AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha: ಪಲ್ಟಿಯಾಗಿ 15 ಅಡಿ ಆಳಕ್ಕೆ ಬಿದ್ದ ಬಸ್​; ಮೂವರು ಪೊಲೀಸರ ದುರ್ಮರಣ, 14ಸಿಬ್ಬಂದಿಗೆ ಗಂಭೀರ ಗಾಯ

ಕೊಸಮಗುಡಾದಲ್ಲಿ ಪಂಚಾಯತ್​ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಈ ವಾಹನ ಅಲ್ಲಿಗೆ ತೆರಳುತ್ತಿತ್ತು. ಪೊಲೀಸರೊಂದಿಗೆ ಕೆಲವರು ಚುನಾವಣಾ ಸಿಬ್ಬಂದಿಯೂ ಇದ್ದರು ಎನ್ನಲಾಗಿದೆ.

Odisha: ಪಲ್ಟಿಯಾಗಿ 15 ಅಡಿ ಆಳಕ್ಕೆ ಬಿದ್ದ ಬಸ್​; ಮೂವರು ಪೊಲೀಸರ ದುರ್ಮರಣ, 14ಸಿಬ್ಬಂದಿಗೆ ಗಂಭೀರ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 19, 2022 | 11:56 AM

Share

ಪೊಲೀಸರು ಪ್ರಯಾಣಿಸುತ್ತಿದ್ದ ಬಸ್​ವೊಂದು ಪಲ್ಟಿಯಾಗಿ, ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟು(3 Cop Died), 14 ಮಂದಿ ಗಾಯಗೊಂಡ ಘಟನೆ ಒಡಿಶಾದ (Odisha) ನಬರಂಗಪುರ ಜಿಲ್ಲೆಯಲ್ಲಿ ನಡೆದಿದೆ. ಗಾಯಾಳು ಪೊಲೀಸರನ್ನು ಪಾಪಡ​​ಹಂಡಿ ಸಿಎಚ್‌ಸಿ ಮತ್ತು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಸ್​​ನಲ್ಲಿ 40-45 ಮಂದಿ ಇದ್ದು, ಪಾಪಡಹಂಡಿಯಿಂದ ಕೊಸಮಗುಡಾಕ್ಕೆ ಪ್ರಯಾಣ ಮಾಡುತ್ತಿದ್ದರು.

ಮಾರ್ಗ ಮಧ್ಯದ ತಿರುವೊಂದರಲ್ಲಿ ಚಾಲಕನಿಗೆ ನಿಯಂತ್ರಣ ತಪ್ಪಿದ ಪರಿಣಾಮ ಬಸ್​ ಆಯತಪ್ಪಿದೆ. ಸುಮಾರು 15 ಅಡಿ ಆಳಕ್ಕೆ ಬಿದ್ದಿದೆ. ಈ ವಿಚಾರವನ್ನು ಸ್ಥಳೀಯರು ಸಮೀಪದ ಠಾಣೆಯ ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ, ಅಲ್ಲಿನವರ ಸಹಾಯದಿಂದ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಹಾಗಿದ್ದಾಗ್ಯೂ ಕೂಡ ಆಸ್ಪತ್ರೆ ತಲುಪುವ ಒಳಗೇ ಮೂವರು ಪೊಲೀಸ್​ ಅಧಿಕಾರಿಗಳು ಮೃತಪಟ್ಟಿದ್ದರು. ಮೃತ ಪೊಲೀಸ್ ಸಿಬ್ಬಂದಿಯನ್ನು ರವಿ ಬಿಸೋಯ್​, ಸಿ.ಎಚ್​.ಸೇಸಾ ರಾವ್​ ಮತ್ತು ಜಗಬಂಧು ಗೌಡ ಎಂದು ಗುರುತಿಸಲಾಗಿದೆ.

ಕೊಸಮಗುಡಾದಲ್ಲಿ ಪಂಚಾಯತ್​ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಈ ವಾಹನ ಅಲ್ಲಿಗೆ ತೆರಳುತ್ತಿತ್ತು. ಪೊಲೀಸರೊಂದಿಗೆ ಕೆಲವರು ಚುನಾವಣಾ ಸಿಬ್ಬಂದಿಯೂ ಇದ್ದರು ಎನ್ನಲಾಗಿದೆ. ದುರ್ಘಟನೆ ಬಗ್ಗೆ ನೋವು ವ್ಯಕ್ತಪಡಿಸಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಟ್ವೀಟ್ ಮಾಡಿದ್ದಾರೆ. ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಮತ್ತು ಗಾಯಗೊಂಡವರು ಬಹುಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅರ್ಜುನ್ ಮ್ಯಾಚ್ ನೋಡಲು ನಾನು ಹೋಗಲ್ಲ.. ಹೋದರೂ ಗುಟ್ಟಾಗಿ ನೋಡಿ ಬಂದು ಬಿಡುತ್ತೇನೆ; ಸಚಿನ್ ತೆಂಡೂಲ್ಕರ್

Published On - 9:55 am, Sat, 19 February 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ