AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jal Jeevan Mission ‘ಕೇಂದ್ರ ಸರ್ಕಾರದ ಜಲ್ ಜೀವನ್ ಯೋಜನೆಯಡಿ 8.3 ಕೋಟಿ ಗ್ರಾಮೀಣ ಮನೆಗಳು ಪೈಪ್ ನೀರು ಸಂಪರ್ಕ ಹೊಂದಿವೆ’

ಮೋದಿ ಸರ್ಕಾರದ ಬೃಹತ್ ಯೋಜನೆಗಳಲ್ಲೊಂದಾದ ಜಲ್ ಜೀವನ್ ಮಿಷನ್, 2019 ರಲ್ಲಿ ಆರಂಭವಾಗಿದ್ದು 2024 ರ ವೇಳೆಗೆ ಪ್ರತಿ ಗ್ರಾಮೀಣ ಮನೆಗೂ ನಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಗುರಿ ಹೊಂದಿದೆ.

Jal Jeevan Mission ‘ಕೇಂದ್ರ ಸರ್ಕಾರದ ಜಲ್ ಜೀವನ್ ಯೋಜನೆಯಡಿ 8.3 ಕೋಟಿ ಗ್ರಾಮೀಣ ಮನೆಗಳು ಪೈಪ್ ನೀರು ಸಂಪರ್ಕ ಹೊಂದಿವೆ’
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 12, 2021 | 11:39 AM

Share

ದೆಹಲಿ: ಸರಿಸುಮಾರ 8.3 ಕೋಟಿ ಗ್ರಾಮೀಣ ಕುಟುಂಬಗಳು,ಅಥವಾ ದೇಶದ 19.2 ಕೋಟಿ ಗ್ರಾಮೀಣ ಕುಟುಂಬಗಳ ಶೇ 43ರಷ್ಟು ಕುಟುಂಬಗಳು, ಈಗ ಪ್ರಮುಖ ಜಲ್ ಜೀವನ್ ಮಿಷನ್ (Jal Jeevan Mission) ಅಡಿಯಲ್ಲಿ ಕುಡಿಯುವ ಪೈಪ್ ನೀರಿನ  ಸಂಪರ್ಕವನ್ನು ಹೊಂದಿವೆ. ಆದರೆ ಕಳಪೆ ಆರೋಗ್ಯ ಫಲಿತಾಂಶಗಳನ್ನು ಹೊಂದಿರುವ ಕೆಲವು ದೊಡ್ಡ ರಾಜ್ಯಗಳು ವ್ಯಾಪ್ತಿಯನ್ನು ವಿಸ್ತರಿಸಲು ನಿಧಾನವಾಗಿವೆ ಎಂದು ಅಧಿಕೃತ ಡೇಟಾ ಹೇಳಿದೆ. ಮೋದಿ ಸರ್ಕಾರದ ಬೃಹತ್ ಯೋಜನೆಗಳಲ್ಲೊಂದಾದ ಜಲ್ ಜೀವನ್ ಮಿಷನ್ 2019 ರಲ್ಲಿ ಆರಂಭವಾಗಿದ್ದು 2024 ರ ವೇಳೆಗೆ ಪ್ರತಿ ಗ್ರಾಮೀಣ ಮನೆಗೂ ನಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಗುರಿ ಹೊಂದಿದೆ. ವಿಶ್ವಸಂಸ್ಥೆಯ 17 ಸಮರ್ಥನೀಯ ಅಭಿವೃದ್ಧಿ ಗುರಿಗಳು ಅಥವಾ ಎಸ್‌ಡಿಜಿಗಳಲ್ಲಿ ಶುದ್ಧ ನೀರಿನ ಲಭ್ಯತೆಯೂ ಒಂದಾಗಿದೆ. ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇಲ್ಲಿಯವರೆಗೆ ಶೇ 100 ವ್ಯಾಪ್ತಿಯೊಂದಿಗೆ ಅಗ್ರಸ್ಥಾನದಲ್ಲಿವೆ ಎಂದು ಡೇಟಾ ತೋರಿಸುತ್ತದೆ. ಅವುಗಳೆಂದರೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಾದ್ರಾ ಮತ್ತು ನಾಗರ್ ಹವೇಲಿ, ಗೋವಾ, ತೆಲಂಗಾಣ, ಪುದುಚೇರಿ ಮತ್ತು ಹರ್ಯಾಣ. ನಿಗದಿಗಿಂತ ಮುಂಚಿತವಾಗಿ ಗುರಿಯನ್ನು ಸಾಧಿಸಿದ ಇತ್ತೀಚಿನ ರಾಜ್ಯವಾಗಿದೆ ಹರ್ಯಾಣ.

ಮಿಷನ್‌ನ ಗಡುವು ಎರಡು ವರ್ಷಗಳಿಗಿಂತಲೂ ದೂರವಿದ್ದರೂ ಕೆಲವು ದೊಡ್ಡ ರಾಜ್ಯಗಳು ಒಟ್ಟು ಗ್ರಾಮೀಣ ಕುಟುಂಬಗಳ ಕಾಲು ಭಾಗಕ್ಕಿಂತ ಕಡಿಮೆ ವ್ಯಾಪ್ತಿಯನ್ನು ಪಡೆಯಲು ಸಾಧ್ಯವಾಗಿದೆ ಎಂದು ಡೇಟಾ ತೋರಿಸುತ್ತದೆ.

ಅವುಗಳಲ್ಲಿ ಉತ್ತರ ಪ್ರದೇಶವು ತನ್ನ 2.64 ಕೋಟಿ ಗ್ರಾಮೀಣ ಕುಟುಂಬಗಳಲ್ಲಿ ಇದುವರೆಗೆ ಶೇ12.74 ರಷ್ಟು ಮಾತ್ರ ಒಳಗೊಂಡಿದೆ. ದೇಶದ ಅತ್ಯಂತ ಒಣ ಭಾಗಗಳಲ್ಲಿ ಒಂದಾದ ಬುಂದೇಲ್‌ಖಂಡ್‌ನಲ್ಲಿ ನೀರಿನ ಸಂಪರ್ಕವನ್ನು ವಿಸ್ತರಿಸಲು ರಾಜ್ಯವು ದೊಡ್ಡ ಪ್ರಮಾಣದ ಎಂಜಿನಿಯರಿಂಗ್ ಯೋಜನೆಯನ್ನು ರೂಪಿಸಿದೆ.

ಒಟ್ಟಾರೆ ಮನೆಗಳ ವ್ಯಾಪ್ತಿಯಲ್ಲಿ, ಉತ್ತರ ಪ್ರದೇಶವು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಲ್ಲಿ ನಿಧಾನವಾಗಿದೆ.

ಭಾರತದ ಒಟ್ಟಾರೆ ಆರೋಗ್ಯ ನಿಯತಾಂಕಗಳನ್ನು ಸುಧಾರಿಸಲು ಈ ರಾಜ್ಯವು ಪ್ರಮುಖವಾಗಿದ್ದು, ವಿಶೇಷವಾಗಿ ಮಕ್ಕಳಲ್ಲಿ, ಏಕೆಂದರೆ ಇದು ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾಗಿದೆ. ಜಲ ಜೀವನ ಮಿಷನ್ ನಡಿಯಲ್ಲಿ ಬುಂದೇಲ್ ಖಂಡದಲ್ಲಿ 32 ಯೋಜನೆಗಳ ಅಡಿಯಲ್ಲಿ 467 ಪೈಪ್ ಕುಡಿಯುವ ನೀರಿನ ಯೋಜನೆಗಳಿವೆ. ಇವುಗಳಲ್ಲಿ 43 ಮೇಲ್ಮೈ ನೀರು ಆಧಾರಿತ ಯೋಜನೆಗಳು ಮತ್ತು 424 ಅಂತರ್ಜಲ ಆಧಾರಿತವಾಗಿವೆ.

ಇದನ್ನೂ ಓದಿ: Coronavirus cases in India ಭಾರತದಲ್ಲಿ14,313 ಹೊಸ ಕೊವಿಡ್ ಪ್ರಕರಣ ಪತ್ತೆ,181 ಮಂದಿ ಸಾವು

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ