AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 Years Of PM Modi: ನೋಟು ಅಮಾನ್ಯೀಕರಣ, ಬಾಲಾಕೋಟ್ ವೈಮಾನಿಕ ದಾಳಿ: 9 ವರ್ಷಗಳಲ್ಲಿ ಮೋದಿ ಸರ್ಕಾರ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಅಧಿಕಾರಾವಧಿ ಇಂದಿಗೆ (ಶುಕ್ರವಾರ) 9 ವರ್ಷ ಪೂರೈಸುತ್ತಿದೆ. 9 ವರ್ಷಗಳ ಹಿಂದೆ ಇದೇ ದಿನ ಅಂದರೆ 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

9 Years Of PM Modi: ನೋಟು ಅಮಾನ್ಯೀಕರಣ, ಬಾಲಾಕೋಟ್ ವೈಮಾನಿಕ ದಾಳಿ: 9 ವರ್ಷಗಳಲ್ಲಿ ಮೋದಿ ಸರ್ಕಾರ ತೆಗೆದುಕೊಂಡ ಪ್ರಮುಖ ನಿರ್ಧಾರಗಳು
ನರೇಂದ್ರ ಮೋದಿ
ನಯನಾ ರಾಜೀವ್
|

Updated on: May 26, 2023 | 3:31 PM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಅಧಿಕಾರಾವಧಿ ಇಂದಿಗೆ (ಶುಕ್ರವಾರ) 9 ವರ್ಷ ಪೂರೈಸುತ್ತಿದೆ. 9 ವರ್ಷಗಳ ಹಿಂದೆ ಇದೇ ದಿನ ಅಂದರೆ 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ 9 ವರ್ಷಗಳಲ್ಲಿ ಪ್ರಧಾನಿ ಮೋದಿ ಇಂತಹ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಆ ನಿರ್ಧಾರಗಳು ಯಾವುವು ಎಂದು ಇಲ್ಲಿದೆ ಮಾಹಿತಿ.

370ನೇ ವಿಧಿ ರದ್ದು ಮೋದಿ ಸರ್ಕಾರ ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ ಮೂಲಕ ಎಲ್ಲರನ್ನೂ ಆಶ್ಚರ್ಯಗೊಳಿಸಿತು. ಇದು ಸರ್ಕಾರದ ದೊಡ್ಡ ಸಾಧನೆಗಳಲ್ಲಿ ಒಂದಾಗಿದೆ. 5 ಆಗಸ್ಟ್ 2019 ರಂದು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸುವ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು. ಇದರೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶದ ಎಲ್ಲಾ ಕಾನೂನುಗಳನ್ನು ಜಾರಿಗೆ ತರಲಾಯಿತು, ಅದು 70 ವರ್ಷಗಳಿಂದ ಜಾರಿಗೆ ಬಂದಿರಲಿಲ್ಲ. ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಅಲ್ಲಿನ ಜನರಿಗೆ ಸಿಗತೊಡಗಿತು.

ತ್ರಿವಳಿ ತಲಾಖ್ 30 ಜುಲೈ 2019 ರಂದು ಸರ್ಕಾರವು ತ್ರಿವಳಿ ತಲಾಖ್ ಮಸೂದೆಯನ್ನು ಅಂಗೀಕರಿಸಿತು. ಇದಾದ ನಂತರ ತ್ರಿವಳಿ ತಲಾಖ್ ನೀಡುವುದು ಅಪರಾಧದ ವರ್ಗಕ್ಕೆ ಸೇರಿತು.

ಬಾಲಾಕೋಟ್ ವೈಮಾನಿಕ ದಾಳಿ ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಭಯೋತ್ಪಾದಕರ ಈ ನೀಚ ಕೃತ್ಯದ ಎರಡು ವಾರಗಳ ನಂತರ, 26 ಫೆಬ್ರವರಿ 2019 ರಂದು, ಭಾರತವು ಬಾಲಾಕೋಟ್‌ನಲ್ಲಿ ವೈಮಾನಿಕ ದಾಳಿಯ ಮೂಲಕ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಕೊಂದಿತು.

ಜಿಎಸ್‌ಟಿ ಜಾರಿಗೆ ನಿರ್ಧಾರ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜುಲೈ 1, 2017 ರಿಂದ ದೇಶಾದ್ಯಂತ ಜಿಎಸ್‌ಟಿಯನ್ನು ಜಾರಿಗೆ ತಂದಿತು. ದೇಶದಲ್ಲಿ ಒಂದು ದೇಶ, ಒಂದು ತೆರಿಗೆ ಪದ್ಧತಿಯನ್ನು ಜಾರಿಗೆ ತರುವುದು ಇದರ ಉದ್ದೇಶವಾಗಿತ್ತು. ಜಿಎಸ್‌ಟಿ ಜಾರಿಯೊಂದಿಗೆ ಸೇವಾ ತೆರಿಗೆ, ವ್ಯಾಟ್ ಸೇರಿದಂತೆ ಹಲವು ತೆರಿಗೆಗಳು ರದ್ದಾಗಿವೆ.

ಮತ್ತಷ್ಟು ಓದಿ:9 Years Of PM Modi: ಸ್ಮಶಾನದಲ್ಲಿ ನಿಂತಿದ್ದ ಮೋದಿಗೆ ವಾಜಪೇಯಿ ಕರೆ ಮಾಡಿದ್ದೇಕೆ? ದೂರದರ್ಶನದ ಕ್ಯಾಮರಾಮೆನ್ ಪ್ರಾಣ ಉಳಿಸಿದ್ದು ಹೇಗೆ? ಕೆಲವು ಕುತೂಹಲಕಾರಿ ಸಂಗತಿಗಳು

ನೋಟು ಅಮಾನ್ಯೀಕರಣ 2016 ರಲ್ಲಿ ಮೋದಿ ಸರ್ಕಾರವು 500 ಮತ್ತು 1000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಿತು. ನವೆಂಬರ್ 8, 2016 ರಂದು ಸರ್ಕಾರವು ಈ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿತು. ಸರ್ಕಾರದ ಈ ನಿರ್ಧಾರ ಕಪ್ಪುಹಣಕ್ಕೆ ಹೊಡೆತ ನೀಡಿದೆ.

ಪೌರತ್ವ ತಿದ್ದುಪಡಿ ಮಸೂದೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ 11 ಡಿಸೆಂಬರ್ 2019 ರಂದು ಅಂಗೀಕರಿಸಲಾಯಿತು. ಇದರ ಅಡಿಯಲ್ಲಿ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಧಾರ್ಮಿಕ ಕಿರುಕುಳದಿಂದ ಓಡಿಹೋಗುವ ಹಿಂದೂ, ಕ್ರಿಶ್ಚಿಯನ್, ಬೌದ್ಧ, ಸಿಖ್ ಮತ್ತು ಪಾರ್ಸಿ ನಿರಾಶ್ರಿತರಿಗೆ ದೇಶದ ಪೌರತ್ವವನ್ನು ನೀಡಲಾಗುತ್ತದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಡಿಸೆಂಬರ್ 12 ರಂದು ಮಸೂದೆಗೆ ಅಂಕಿತ ಹಾಕಿದರು.

2000 ನೋಟು ಚಲಾವಣೆಯಿಂದ ಹಿಂಪಡೆಯುವಿಕೆ ತನ್ನ ಎರಡನೇ ಅವಧಿಯಲ್ಲಿ, ಮೋದಿ ಸರ್ಕಾರವು ಮೇ 2023 ರಲ್ಲಿ ರೂ 2,000 ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿತು. 2016ರಲ್ಲಿ ಸರ್ಕಾರ 1000 ರೂಪಾಯಿ ಬದಲು 2000 ನೋಟು ತರಲು ನಿರ್ಧರಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್