AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ಎಲೆಕ್ಟ್ರಾನಿಕ್ ವಾಹನದ  ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧ ಸಾವು, ಮೂವರಿಗೆ ಗಾಯ

ನಾವು ಘಟನೆಗೆ ತೀವ್ರವಾಗಿ ವಿಷಾದಿಸುತ್ತೇವೆ ಮತ್ತು ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ ಎಂದು ಪ್ಯೂರ್ ಇವಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ತೆಲಂಗಾಣದಲ್ಲಿ ಎಲೆಕ್ಟ್ರಾನಿಕ್ ವಾಹನದ  ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧ ಸಾವು, ಮೂವರಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Apr 21, 2022 | 9:22 PM

Share

ಹೈದರಾಬಾದ್: ತೆಲಂಗಾಣದ (Telangana) ನಿಜಾಮಾಬಾದ್ ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಚಾರ್ಜ್‌ನಲ್ಲಿ ಇರಿಸಲಾಗಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನ (electric scooter)  ಡಿಟ್ಯಾಚೇಬಲ್ ಬ್ಯಾಟರಿ (detachable battery) ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ 80 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಬ್ಯಾಟರಿ ಚಾರ್ಜ್ ಮಾಡುವಾಗ ಈ ಘಟನೆ ನಡೆದಿದೆ. ರಾಮಸ್ವಾಮಿ ಎಂಬ ವ್ಯಕ್ತಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಇವರನ್ನು ರಕ್ಷಿಸಲು ಯತ್ನಿದ್ದ ಮಗ ಪ್ರಕಾಶ್, ಪತ್ನಿ ಕಮಲಮ್ಮ ಮತ್ತು ಸೊಸೆ ಕೃಷ್ಣವೇಣಿ ಗಾಯಗೊಂಡಿದ್ದಾರೆ. ಪ್ರಕಾಶ್ ಒಂದು ವರ್ಷದಿಂದ ಇವಿ ಸ್ಕೂಟರ್ ಬಳಸುತ್ತಿದ್ದರು ಎನ್ನಲಾಗಿದೆ. ಪ್ಯೂರ್ ಇವಿ ತಯಾರಕರ ವಿರುದ್ಧ ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ. “ನಾವು ಘಟನೆಗೆ ತೀವ್ರವಾಗಿ ವಿಷಾದಿಸುತ್ತೇವೆ ಮತ್ತು ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ ಎಂದು ಪ್ಯೂರ್ ಇವಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಬಳಕೆದಾರರು ತಮ್ಮ ಡೇಟಾಬೇಸ್‌ನಲ್ಲಿ ಈ ವಾಹನ ಅಥವಾ ಸೇವೆಯ ಮಾರಾಟದ ಯಾವುದೇ ದಾಖಲೆಯನ್ನು ಹೊಂದಿಲ್ಲ ಮತ್ತು ವಾಹನವನ್ನು ಸೆಕೆಂಡ್ ಹ್ಯಾಂಡ್ ಮಾರಾಟದ ಮೂಲಕ ಖರೀದಿಸಲಾಗಿದೆಯೇ ಎಂದು ಪರಿಶೀಲಿಸುತ್ತಿದೆ ಎಂದು ಪ್ಯೂರ್ ಇವಿ ಹೇಳಿದೆ.

ಸರ್ಕಾರವು ಎಲೆಕ್ಟ್ರಾನಿಕ್ ವಾಹನದ ಕಲ್ಪನೆಯನ್ನು ಸಕ್ರಿಯವಾಗಿ ಪ್ರಚಾರ ಮಾಡುತ್ತಿರುವ ಸಮಯದಲ್ಲಿ ಈ ವಾಹನಗಳ ಬಗ್ಗೆ ಹೆಚ್ಚಿನ ಕಾಳಜಿ ಹೆಚ್ಚುತ್ತಿದೆ. ಅದೇ ವೇಳೆ ಬೆಂಕಿಯಿಂದ ಅಪಘಾತಗಳು ಸಂಭವಿಸಿರುವ ಅನೇಕ ಘಟನೆಗಳು ವರದಿಯಾಗಿವೆ.

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಇಂದು ಇವಿಗಳನ್ನು ಒಳಗೊಂಡಿರುವ ಅಪಘಾತಗಳ ಬಗ್ಗೆ ತಜ್ಞರ ಸಮಿತಿಯು ತನಿಖೆ ನಡೆಸಲಿದೆ ಮತ್ತು ಭಾರೀ ದಂಡದ ಬಗ್ಗೆ ಮಾತನಾಡಲಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಕಳೆದ ಎರಡು ತಿಂಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಹಲವಾರು ಅವಘಡಗಳು ಬೆಳಕಿಗೆ ಬಂದಿವೆ. ಈ ಘಟನೆಗಳಲ್ಲಿ ಕೆಲವರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿರುವುದು ಅತ್ಯಂತ ದುರದೃಷ್ಟಕರ. ಈ ಘಟನೆಗಳ ಬಗ್ಗೆ ತನಿಖೆ ನಡೆಸಲು ಮತ್ತು ಪರಿಹಾರ ಕ್ರಮಗಳ ಕುರಿತು ಶಿಫಾರಸುಗಳನ್ನು ಮಾಡಲು ನಾವು ತಜ್ಞರ ಸಮಿತಿಯನ್ನು ರಚಿಸಿದ್ದೇವೆ ಎಂದು ಕೇಂದ್ರ ಸಚಿವರು ಟ್ವೀಟ್‌ಗಳ ಸರಣಿಯಲ್ಲಿ ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಓಲಾ ಇ-ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಸರ್ಕಾರಿ ತನಿಖೆಯನ್ನು ಪ್ರಚೋದಿಸಿತು. ಸ್ಟಾರ್ಟ್‌ಅಪ್ ಪ್ಯೂರ್ ಇವಿಯ ಸ್ಕೂಟರ್ ಕೂಡ ಹೊತ್ತಿ ಉರಿದಿದೆ. ಒಕಿನಾವಾ ಆಟೋಟೆಕ್ ಪ್ರೈವೇಟ್ ಬೈಕ್‌ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಕಂಪನಿಗಳು ಹೇಳಿವೆ.

ಇದನ್ನೂ ಓದಿ: ಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆ, ಮೋದಿ ಸರ್ಕಾರ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅಳವಡಿಸಿಕೊಂಡಿದೆ: ಅಮಿತ್ ಶಾ

Published On - 9:05 pm, Thu, 21 April 22

Follow Us
Web contact
Web contact

TV9 Kannada

Read More