AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jal Jeevan Mission ‘ಕೇಂದ್ರ ಸರ್ಕಾರದ ಜಲ್ ಜೀವನ್ ಯೋಜನೆಯಡಿ 8.3 ಕೋಟಿ ಗ್ರಾಮೀಣ ಮನೆಗಳು ಪೈಪ್ ನೀರು ಸಂಪರ್ಕ ಹೊಂದಿವೆ’

ಮೋದಿ ಸರ್ಕಾರದ ಬೃಹತ್ ಯೋಜನೆಗಳಲ್ಲೊಂದಾದ ಜಲ್ ಜೀವನ್ ಮಿಷನ್, 2019 ರಲ್ಲಿ ಆರಂಭವಾಗಿದ್ದು 2024 ರ ವೇಳೆಗೆ ಪ್ರತಿ ಗ್ರಾಮೀಣ ಮನೆಗೂ ನಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಗುರಿ ಹೊಂದಿದೆ.

Jal Jeevan Mission ‘ಕೇಂದ್ರ ಸರ್ಕಾರದ ಜಲ್ ಜೀವನ್ ಯೋಜನೆಯಡಿ 8.3 ಕೋಟಿ ಗ್ರಾಮೀಣ ಮನೆಗಳು ಪೈಪ್ ನೀರು ಸಂಪರ್ಕ ಹೊಂದಿವೆ’
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 12, 2021 | 11:39 AM

Share

ದೆಹಲಿ: ಸರಿಸುಮಾರ 8.3 ಕೋಟಿ ಗ್ರಾಮೀಣ ಕುಟುಂಬಗಳು,ಅಥವಾ ದೇಶದ 19.2 ಕೋಟಿ ಗ್ರಾಮೀಣ ಕುಟುಂಬಗಳ ಶೇ 43ರಷ್ಟು ಕುಟುಂಬಗಳು, ಈಗ ಪ್ರಮುಖ ಜಲ್ ಜೀವನ್ ಮಿಷನ್ (Jal Jeevan Mission) ಅಡಿಯಲ್ಲಿ ಕುಡಿಯುವ ಪೈಪ್ ನೀರಿನ  ಸಂಪರ್ಕವನ್ನು ಹೊಂದಿವೆ. ಆದರೆ ಕಳಪೆ ಆರೋಗ್ಯ ಫಲಿತಾಂಶಗಳನ್ನು ಹೊಂದಿರುವ ಕೆಲವು ದೊಡ್ಡ ರಾಜ್ಯಗಳು ವ್ಯಾಪ್ತಿಯನ್ನು ವಿಸ್ತರಿಸಲು ನಿಧಾನವಾಗಿವೆ ಎಂದು ಅಧಿಕೃತ ಡೇಟಾ ಹೇಳಿದೆ. ಮೋದಿ ಸರ್ಕಾರದ ಬೃಹತ್ ಯೋಜನೆಗಳಲ್ಲೊಂದಾದ ಜಲ್ ಜೀವನ್ ಮಿಷನ್ 2019 ರಲ್ಲಿ ಆರಂಭವಾಗಿದ್ದು 2024 ರ ವೇಳೆಗೆ ಪ್ರತಿ ಗ್ರಾಮೀಣ ಮನೆಗೂ ನಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಗುರಿ ಹೊಂದಿದೆ. ವಿಶ್ವಸಂಸ್ಥೆಯ 17 ಸಮರ್ಥನೀಯ ಅಭಿವೃದ್ಧಿ ಗುರಿಗಳು ಅಥವಾ ಎಸ್‌ಡಿಜಿಗಳಲ್ಲಿ ಶುದ್ಧ ನೀರಿನ ಲಭ್ಯತೆಯೂ ಒಂದಾಗಿದೆ. ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇಲ್ಲಿಯವರೆಗೆ ಶೇ 100 ವ್ಯಾಪ್ತಿಯೊಂದಿಗೆ ಅಗ್ರಸ್ಥಾನದಲ್ಲಿವೆ ಎಂದು ಡೇಟಾ ತೋರಿಸುತ್ತದೆ. ಅವುಗಳೆಂದರೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಾದ್ರಾ ಮತ್ತು ನಾಗರ್ ಹವೇಲಿ, ಗೋವಾ, ತೆಲಂಗಾಣ, ಪುದುಚೇರಿ ಮತ್ತು ಹರ್ಯಾಣ. ನಿಗದಿಗಿಂತ ಮುಂಚಿತವಾಗಿ ಗುರಿಯನ್ನು ಸಾಧಿಸಿದ ಇತ್ತೀಚಿನ ರಾಜ್ಯವಾಗಿದೆ ಹರ್ಯಾಣ.

ಮಿಷನ್‌ನ ಗಡುವು ಎರಡು ವರ್ಷಗಳಿಗಿಂತಲೂ ದೂರವಿದ್ದರೂ ಕೆಲವು ದೊಡ್ಡ ರಾಜ್ಯಗಳು ಒಟ್ಟು ಗ್ರಾಮೀಣ ಕುಟುಂಬಗಳ ಕಾಲು ಭಾಗಕ್ಕಿಂತ ಕಡಿಮೆ ವ್ಯಾಪ್ತಿಯನ್ನು ಪಡೆಯಲು ಸಾಧ್ಯವಾಗಿದೆ ಎಂದು ಡೇಟಾ ತೋರಿಸುತ್ತದೆ.

ಅವುಗಳಲ್ಲಿ ಉತ್ತರ ಪ್ರದೇಶವು ತನ್ನ 2.64 ಕೋಟಿ ಗ್ರಾಮೀಣ ಕುಟುಂಬಗಳಲ್ಲಿ ಇದುವರೆಗೆ ಶೇ12.74 ರಷ್ಟು ಮಾತ್ರ ಒಳಗೊಂಡಿದೆ. ದೇಶದ ಅತ್ಯಂತ ಒಣ ಭಾಗಗಳಲ್ಲಿ ಒಂದಾದ ಬುಂದೇಲ್‌ಖಂಡ್‌ನಲ್ಲಿ ನೀರಿನ ಸಂಪರ್ಕವನ್ನು ವಿಸ್ತರಿಸಲು ರಾಜ್ಯವು ದೊಡ್ಡ ಪ್ರಮಾಣದ ಎಂಜಿನಿಯರಿಂಗ್ ಯೋಜನೆಯನ್ನು ರೂಪಿಸಿದೆ.

ಒಟ್ಟಾರೆ ಮನೆಗಳ ವ್ಯಾಪ್ತಿಯಲ್ಲಿ, ಉತ್ತರ ಪ್ರದೇಶವು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಲ್ಲಿ ನಿಧಾನವಾಗಿದೆ.

ಭಾರತದ ಒಟ್ಟಾರೆ ಆರೋಗ್ಯ ನಿಯತಾಂಕಗಳನ್ನು ಸುಧಾರಿಸಲು ಈ ರಾಜ್ಯವು ಪ್ರಮುಖವಾಗಿದ್ದು, ವಿಶೇಷವಾಗಿ ಮಕ್ಕಳಲ್ಲಿ, ಏಕೆಂದರೆ ಇದು ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾಗಿದೆ. ಜಲ ಜೀವನ ಮಿಷನ್ ನಡಿಯಲ್ಲಿ ಬುಂದೇಲ್ ಖಂಡದಲ್ಲಿ 32 ಯೋಜನೆಗಳ ಅಡಿಯಲ್ಲಿ 467 ಪೈಪ್ ಕುಡಿಯುವ ನೀರಿನ ಯೋಜನೆಗಳಿವೆ. ಇವುಗಳಲ್ಲಿ 43 ಮೇಲ್ಮೈ ನೀರು ಆಧಾರಿತ ಯೋಜನೆಗಳು ಮತ್ತು 424 ಅಂತರ್ಜಲ ಆಧಾರಿತವಾಗಿವೆ.

ಇದನ್ನೂ ಓದಿ: Coronavirus cases in India ಭಾರತದಲ್ಲಿ14,313 ಹೊಸ ಕೊವಿಡ್ ಪ್ರಕರಣ ಪತ್ತೆ,181 ಮಂದಿ ಸಾವು

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು