AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಯಾವ ನೋವೂ ಇಲ್ಲ..ಅಡ್ಡಪರಿಣಾಮವೂ ಇಲ್ಲ..ಲಸಿಕೆ ಹಾಕಿಸಿಕೊಳ್ಳಿ’-ವಿಡಿಯೋ ಸಂದೇಶ ನೀಡಿದ 97ವರ್ಷದ ವೃದ್ಧೆ

ಯಾರೂ ಲಸಿಕೆಯ ಬಗ್ಗೆ ಹೆದರಬೇಡಿ. ಕೊರೊನಾ ಲಸಿಕೆ ಪಡೆಯುವುದರಿಂದ ನಿಮಗೇ ಒಳ್ಳೆಯದು. ಅಷ್ಟೇ ಅಲ್ಲ, ನಿಮ್ಮ ಸುತ್ತಲೂ ಇರುವವರಿಗೂ ಒಳ್ಳೆಯದೇ. ಲಸಿಕೆ ಸುರಕ್ಷಿತವಾಗಿದೆ ಎಂದು ವೃದ್ಧೆ ಹೇಳಿದ್ದಾರೆ.

Viral Video: ‘ಯಾವ ನೋವೂ ಇಲ್ಲ..ಅಡ್ಡಪರಿಣಾಮವೂ ಇಲ್ಲ..ಲಸಿಕೆ ಹಾಕಿಸಿಕೊಳ್ಳಿ’-ವಿಡಿಯೋ ಸಂದೇಶ ನೀಡಿದ 97ವರ್ಷದ ವೃದ್ಧೆ
ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಸಂದೇಶ ನೀಡಿದ 97ರ ವೃದ್ಧೆ
Lakshmi Hegde
|

Updated on: May 09, 2021 | 4:32 PM

Share

ಕೊರೊನಾ ಲಸಿಕೆ ತೆಗೆದುಕೊಳ್ಳಲು ಯಾರೂ ಹಿಂಜರಿಯಬೇಡಿ. ಪ್ರತಿಯೊಬ್ಬರೂ ವ್ಯಾಕ್ಸಿನ್​ ಹಾಕಿಸಿಕೊಳ್ಳಿ ಎಂದು 97 ವರ್ಷದ ವೃದ್ಧೆಯೊಬ್ಬರು ವಿಡಿಯೋ ಮೂಲಕ ನೀಡಿದ ಸಂದೇಶ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಭಾರತದಲ್ಲಿ ಮೇ 1ರಿಂದ ಮೂರನೇ ಹಂತದ ಕೊರೊನಾ ಲಸಿಕೆ ಅಭಿಯಾನ ಶುರುವಾಗಿದೆ. ಈ ಹಂತದಲ್ಲಿ 18-44ವರ್ಷದವರೆಗಿನ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಎಲ್ಲ ರಾಜ್ಯಗಳಲ್ಲೂ ಇನ್ನೂ ಸರಿಯಾಗಿ ಪ್ರಾರಂಭವಿಲ್ಲ. ಇನ್ನು ಕೆಲವು ಕಡೆಗಳಲ್ಲಿ ಪ್ರಾರಂಭವಾದರೆ ಅಡ್ಡಪರಿಣಾಮದ ಭಯದಿಂದ ಜನರೇ ಹಿಂದೇಟು ಹಾಕುತ್ತಿದ್ದಾರೆ.

ಇದೀಗ 97 ವರ್ಷದ ವೃದ್ಧೆಯೊಬ್ಬರು ಲಸಿಕೆ ಬಗ್ಗೆ ವಿಡಿಯೋವೊಂದನ್ನು ಮಾಡಿದ್ದಾರೆ. ನನಗೆ 97 ವರ್ಷವಾಗಿದೆ. ಮಾರ್ಚ್​ 9ರಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದೇನೆ. ಎರಡನೇ ಡೋಸ್​ ಮೇ 9ರಂದು ಪಡೆಯಬೇಕಿತ್ತು. ಅದಕ್ಕಾಗಿ ಕಾಯುತ್ತಿದ್ದೇನೆ. ನನಗೆ ಲಸಿಕೆ ಪಡೆದುಕೊಂಡ ನಂತರ ಯಾವುದೇ ಅಡ್ಡಪರಿಣಾಮ ಆಗಿಲ್ಲ. ನೋವು, ಜ್ವರ ಏನೂ ಕಾಣಿಸಿಕೊಂಡಿಲ್ಲ. ಯಾರೂ ಲಸಿಕೆಯ ಬಗ್ಗೆ ಹೆದರಬೇಡಿ. ಕೊರೊನಾ ಲಸಿಕೆ ಪಡೆಯುವುದರಿಂದ ನಿಮಗೇ ಒಳ್ಳೆಯದು. ಅಷ್ಟೇ ಅಲ್ಲ, ನಿಮ್ಮ ಸುತ್ತಲೂ ಇರುವವರಿಗೂ ಒಳ್ಳೆಯದೇ. ಲಸಿಕೆ ಸುರಕ್ಷಿತವಾಗಿದ್ದು, ಸಹಜ ಜೀವನ ನಡೆಸಲು ಇದನ್ನು ಪಡೆಯುವುದೊಂದೇ ಮಾರ್ಗ ಎಂದು ಈ ಅಜ್ಜಿ ಹೇಳಿದ್ದನ್ನು ವಿಡಿಯೋದಲ್ಲಿ ಕೇಳಬಹುದು.

ದೇಶದಲ್ಲಿ ಜನವರಿ 16ರಿಂದ ಕೊವಿಡ್ ಲಸಿಕೆ ವಿತರಣೆ ಶುರುವಾಗಿದ್ದು, ಮೊದಲ ಹಂತದಲ್ಲಿ ಕೊವಿಡ್​ ವಾರಿಯರ್ಸ್​ಗೆ ನೀಡಲಾಗಿದೆ. ಎರಡನೇ ಹಂತದಲ್ಲಿ 65 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ಮೇಲ್ಪಟ್ಟು, ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ಹಾಕಲಾಗಿತ್ತು. ನಂತರ ಅದನ್ನು 45 ವರ್ಷ ಮೇಲ್ಪಟ್ಟ ಎಲ್ಲರಿಗೂ ವಿಸ್ತರಿಸಲಾಗಿತ್ತು. ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಕೊಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಕೊವಿನ್ ಆ್ಯಪ್​​ ದಾಖಲೆ ಪ್ರಕಾರ, ಮೇ 1-ಮೇ 7ರ ನಡುವೆ ಸುಮಾರು 11.6 ಮಿಲಿಯನ್​ ಡೋಸ್​ಗಳಷ್ಟು ಲಸಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕೊರೊನಾ ಲಸಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನೀಡಲು ಸರ್ಕಾರಗಳು ಸಿದ್ಧತೆ ನಡೆಸಿವೆ.

ಇದನ್ನೂ ಓದಿ: ಸಂಸದೆ ಸುಮಲತಾ ಅಂಬರೀಶ್ ವಿಶೇಷ ಸಂದರ್ಶನ: ‘ಕರ್ತವ್ಯ ದೋಷದಿಂದ ಒಂದು ಜೀವ ಹೋದ್ರೂ ಅದಕ್ಕೆ ನಾವೇ ಜವಾಬ್ದಾರಿ…‘

Follow Us
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?