Sign In

By signing in or creating an account, you agree with Associated Broadcasting Company's Terms & Conditions and Privacy Policy.

African Swine Fever: ಆಫ್ರಿಕನ್ ಹಂದಿ ಜ್ವರದಿಂದ ಮಧ್ಯಪ್ರದೇಶದಲ್ಲಿ 85 ಹಂದಿಗಳು ಸಾವು, 115ಕ್ಕೆ ಸೋಂಕು

African Swine Flu: ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರದಿಂದ ಇದುವರೆಗೆ 85 ಹಂದಿಗಳು ಸಾವನ್ನಪ್ಪಿದ್ದು, 115 ಹಂದಿಗಳಿಗೆ ಸೋಂಕು ತಗುಲಿದೆ. ಈ ಪ್ರದೇಶದಲ್ಲಿ ಸೋಂಕಿತ ಹಂದಿಗಳನ್ನು ಗುರುತಿಸಲು ಸಮೀಕ್ಷೆ ನಡೆಯುತ್ತಿದೆ.

African Swine Fever: ಆಫ್ರಿಕನ್ ಹಂದಿ ಜ್ವರದಿಂದ ಮಧ್ಯಪ್ರದೇಶದಲ್ಲಿ 85 ಹಂದಿಗಳು ಸಾವು, 115ಕ್ಕೆ ಸೋಂಕು
ಹಂದಿಗಳು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 08, 2022 | 12:47 PM

ಕಟ್ನಿ: ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಆಫ್ರಿಕನ್ ಹಂದಿ ಜ್ವರದಿಂದ (African Swine Flu) ಇದುವರೆಗೆ 85 ಹಂದಿಗಳು ಸಾವನ್ನಪ್ಪಿದ್ದು, 115 ಹಂದಿಗಳು ಸೋಂಕಿಗೆ ತುತ್ತಾಗಿವೆ. ಈ ಪ್ರದೇಶದಲ್ಲಿ ಸಮೀಕ್ಷೆ ನಡೆಸಿ, ಸೋಂಕಿತ ಹಂದಿಗಳನ್ನು ಕೊಲ್ಲಲು ಆಡಳಿತ ಮಂಡಳಿ ಸಿದ್ಧತೆ ನಡೆಸಿದೆ. ಸೋಂಕಿತ ಹಂದಿಗಳ ಹತ್ಯೆಗೆ ಪರಿಹಾರ ಮೊತ್ತವನ್ನೂ ನೀಡಲಾಗುವುದು.

ಈ ಬಗ್ಗೆ ಮಾಹಿತಿ ನೀಡಿರುವ ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕ ಆರ್.ಕೆ. ಸಿಂಗ್, ಆಫ್ರಿಕನ್ ಹಂದಿ ಜ್ವರದಿಂದ ಇದುವರೆಗೆ 85 ಹಂದಿಗಳು ಸಾವನ್ನಪ್ಪಿದ್ದು, 115 ಹಂದಿಗಳಿಗೆ ಸೋಂಕು ತಗುಲಿದೆ. ಈ ಪ್ರದೇಶದಲ್ಲಿ ಸೋಂಕಿತ ಹಂದಿಗಳನ್ನು ಗುರುತಿಸಲು ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಸೋಂಕನ್ನು ತಡೆಗಟ್ಟಲು 2 ವಲಯಗಳನ್ನು ರಚಿಸಲಾಗಿದೆ. ಅವುಗಳಲ್ಲಿ ಒಂದು ‘ಸೋಂಕಿತ ವಲಯ’ವಾಗಿದ್ದು, ಇನ್ನೊಂದು ‘ಕಣ್ಗಾವಲು ವಲಯ’ವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Big News: ಜಾರ್ಖಂಡ್​​ನ ರಾಂಚಿಯಲ್ಲಿ ಆಫ್ರಿಕನ್ ಹಂದಿಜ್ವರದಿಂದ 800 ಹಂದಿಗಳು ಸಾವು; ರೇವಾದಲ್ಲಿ 2000 ಹಂದಿಗಳು ಬಲಿ

ಈಗಾಗಲೇ ಪಶು ವೈದ್ಯಕೀಯ ಇಲಾಖೆಯ ತಂಡಗಳು ಈ ಪ್ರದೇಶದಲ್ಲಿ ಸಮೀಕ್ಷೆ ಕಾರ್ಯದಲ್ಲಿ ತೊಡಗಿವೆ. ಮುಂದಿನ 2 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಅದರ ನಂತರ ನಾವು ಸೋಂಕಿತ ವಲಯಗಳಲ್ಲಿ ಹಂದಿಗಳನ್ನು ಕೊಲ್ಲುತ್ತೇವೆ. ಹಂದಿಗಳ ಮಾಲೀಕರಿಗೂ ಪರಿಹಾರ ಧನ ನೀಡಲಾಗುವುದು’’ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಈಗಾಗಲೇ ಪರಿಹಾರ ಮೊತ್ತ ಬಂದಿದ್ದು, ಹಂದಿಗಳ ತೂಕಕ್ಕೆ ಅನುಗುಣವಾಗಿ ಪರಿಹಾರದ ಹಣವನ್ನು ವಿತರಿಸಲಾಗುವುದು. ಈ ಮೊತ್ತವು ಕನಿಷ್ಠ 2,200 ರೂ. ಮತ್ತು ಗರಿಷ್ಠ 15,000 ರೂ. ಇರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು