ರಾಮಮಂದಿರ ಉದ್ಘಾಟನೆಯಂದು 30 ವರ್ಷಗಳ ಮೌನವ್ರತ ಅಂತ್ಯಗೊಳಿಸಿ ‘ರಾಮ’ ಎನ್ನಲಿದ್ದಾರೆ ಮೌನ ಮಾತಾ

|

Updated on: Jan 10, 2024 | 9:20 AM

85 ವರ್ಷದ ಮಹಿಳೆ ರಾಮನಿಗಾಗಿ ಕಾದ ಶಬರಿಯಂತೆ ರಾಮ ಮಂದಿರ ಉದ್ಘಾಟನೆಯಂದು 30 ವರ್ಷಗಳ ಮೌನ ವ್ರತವನ್ನು ಅಂತ್ಯಗೊಳಿಸಿ ‘ರಾಮ’ನ ಹೆಸರು ಉಚ್ಛರಿಸಲಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುವ ಕನಸು ಜನವರಿ 22 ರಂದು ನನಸಾದ ಬಳಿಕ ಜಾರ್ಖಂಡ್‌ನ 85 ವರ್ಷದ ಮಹಿಳೆಯೊಬ್ಬರು ಮೂರು ದಶಕಗಳಿಂದ ನಡೆಯುತ್ತಿರುವ ತಮ್ಮ ಮೌನವ್ರತವನ್ನು ಮುರಿಯಲಿದ್ದಾರೆ.

ರಾಮಮಂದಿರ ಉದ್ಘಾಟನೆಯಂದು 30 ವರ್ಷಗಳ ಮೌನವ್ರತ ಅಂತ್ಯಗೊಳಿಸಿ ‘ರಾಮ’ ಎನ್ನಲಿದ್ದಾರೆ ಮೌನ ಮಾತಾ
ಸರಸ್ವತಿ ದೇವಿ
Image Credit source: Aaj Tak
Follow us on

85 ವರ್ಷದ ಮಹಿಳೆ ರಾಮನಿಗಾಗಿ ಕಾದ ಶಬರಿಯಂತೆ ರಾಮ ಮಂದಿರ ಉದ್ಘಾಟನೆಯಂದು 30 ವರ್ಷಗಳ ಮೌನ ವ್ರತವನ್ನು ಅಂತ್ಯಗೊಳಿಸಿ ‘ರಾಮ’ನ ಹೆಸರು ಉಚ್ಛರಿಸಲಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುವ ಕನಸು ಜನವರಿ 22 ರಂದು ನನಸಾದ ಬಳಿಕ ಜಾರ್ಖಂಡ್‌ನ 85 ವರ್ಷದ ಮಹಿಳೆಯೊಬ್ಬರು ಮೂರು ದಶಕಗಳಿಂದ ನಡೆಯುತ್ತಿರುವ ತಮ್ಮ ಮೌನವ್ರತವನ್ನು ಮುರಿಯಲಿದ್ದಾರೆ.

1992ರಲ್ಲಿ ಬಾಬರಿ ಮಸೀದಿ ಧ್ವಂಸವಾದ ದಿನ ಸರಸ್ವತಿ ದೇವಿ ರಾಮ ಮಂದಿರ ಉದ್ಘಾಟನೆ ವೇಳೆ ಮಾತ್ರ ಮಾತನಾಡುವುದಾಗಿ ಪ್ರತಿಜ್ಞೆ ಮಾಡಿದ್ದರು. ಧನಬಾದ್ ನಿವಾಸಿ ಸರಸ್ವತಿ ದೇವಿ ಸೋಮವಾರ ರಾತ್ರಿ ರೈಲಿನಲ್ಲಿ ಉತ್ತರ ಪ್ರದೇಶದ ಅಯೋಧ್ಯೆಗೆ ಮೌನಿ ಮಾತಾ ಮಂದಿರದ ಉದ್ಘಾಟನೆ ನೋಡಲು ತೆರಳಲಿದ್ದಾರೆ.

ಅವರು ಸಂಕೇತ ಭಾಷೆ ಅಥವಾ ಬರವಣಿಗೆ ಮೂಲಕವೇ ಮಾತನಾಡುತ್ತಾರೆ. 2020 ರವರೆಗೆ, ಅವರು ಪ್ರತಿದಿನ ಮಧ್ಯಾಹ್ನ ಒಂದು ಗಂಟೆ ಮಾತನಾಡುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರದ ಶಂಕುಸ್ಥಾಪನೆ ಮಾಡಿದ ದಿನದಿಂದ ಇಡೀ ದಿನ ಮೌನ ಆಚರಿಸಿದರು.

ಮತ್ತಷ್ಟು ಓದಿ: Ram Mandir Event Invitees:ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾ; ಸಮಾರಂಭಕ್ಕೆ ಯಾರಿಗೆಲ್ಲ ಆಹ್ವಾನವಿದೆ?

ದೇವಿಯ ಕಿರಿಯ ಪುತ್ರ 55 ವರ್ಷದ ಹರೇರಾಮ್ ಅಗರ್ವಾಲ್ ಮಾತನಾಡಿ, 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸವಾದಾಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವವರೆಗೆ ಮಾತನಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು.

ದೇವಸ್ಥಾನದಲ್ಲಿ ಪ್ರತಿಷ್ಠಾಪನೆಯ ದಿನಾಂಕವನ್ನು ಘೋಷಿಸಿದಾಗಿನಿಂದ ಅವರು ತುಂಬಾ ಸಂತೋಷವಾಗಿದ್ದಾರೆ.
ತನ್ನ ಜೀವನವನ್ನು ಭಗವಾನ್ ರಾಮನಿಗೆ ಅರ್ಪಿಸಿದರು ಮತ್ತು ಹೆಚ್ಚಿನ ಸಮಯವನ್ನು ತೀರ್ಥಯಾತ್ರೆಗಳಲ್ಲಿ ಕಳೆದರು ಎಂದು ಕುಟುಂಬ ಸದಸ್ಯರು ಹೇಳುತ್ತಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ