AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: 90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳಿಂದ ಸಾಮೂಹಿಕ ಅತ್ಯಾಚಾರ

90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಈ ಘಟನೆ ನಡೆಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಆರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಸಮಯದಲ್ಲಿ ಗಾಯಗೊಂಡಿರುವ ಮಹಿಳೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಧ್ಯಪ್ರದೇಶ: 90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳಿಂದ ಸಾಮೂಹಿಕ ಅತ್ಯಾಚಾರ
ಪೊಲೀಸ್
ನಯನಾ ರಾಜೀವ್
|

Updated on: Mar 08, 2026 | 11:02 AM

Share

ಖಾಂಡ್ವಾ, ಮಾರ್ಚ್​ 08: 90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಈ ಘಟನೆ ನಡೆಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಆರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಸಮಯದಲ್ಲಿ ಗಾಯಗೊಂಡಿರುವ ಮಹಿಳೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ತನ್ನ ಹಳ್ಳಿಯ ಕೃಷಿ ಹೊಲದಲ್ಲಿ ಗುರುವಾರ ಸಂಜೆ ಮಹಿಳೆ ಒಬ್ಬಂಟಿಯಾಗಿದ್ದಾಗ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಮಹಿಳೆ ಮರುದಿನ ಬೆಳಗ್ಗೆ ಬೇರೆ ಹಳ್ಳಿಯಲ್ಲಿ ವಾಸಿಸುವ ತನ್ನ ಮಗಳಿಗೆ ಘಟನೆಯ ಬಗ್ಗೆ ತಿಳಿಸಿದ್ದಾರೆ. ನಂತರ ಅವರು ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಮಹಿಳೆ ಮತ್ತು ಅವರ ಮಗಳಿಗೆ ಪೊಲೀಸರನ್ನು ಸಂಪರ್ಕಿಸಲು ಸಲಹೆ ನೀಡಿದ್ದಾರೆ ಎಂದು ಖಾಂಡ್ವಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರೈ ಪಿಟಿಐಗೆ ತಿಳಿಸಿದ್ದಾರೆ. ದೂರು ಸ್ವೀಕರಿಸಿದ ನಂತರ, ಪೊಲೀಸರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 70 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ರೈ ಹೇಳಿದರು.

ಮತ್ತಷ್ಟು ಓದಿ: ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಆರೋಪಿಗಳ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 10,000 ರೂ. ಬಹುಮಾನ ನೀಡುವುದಾಗಿಯೂ ಪೊಲೀಸರು ಘೋಷಿಸಿದ್ದಾರೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ