AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಚ್ಚಿ: ಐಎನ್‌ಎಸ್ ವಿಕ್ರಾಂತ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಾವಿಕನ ಮೃತದೇಹ ಪತ್ತೆ

ಈ ನಾವಿಕ ಬಿಹಾರದ ಮುಜಾಫರ್‌ಪುರದ ಮೂಲದವರು. ಇವರು ಸಾಮಾನ್ಯ ಕೇಡರ್ ಆಗಿದ್ದು, ಕೇಂದ್ರದ ಅಗ್ನಿವೀರ್ ಯೋಜನೆಯ ಮೂಲಕ ನೇಮಕಗೊಂಡಿಲ್ಲ ಎಂದು ವರದಿಯಾಗಿದೆ.

ಕೊಚ್ಚಿ: ಐಎನ್‌ಎಸ್ ವಿಕ್ರಾಂತ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಾವಿಕನ ಮೃತದೇಹ ಪತ್ತೆ
ಐಎನ್​​ಎಸ್ ವಿಕ್ರಾಂತ್
ರಶ್ಮಿ ಕಲ್ಲಕಟ್ಟ
|

Updated on: Jul 27, 2023 | 4:20 PM

Share

ಕೊಚ್ಚಿ ಜುಲೈ 27: ಭಾರತೀಯ ನೌಕಾಪಡೆಯ (Indian Navy) 19 ವರ್ಷದ ನಾವಿಕನೊಬ್ಬನ ಮೃತದೇಹ ಗುರುವಾರ ಮುಂಜಾನೆ ಐಎನ್‌ಎಸ್ ವಿಕ್ರಾಂತ್ ಹಡಗಿನಲ್ಲಿ (INS Vikrant) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರಸ್ತುತ ನೌಕೆಯನ್ನು ಕೊಚ್ಚಿ (Kochi) ಕರಾವಳಿಯಲ್ಲಿ ನಿಲ್ಲಿಸಲಾಗಿದೆ. ಘಟನೆಯ ಕುರಿತು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಅಧಿಕಾರಿಯೊಬ್ಬರು ಹೇಳಿದ್ದು, ನಾವಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೋರುತ್ತದೆ ಎಂದಿದ್ದಾರೆ.

ಈ ನಾವಿಕ ಬಿಹಾರದ ಮುಜಾಫರ್‌ಪುರದ ಮೂಲದವರು. ಇವರು ಸಾಮಾನ್ಯ ಕೇಡರ್ ಆಗಿದ್ದು, ಕೇಂದ್ರದ ಅಗ್ನಿವೀರ್ ಯೋಜನೆಯ ಮೂಲಕ ನೇಮಕಗೊಂಡಿಲ್ಲ ಎಂದು ವರದಿಯಾಗಿದೆ.

ಜುಲೈ 27ರಂದು ಬೆಳಗ್ಗೆ ಐಎನ್ಎಸ್ ವಿಕ್ರಾಂತ್ ನಲ್ಲಿ 19ರ ಹರೆಯದ  ನಾವಿಕ ಆತ್ಮಹತ್ಯೆ ಮಾಡಿಕೊಂಡ  ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ವರದಿಗಳು ಇದು ಆತ್ಮಹತ್ಯೆ ಪ್ರಕರಣ ಎಂದು ಹೇಳಿವೆ. ತನಿಖಾ ಮಂಡಳಿಗೆ ಆದೇಶ ನೀಡಲಾಗುತ್ತಿದೆ ಮತ್ತು ಸ್ಥಳೀಯ ಪೋಲಿಸ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ.

ಇದನ್ನೂ ಓದಿ:Lok Sabha Elections: ಮುಸ್ಲಿಮರು ಬಿಜೆಪಿ ಬಳಿ ಸುಳಿಯಲ್ಲ ಎನ್ನುವ ಹೊತ್ತಲ್ಲಿ, ಉತ್ತರ ಪ್ರದೇಶದಲ್ಲಿ ಬಿಜೆಪಿಯಿಂದ ಪಸ್ಮಾಂಡ ಸ್ನೇಹ ಯಾತ್ರೆ

ನಾವಿಕನು ಯುದ್ಧನೌಕೆಯ ಕಂಪಾರ್ಟ್‌ಮೆಂಟ್ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಸೆಪ್ಟೆಂಬರ್ 2022 ರಲ್ಲಿ ನೌಕಾಪಡೆಗೆ ನಿಯೋಜಿಸಲ್ಪಟ್ಟ INS ವಿಕ್ರಾಂತ್, M/S ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ಭಾರತದ ಮೊದಲ ಸ್ಥಳೀಯವಾಗಿ ನಿರ್ಮಿಸಿದ ಯುದ್ಧನೌಕೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ