AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ವಿದ್ಯುತ್ ಸ್ಪರ್ಶದಿಂದ ಸುಟ್ಟು ಕರಕಲಾದ 9 ಕನ್ವಾರಿಯಾಗಳು

ಬಿಹಾರದಲ್ಲಿ ವಿದ್ಯುತ್ ಸ್ಪರ್ಶದಿಂದ 9 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ನೀರು ತರಲೆಂದು ಕನ್ವಾರಿಯಾಗಳು ಪಹೇಲಜಾ ಘಾಟ್​ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಬಿಹಾರದಲ್ಲಿ ವಿದ್ಯುತ್ ಸ್ಪರ್ಶದಿಂದ ಸುಟ್ಟು ಕರಕಲಾದ 9 ಕನ್ವಾರಿಯಾಗಳು
ಕನ್ವಾರಿಯಾಗಳು
ನಯನಾ ರಾಜೀವ್
|

Updated on: Aug 05, 2024 | 8:04 AM

Share

ಶ್ರಾವಣ ಸೋಮವಾರವಾಗಿರುವುದರಿಂದ ಕನ್ವಾರಿಯಾಗಳು ನೀರು ತರಲು ನದಿ ಬಳಿ ಹೋಗುತ್ತಿದ್ದರು, 11 ಸಾವಿರ ವೋಲ್ಟ್​ ವಿದ್ಯುತ್ ತಂತಿಗೆ ಟ್ರಾಲಿ ತಾಗಿದ್ದು 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಹೇಲಜಾ ಘಾಟ್‌ನಿಂದ ನೀರು ತೆಗೆದುಕೊಂಡು ಬಾಬಾ ಹರಿಹರನಾಥ ದೇವಸ್ಥಾನಕ್ಕೆ ತೆರಳುತ್ತಿದ್ದರು. ಅಷ್ಟರಲ್ಲಿ ಡಿಜೆ ಟ್ರಾಲಿ ಹೈ ಟೆನ್ಷನ್ ವೈರ್ ಸ್ಪರ್ಶಿಸಿತು.

ಧರ್ಮೇಂದ್ರ ಪಾಸ್ವಾನ್ ಅವರ ಪುತ್ರ ರವಿಕುಮಾರ್, ಲಾಲಾ ದಾಸ್ ಅವರ ಪುತ್ರ ರಾಜಕುಮಾರ್, ದಿವಂಗತ ಫುಡೇನಾ ಪಾಸ್ವಾನ್ ಅವರ ಪುತ್ರ ನವೀನ್ ಕುಮಾರ್, ಸನೋಜ್ ಭಗತ್ ಅವರ ಪುತ್ರ ಅಮರೇಶ್ ಕುಮಾರ್, ಮಂಟು ಪಾಸ್ವಾನ್ ಅವರ ಪುತ್ರ ಅಶೋಕ್ ಕುಮಾರ್ ಸೇರಿದ್ದಾರೆ. , ಪರಮೇಶ್ವರ ಪಾಸ್ವಾನ್ ಅವರ ಮಗ ಕಾಲು ಕುಮಾರ್, ಮಿಂಟು ಪಾಸ್ವಾನ್ ಅವರ ಮಗ ಆಶಿ ಕುಮಾರ್, ಚಂದೇಶ್ವರ್ ಪಾಸ್ವಾನ್ ಅವರ ಮಗ ಚಂದನ್ ಕುಮಾರ್ ಮತ್ತು ದೇವಿ ಲಾಲ್ ಅವರ ಮಗ ಅಮೋದ್ ಕುಮಾರ್ ಅವರ ಹೆಸರುಗಳು ಕೇಳಿಬಂದಿವೆ.

ಉಮೇಶ್ ಪಾಸ್ವಾನ್ ಅವರ ಪುತ್ರ ರಾಜೀವ್ ಕುಮಾರ್ (17) ಸೇರಿದಂತೆ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಡಿಜೆಯಲ್ಲಿ ಹಾಡುಗಳು ಮೊಳಗುತ್ತಿದ್ದವು, ಎಲ್ಲರೂ ನೃತ್ಯ ಮಾಡುತ್ತಾ ನೀರು ತರಲೆಂದು ಹೋಗುತ್ತಿದ್ದರು. ತಕ್ಷಣವೇ 11 ಸಾವಿರ ವೋಲ್ಟ್​ ಇರುವ ವಿದ್ಯುತ್ ಸಂಪರ್ಕಕ್ಕೆ ಬಂದು 9 ಮಂದಿ ಸುಟ್ಟು ಕರಕಲಾಗಿದ್ದಾರೆ.

ಮತ್ತಷ್ಟು ಓದಿ: ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ; ಓರ್ವ ವ್ಯಕ್ತಿ ಸಾವು

ಘಟನೆಯ ಬಗ್ಗೆ ಸ್ಥಳೀಯರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ . ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಸ್ಥಳೀಯ ಪೊಲೀಸರು ಹಾಗೂ ವೈಶಾಲಿ ಡಿಎಂ ಸ್ಥಳಕ್ಕೆ ಆಗಮಿಸಿದರು. ಸದ್ಯ ಮೃತ ದೇಹಗಳ ಗುರುತು ದೃಢಪಡಿಸಲಾಗುತ್ತಿದೆ. ಸಾವಿನ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಸ್ಥಳೀಯರು.

ಇದಕ್ಕೂ ಮೊದಲು ಆಗಸ್ಟ್ 1 ರಂದು ಜಾರ್ಖಂಡ್‌ನಲ್ಲಿ ಇದೇ ರೀತಿಯ ದುರಂತ ಸಂಭವಿಸಿತ್ತು. ಲತೇಹರ್ ಜಿಲ್ಲೆಯಲ್ಲಿ ಅವರ ವಾಹನವು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕನಿಷ್ಠ ಐವರು ಕನ್ವಾರಿಯಾಗಳು ಸಾವನ್ನಪ್ಪಿದ್ದರು.

ಬಾಲುಮಾತ್ ಪೊಲೀಸ್ ಠಾಣಾ ವ್ಯಾಪ್ತಿಯ ಟಮ್ ಟಮ್ ಟೋಲಾ ಬಳಿ ಬೆಳಿಗ್ಗೆ 3 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ, ಗುಂಪು ದಿಯೋಘರ್‌ನ ಬಾಬಾ ಬೈದ್ಯನಾಥ ದೇವಸ್ಥಾನದಿಂದ ಹಿಂದಿರುಗುತ್ತಿದ್ದಾಗ ಅವರ ವಾಹನವು ಕಂಬಕ್ಕೆ ಡಿಕ್ಕಿ ಹೊಡೆದು ಹೈ-ಟೆನ್ಷನ್ ಓವರ್‌ಹೆಡ್ ತಂತಿ ತಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?