AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಿದ ರಾಜಸ್ಥಾನ ಸಿಎಂ ಭಜನ್​ ಲಾಲ್ ಶರ್ಮಾ

ಇನ್ನುಮುಂದೆ ರಾಜಸ್ಥಾನ ಮುಖ್ಯಮಂತ್ರಿ ಭಜನ್​ಲಾಲ್ ಶರ್ಮಾ ಸಾಮಾನ್ಯರಂತೆಯೇ ಸಂಚರಿಸಲಿದ್ದಾರೆ. ವಿಐಪಿ ಸಂಸ್ಕೃತಿಯನ್ನು ಬದಿಗಿಟ್ಟು ಸಾಮಾನ್ಯ ಜನರ ನಡುವೆ ಸಾಮಾನ್ಯ ಜನರಂತೆಯೇ ಇರಲು ನಿರ್ಧಾರ ಮಾಡಿದ್ದಾರೆ. ಇನ್ನುಮುಂದೆ ಅವರ ಬೆಂಗಾವಲು ವಾಹನವಾಗಲಿ ಅವರ ವಾಹನವಾಗಲಿ ಸಿಗ್ನಲ್​ನಲ್ಲಿ ನಿಲ್ಲಲಿದೆ.

ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಿದ ರಾಜಸ್ಥಾನ ಸಿಎಂ ಭಜನ್​ ಲಾಲ್ ಶರ್ಮಾ
ಭಜನ್​ಲಾಲ್ ಶರ್ಮಾImage Credit source: India Today
ನಯನಾ ರಾಜೀವ್
|

Updated on:Feb 22, 2024 | 8:38 AM

Share

ರಾಜಸ್ಥಾನ ಮುಖ್ಯಮಂತ್ರಿ ಭಜನ್​ ಲಾಲ್ ಶರ್ಮಾ(Bhajan Lal Sharma) ವಿಐಪಿ ಸಂಸ್ಕೃತಿ(VIP Culture)ಗೆ ಅಂತ್ಯ ಹಾಡಿದ್ದಾರೆ. ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿರುವ ಭಜನ್​ಲಾಲ್ ಇನ್ನುಮುಂದೆ ರಸ್ತೆಯಲ್ಲಿ ಸಾಮಾನ್ಯ ಜನರಂತೆ ಸಂಚರಿಸಲಿದ್ದಾರೆ. ಸಿಗ್ನಲ್​ಗಳಲ್ಲಿ ಅವರ ವಾಹನ ಹಾಗೂ ಬೆಂಗಾವಲು ವಾಹನಗಳು ಎಲ್ಲಾ ವಾಹನಗಳು ನಿಲ್ಲುವಂತೆಯೇ ನಿಲ್ಲಲಿದೆ. ಅವರಿಗಾಗಿ ಪ್ರತ್ಯೇಕ ಸಾಲು ಮಾಡಿ ಓಡಾಡುವ ಸಂಸ್ಕೃತಿಯಿಂದ ಹೊರಬಂದಿದ್ದಾರೆ. ಈ ನಿರ್ಧಾರವು ರಾಜಸ್ಥಾನ ಜನತೆಗೆ ಖುಷಿ ತಂದಿದೆ.

ಮುಖ್ಯಮಂತ್ರಿಗಳ ವಾಹನಗಳು ಬಂತೆಂದರೆ ತುರ್ತು ಅಗತ್ಯವಿದ್ದವರು ಕೂಡ ಸಿಗ್ನಲ್​ನಲ್ಲಿ ನಿಲ್ಲಬೇಕಿತ್ತು, ಹೀಗಾಗಿ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದರು. ಇನ್ನುಮುಂದೆ ಈ ಕಿರಿಕಿರಿ ಇರುವುದಿಲ್ಲ. ಭಜನ್​ಲಾಲ್ ಶರ್ಮಾ ಅವರು ಸಹೃದಯತೆ ಹಾಗೂ ಸೂಕ್ಷ್ಮತೆಯಿಂದ ಈ ವಿಚಾರವನ್ನು ಗಮನಿಸಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.

ಭಜನ್​ ಲಾಲ್ ಶರ್ಮಾ 4 ಬಾರಿ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದರು.ಆರ್​ಎಸ್​ಎಸ್​ ಹಾಗೂ ಎಬಿವಿಪಿ ಜತೆ ಸಂಬಂಧ ಹೊಂದಿದ್ದರು. ಶಾಸಕ ಅಶೋಕ್ ಲಾಹೋಟಿ ಅವರ ಟಿಕೆಟ್ ಕಡಿತಗೊಳಿಸಿ ಭಜನ್​ಲಾಲ್​ ಶರ್ಮಾ ಅವರನ್ನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಮಾಡಲಾಗಿತ್ತು.

ಮತ್ತಷ್ಟು ಓದಿ: ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾಗೆ 8 ಖಾತೆ; ದಿಯಾ ಕುಮಾರಿ ಹಣಕಾಸು ಸಚಿವೆ

ವಿಧಾನಸಭೆ ಚುನಾವಣೆಯಲ್ಲಿ ಭಜರ್ರಿ ಗೆಲುವು ಸಾಧಿಸಿದ ನಂತರವೂ ಸಿಎಂ ಸ್ಥಾನಕ್ಕೆ ವಸುಂಧರಾ ರಾಜೇ ಹೆಸರೇ ಮುಂಚೂಣಿಯಲ್ಲಿತ್ತು. ಆದರೆ ಪಕ್ಷದ ಹೈಕಮಾಂಡ್ ಭಜನ್​ಲಾಲ್ ಶರ್ಮಾ ಅವರ ಹೆಸರನ್ನು ಅಂತಿಮಗೊಳಿಸಿತ್ತು. ಆಗ ಎಲ್ಲರಿಗೂ ಆಶ್ಚರ್ಯವಾಗಿತ್ತು. ಮುಖ್ಯಮಂತ್ರಿ ಅವರು ಬುಧವಾರ ಪೊಲೀಸ್ ಮಹಾನಿರ್ದೇಶಕ ಯುಆರ್ ಸಾಹೂ ಅವರಿಗೆ ನಿರ್ಧಾರದ ಕುರಿತು ಸೂಚನೆಗಳನ್ನು ನೀಡಿದರು.

ಮುಖ್ಯಮಂತ್ರಿಗಳಿಗೆ ಒದಗಿಸಲಾದ ಭದ್ರತೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ವಿಐಪಿ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದಂತೆ ಸಾಮಾನ್ಯ ಜನರು ಮತ್ತು ರೋಗಿಗಳು ಎದುರಿಸುತ್ತಿರುವ ಟ್ರಾಫಿಕ್ ಸಮಸ್ಯೆಗಳನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಡಿಜಿಪಿ ಸಾಹೂ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:38 am, Thu, 22 February 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ