AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗ್ವಾರ್ ಕಾರು ಚಾಲಕನ ಅಟ್ಟಹಾಸ: ಇಬ್ಬರು ಪೊಲೀಸರು, ವಿದ್ಯಾರ್ಥಿಗಳು ಸೇರಿ 9 ಜನ ದುರ್ಮರಣ

ಅಹಮದಾಬಾದ್​ನಲ್ಲಿ ಸಂಭವಿಸಿದ ಅಪಘಾತವಾನ್ನು ನೋಡಲು ಸೇರಿದ್ದ ಜನರ ಮೇಲೆ ಜಾಗ್ವಾರ್ ಕಾರು ಹರಿದಿದ್ದು, ಚಾಲಕನ ಅಟ್ಟಹಾಸಕ್ಕೆ 9 ಜನರು ಬಲಿಯಾಗಿದ್ದಾರೆ.

ಜಾಗ್ವಾರ್ ಕಾರು ಚಾಲಕನ ಅಟ್ಟಹಾಸ: ಇಬ್ಬರು ಪೊಲೀಸರು, ವಿದ್ಯಾರ್ಥಿಗಳು ಸೇರಿ 9 ಜನ ದುರ್ಮರಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jul 20, 2023 | 7:59 AM

ಅಹಮದಾಬಾದ್​​​​​​, (ಜುಲೈ 20): ಅಹಮದಾಬಾದ್​​​​​​ನ(Ahmedabad) ಸರ್ಖೇಜ್-ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಟ್ಟು 9 ಜನ ಮೃತಪಟ್ಟಿದ್ದಾರೆ. ತಡರಾತ್ರಿ 1.30 ಗಂಟೆಗೆ ಟ್ರಕ್​  ಹಾಗೂ ಎಸ್​ಯುವಿ ಕಾರಿನ ನಡುವೆ ಸಂಭವಿಸಿದ್ದ ಅಪಘಾತವನ್ನು ನೋಡಲು ಸೇರಿದ್ದ ಜನರ ಮೇಲೆ ಇನ್ನೊಂದು ಕಾರು ವೇಗವಾಗಿ ಬಂದು ಗುದ್ದಿದೆ.  ಈ ದುರ್ಘಟನೆಯಲ್ಲಿ ಇಬ್ಬರು ಪೊಲೀಸರು, ವಿದ್ಯಾರ್ಥಿಗಳು ಸೇರಿದಂತೆ ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ 6 ಜನ ಮೃತಪಟ್ಟಿದ್ದರೆ, ಪೊಲೀಸರು ಸೇರಿ ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇನ್ನು ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ಕಾರು ಚಾಲಕನಿಗೂ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಪಘಾತದ ವೇಳೆ ಮೃತಪಟ್ಟವರಲ್ಲಿ ಹೆಚ್ಚಿನವರು ಕಾಲೇಜ್​ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಬೋಟಾಡ್, ಭಾವನಗರದಿಂದ ಅಹಮದಾಬಾದ್‌ಗೆ ಓದಲು ಬಂದಿದ್ದರು.

ಎಸ್‌ಯುವಿ ಕಾರು ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಇದನ್ನು ನೋಡಲು ನಿಂತಿದ್ದ ಜನರ ಮೇಲೆ ವೇಗವಾಗಿ ಬಂದ ಜಾಗ್ವರ್​ ಕಾರು ಹರಿದಿದೆ. ರಾಜ್‌ಪಥ್ ಕ್ಲಬ್ ಪ್ರದೇಶದಿಂದ ವೇಗವಾಗಿ ಬಂದ ಕಾರು, ಜನಸಂದಣಿಯ ಮೇಲೆ ನುಗ್ಗಿದೆ. ಕಾರು ವೇಗವಾಗಿ ಬಂದು ಗುದ್ದಿದ ರಭಸಕ್ಕೆ ಅನೇಕ ಜನರು ಘಟನಾ ಸ್ಥಳದಿಂದ ಸುಮಾರು 20 ರಿಂದ 25 ಅಡಿ ದೂರ ಹಾರಿ ಹೋಗಿ ಬಿದ್ದಿದ್ದಾರೆ ಎಂದು ವರದಿಯಾಗಿದೆ.

Published On - 7:35 am, Thu, 20 July 23

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್