AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha: ಪಲ್ಟಿಯಾಗಿ 15 ಅಡಿ ಆಳಕ್ಕೆ ಬಿದ್ದ ಬಸ್​; ಮೂವರು ಪೊಲೀಸರ ದುರ್ಮರಣ, 14ಸಿಬ್ಬಂದಿಗೆ ಗಂಭೀರ ಗಾಯ

ಕೊಸಮಗುಡಾದಲ್ಲಿ ಪಂಚಾಯತ್​ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಈ ವಾಹನ ಅಲ್ಲಿಗೆ ತೆರಳುತ್ತಿತ್ತು. ಪೊಲೀಸರೊಂದಿಗೆ ಕೆಲವರು ಚುನಾವಣಾ ಸಿಬ್ಬಂದಿಯೂ ಇದ್ದರು ಎನ್ನಲಾಗಿದೆ.

Odisha: ಪಲ್ಟಿಯಾಗಿ 15 ಅಡಿ ಆಳಕ್ಕೆ ಬಿದ್ದ ಬಸ್​; ಮೂವರು ಪೊಲೀಸರ ದುರ್ಮರಣ, 14ಸಿಬ್ಬಂದಿಗೆ ಗಂಭೀರ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 19, 2022 | 11:56 AM

Share

ಪೊಲೀಸರು ಪ್ರಯಾಣಿಸುತ್ತಿದ್ದ ಬಸ್​ವೊಂದು ಪಲ್ಟಿಯಾಗಿ, ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟು(3 Cop Died), 14 ಮಂದಿ ಗಾಯಗೊಂಡ ಘಟನೆ ಒಡಿಶಾದ (Odisha) ನಬರಂಗಪುರ ಜಿಲ್ಲೆಯಲ್ಲಿ ನಡೆದಿದೆ. ಗಾಯಾಳು ಪೊಲೀಸರನ್ನು ಪಾಪಡ​​ಹಂಡಿ ಸಿಎಚ್‌ಸಿ ಮತ್ತು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಸ್​​ನಲ್ಲಿ 40-45 ಮಂದಿ ಇದ್ದು, ಪಾಪಡಹಂಡಿಯಿಂದ ಕೊಸಮಗುಡಾಕ್ಕೆ ಪ್ರಯಾಣ ಮಾಡುತ್ತಿದ್ದರು.

ಮಾರ್ಗ ಮಧ್ಯದ ತಿರುವೊಂದರಲ್ಲಿ ಚಾಲಕನಿಗೆ ನಿಯಂತ್ರಣ ತಪ್ಪಿದ ಪರಿಣಾಮ ಬಸ್​ ಆಯತಪ್ಪಿದೆ. ಸುಮಾರು 15 ಅಡಿ ಆಳಕ್ಕೆ ಬಿದ್ದಿದೆ. ಈ ವಿಚಾರವನ್ನು ಸ್ಥಳೀಯರು ಸಮೀಪದ ಠಾಣೆಯ ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ, ಅಲ್ಲಿನವರ ಸಹಾಯದಿಂದ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಹಾಗಿದ್ದಾಗ್ಯೂ ಕೂಡ ಆಸ್ಪತ್ರೆ ತಲುಪುವ ಒಳಗೇ ಮೂವರು ಪೊಲೀಸ್​ ಅಧಿಕಾರಿಗಳು ಮೃತಪಟ್ಟಿದ್ದರು. ಮೃತ ಪೊಲೀಸ್ ಸಿಬ್ಬಂದಿಯನ್ನು ರವಿ ಬಿಸೋಯ್​, ಸಿ.ಎಚ್​.ಸೇಸಾ ರಾವ್​ ಮತ್ತು ಜಗಬಂಧು ಗೌಡ ಎಂದು ಗುರುತಿಸಲಾಗಿದೆ.

ಕೊಸಮಗುಡಾದಲ್ಲಿ ಪಂಚಾಯತ್​ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಈ ವಾಹನ ಅಲ್ಲಿಗೆ ತೆರಳುತ್ತಿತ್ತು. ಪೊಲೀಸರೊಂದಿಗೆ ಕೆಲವರು ಚುನಾವಣಾ ಸಿಬ್ಬಂದಿಯೂ ಇದ್ದರು ಎನ್ನಲಾಗಿದೆ. ದುರ್ಘಟನೆ ಬಗ್ಗೆ ನೋವು ವ್ಯಕ್ತಪಡಿಸಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಟ್ವೀಟ್ ಮಾಡಿದ್ದಾರೆ. ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಮತ್ತು ಗಾಯಗೊಂಡವರು ಬಹುಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅರ್ಜುನ್ ಮ್ಯಾಚ್ ನೋಡಲು ನಾನು ಹೋಗಲ್ಲ.. ಹೋದರೂ ಗುಟ್ಟಾಗಿ ನೋಡಿ ಬಂದು ಬಿಡುತ್ತೇನೆ; ಸಚಿನ್ ತೆಂಡೂಲ್ಕರ್

Published On - 9:55 am, Sat, 19 February 22

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ