AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಗಾಂಧಿ ಘೋಷಿಸಿದ ತುರ್ತು ಪರಿಸ್ಥಿತಿಯನ್ನು ಅಸಂವಿಧಾನಿಕ ಎಂದು ಪರಿಗಣಿಸಿ -ಸುಪ್ರೀಂ ಮೊರೆಹೋದ 94 ವರ್ಷದ ವೃದ್ಧೆ

1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಘೋಷಿಸಿದ ತುರ್ತು ಪರಿಸ್ಥಿತಿಯನ್ನು ಅಸಂವಿಧಾನಿಕ ಎಂದು ಪರಿಗಣಿಸಿ ಅದನ್ನು ಜಾರಿಗೊಳಿಸಿದ ಅಧಿಕಾರಿಗಳಿಂದ ಪರಿಹಾರವಾಗಿ 25 ಕೋಟಿ ರೂ. ಕೇಳಿ 94 ವರ್ಷದ ವೃದ್ಧೆಯೊಬ್ಬರು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಇಂದಿರಾ ಗಾಂಧಿ ಘೋಷಿಸಿದ ತುರ್ತು ಪರಿಸ್ಥಿತಿಯನ್ನು ಅಸಂವಿಧಾನಿಕ ಎಂದು ಪರಿಗಣಿಸಿ -ಸುಪ್ರೀಂ ಮೊರೆಹೋದ 94 ವರ್ಷದ ವೃದ್ಧೆ
ತುರ್ತು ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿದ್ದ ಇಂದಿರಾ ಗಾಂಧಿ
preethi shettigar
| Edited By: |

Updated on: Dec 05, 2020 | 4:17 PM

Share

ದೆಹಲಿ: 1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಘೋಷಿಸಿದ ತುರ್ತು ಪರಿಸ್ಥಿತಿಯನ್ನು ಅಸಂವಿಧಾನಿಕ ಎಂದು ಪರಿಗಣಿಸಿ ಅದನ್ನು ಜಾರಿಗೊಳಿಸಿದ ಅಧಿಕಾರಿಗಳಿಂದ ಪರಿಹಾರವಾಗಿ 25 ಕೋಟಿ ರೂ. ಕೇಳಿ 94 ವರ್ಷದ ವೃದ್ಧೆಯೊಬ್ಬರು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಸುಪ್ರೀಂ ಕೋರ್ಟ್​ಗೆ ಸಲ್ಲಿಸಿರುವ ತಮ್ಮ ಅರ್ಜಿಯಲ್ಲಿ ವೃದ್ಧೆ ಈ ಅಸಂವಿಧಾನಿಕ ಅನ್ಯಾಯವು ನಮ್ಮ ಕುಟುಂಬದ ಮೂರು ತಲೆಮಾರುಗಳ ಮೇಲೆ ಪರಿಣಾಮ ಬೀರಿದೆ ಎಂದು ಉಲ್ಲೇಖಿಸಿದ್ದಾರೆ. ಜೊತೆಗೆ, ಅಂದಿನ ತುರ್ತು ಪರಿಸ್ಥಿತಿಯ ಕೆಟ್ಟ ಪ್ರಭಾವ ಇನ್ನೂ ತಮ್ಮ ಮನಸ್ಸಿನಲ್ಲಿ ಪ್ರತಿಧ್ವನಿಸುತ್ತಿದೆ. ಹಾಗಾಗಿ, ತುರ್ತು ಪರಿಸ್ಥಿತಿಯನ್ನು ಕಾನೂನುಬಾಹಿರವೆಂದು ಘೋಷಿಸುವ ಮೂಲಕ ನಾನು ಕೊನೆಗೂ ನೆಮ್ಮದಿ ಕಾಣಬಹದುದು ಎಂದು ಹೇಳಿದ್ದಾರೆ.

ಅಧಿಕಾರಿಗಳ ಒತ್ತಡ ಸಹಿಸಲಾಗದೆ ದೇಶ ತೊರೆದ ಸಂತ್ರಸ್ತೆ, ಕುಟುಂಬಸ್ಥರು ಇದಲ್ಲದೆ, ವೃದ್ಧೆ ತಮ್ಮ ಅರ್ಜಿಯಲ್ಲಿ  ಅಂದಿನ ಸರ್ಕಾರಿ ಅಧಿಕಾರಿಗಳು ತಮ್ಮನ್ನು ಹಾಗೂ ತಮ್ಮ ಪತಿಯನ್ನು ಆಧಾರಹಿತ ಬಂಧನಕ್ಕೆ ಒಳಪಡಿಸಲು ಮುಂದಾದರು. ಜೊತೆಗೆ, ಇದೇ ಅಧಿಕಾರಿಗಳು ವ್ಯವಸ್ಥಿತವಾಗಿ ತಮ್ಮ ಪತಿಯ ವ್ಯಾಪಾರ ಮತ್ತು ಮನೆಯನ್ನು ಲೂಟಿ ಮಾಡಿದ್ದರು. ಇವರ ದೌರ್ಜನ್ಯ ಸಹಿಸಲಾಗದೆ ನಾವು ದೇಶವನ್ನೇ ತೊರೆಯಬೇಕಾಯಿತು ಎಂದು ಸಹ ಉಲ್ಲೇಖಿಸಿದ್ದಾರೆ.

ಅಂದ ಹಾಗೆ, 2014ರಲ್ಲಿ ದೆಹಲಿ ಹೈಕೋರ್ಟ್​ ಸಂತ್ರಸ್ತೆಯ ಪತಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸಿತ್ತು. ಜೊತೆಗೆ, ಹೈಕೋರ್ಟ್​ ನೀಡಿದ ತೀರ್ಪಿನಲ್ಲಿ ವೃದ್ಧೆಯ ಪತಿಯಿಂದ ಸರ್ಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಬೆಲೆಬಾಳುವ ಹಾಗೂ ಸ್ಥಿರಾಸ್ತಿಯನ್ನು ಇನ್ನೂ ಹಿಂದಿರುಗಿಸಿಲ್ಲ ಎಂದು ಉಲ್ಲೇಖಿಸಿತು. ಹಾಗಾಗಿ ಸಂತ್ರಸ್ತೆ ಇದೀಗ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಏನಿದು ಪ್ರಕರಣ? ಸಂತ್ರಸ್ತೆಯ  ಪತಿ ಎಚ್.ಕೆ. ಸಾರಿನ್ ದೆಹಲಿಯ ಕರೋಲ್ ಬಾಗ್ ಮತ್ತು ಕನಾಟ್​ ಪ್ಲೇಸ್​ನಲ್ಲಿ ಪ್ರತಿಷ್ಠಿತ ರತ್ನಾಭರಣದ ವ್ಯಾಪಾರ ಮಳಿಗೆಗಳನ್ನು ಹೊಂದಿದ್ದರು. ಆದರೆ, 1975ರಲ್ಲಿ ತುರ್ತುಪರಿಸ್ಥಿತಿ ವೇಳೆ, ಸಾರಿನ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅವರ ಮಳಿಗೆಗಳಲ್ಲಿದ್ದ  ಆಭರಣಗಳು ಮತ್ತು ಕಲಾಕೃತಿಗಳನ್ನು ವಶಪಡಿಸಿಕೊಂಡಿದ್ದರು. ಕಸ್ಟಮ್ಸ್​ ಕಾಯ್ದೆಯ ಉಲ್ಲಂಘನೆ ಎಂಬ ನೆಪವೊಡ್ಡಿ ಇವೆಲ್ಲವನ್ನು ಜಪ್ತಿ ಮಾಡಲಾಗಿತ್ತು. ಈ ನಡುವೆ, ಅಧಿಕಾರಿಗಳ ಒತ್ತಡದಿಂದ ಬೇಸತ್ತು ಸಾರಿನ್​ ಸಾವನ್ನಪ್ಪಿದ್ದರು.

ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ಪಲ್ಪ ಕಹಿ: ಸುಪ್ರೀಂಕೋರ್ಟ್​ ಹೇಳಿದ್ದೇನು?

ಅಪರಾಧಿ ರಾಜಕಾರಣಿಗಳಿಗೆ.. ಜೀವನ ಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ -ಸುಪ್ರೀಂಗೆ ಕೇಂದ್ರ ಅಫಿಡವಿಟ್

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ