮೃತದೇಹವು ಪತ್ತೆಯಾಗಿದೆ. ಅವಳ ಕಾಲುಗಳನ್ನು ಕಟ್ಟಿಹಾಕಲಾಗಿದೆ ಎಂದು ಬಾಲಕಿಯ ಅಜ್ಜಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಎಂಟು ವೈದ್ಯರೊಡನೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅವಳ ಕುತ್ತು ಹಿಸುಕುವ ಮೂಲಕ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಅತ್ಯಾಚಾರದ ಕುರಿತಾಗಿ ಯಾವುದೇ ದೃಢೀಕರಣ ಕಂಡು ಬಂದಿಲ್ಲ ಎಂದು ಖೇರಿಯ ಪೊಲೀಸ್​ ಅಧಿಕಾರಿ ವಿಜಯ್​ ಧುಲ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ಒತ್ತೆಹಣಕ್ಕಾಗಿ ಅಪಹೃತ ಬಾಲಕನ ಬರ್ಬರ ಹತ್ಯೆ: ನಂಜಾಪುರದಲ್ಲಿ ಶವ ಪತ್ತೆ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆ

Published On - 12:51 pm, Tue, 22 June 21

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು