AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha: ಪಲ್ಟಿಯಾಗಿ 15 ಅಡಿ ಆಳಕ್ಕೆ ಬಿದ್ದ ಬಸ್​; ಮೂವರು ಪೊಲೀಸರ ದುರ್ಮರಣ, 14ಸಿಬ್ಬಂದಿಗೆ ಗಂಭೀರ ಗಾಯ

ಕೊಸಮಗುಡಾದಲ್ಲಿ ಪಂಚಾಯತ್​ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಈ ವಾಹನ ಅಲ್ಲಿಗೆ ತೆರಳುತ್ತಿತ್ತು. ಪೊಲೀಸರೊಂದಿಗೆ ಕೆಲವರು ಚುನಾವಣಾ ಸಿಬ್ಬಂದಿಯೂ ಇದ್ದರು ಎನ್ನಲಾಗಿದೆ.

Odisha: ಪಲ್ಟಿಯಾಗಿ 15 ಅಡಿ ಆಳಕ್ಕೆ ಬಿದ್ದ ಬಸ್​; ಮೂವರು ಪೊಲೀಸರ ದುರ್ಮರಣ, 14ಸಿಬ್ಬಂದಿಗೆ ಗಂಭೀರ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 19, 2022 | 11:56 AM

Share

ಪೊಲೀಸರು ಪ್ರಯಾಣಿಸುತ್ತಿದ್ದ ಬಸ್​ವೊಂದು ಪಲ್ಟಿಯಾಗಿ, ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟು(3 Cop Died), 14 ಮಂದಿ ಗಾಯಗೊಂಡ ಘಟನೆ ಒಡಿಶಾದ (Odisha) ನಬರಂಗಪುರ ಜಿಲ್ಲೆಯಲ್ಲಿ ನಡೆದಿದೆ. ಗಾಯಾಳು ಪೊಲೀಸರನ್ನು ಪಾಪಡ​​ಹಂಡಿ ಸಿಎಚ್‌ಸಿ ಮತ್ತು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಸ್​​ನಲ್ಲಿ 40-45 ಮಂದಿ ಇದ್ದು, ಪಾಪಡಹಂಡಿಯಿಂದ ಕೊಸಮಗುಡಾಕ್ಕೆ ಪ್ರಯಾಣ ಮಾಡುತ್ತಿದ್ದರು.

ಮಾರ್ಗ ಮಧ್ಯದ ತಿರುವೊಂದರಲ್ಲಿ ಚಾಲಕನಿಗೆ ನಿಯಂತ್ರಣ ತಪ್ಪಿದ ಪರಿಣಾಮ ಬಸ್​ ಆಯತಪ್ಪಿದೆ. ಸುಮಾರು 15 ಅಡಿ ಆಳಕ್ಕೆ ಬಿದ್ದಿದೆ. ಈ ವಿಚಾರವನ್ನು ಸ್ಥಳೀಯರು ಸಮೀಪದ ಠಾಣೆಯ ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ, ಅಲ್ಲಿನವರ ಸಹಾಯದಿಂದ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಹಾಗಿದ್ದಾಗ್ಯೂ ಕೂಡ ಆಸ್ಪತ್ರೆ ತಲುಪುವ ಒಳಗೇ ಮೂವರು ಪೊಲೀಸ್​ ಅಧಿಕಾರಿಗಳು ಮೃತಪಟ್ಟಿದ್ದರು. ಮೃತ ಪೊಲೀಸ್ ಸಿಬ್ಬಂದಿಯನ್ನು ರವಿ ಬಿಸೋಯ್​, ಸಿ.ಎಚ್​.ಸೇಸಾ ರಾವ್​ ಮತ್ತು ಜಗಬಂಧು ಗೌಡ ಎಂದು ಗುರುತಿಸಲಾಗಿದೆ.

ಕೊಸಮಗುಡಾದಲ್ಲಿ ಪಂಚಾಯತ್​ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಈ ವಾಹನ ಅಲ್ಲಿಗೆ ತೆರಳುತ್ತಿತ್ತು. ಪೊಲೀಸರೊಂದಿಗೆ ಕೆಲವರು ಚುನಾವಣಾ ಸಿಬ್ಬಂದಿಯೂ ಇದ್ದರು ಎನ್ನಲಾಗಿದೆ. ದುರ್ಘಟನೆ ಬಗ್ಗೆ ನೋವು ವ್ಯಕ್ತಪಡಿಸಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಟ್ವೀಟ್ ಮಾಡಿದ್ದಾರೆ. ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಮತ್ತು ಗಾಯಗೊಂಡವರು ಬಹುಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅರ್ಜುನ್ ಮ್ಯಾಚ್ ನೋಡಲು ನಾನು ಹೋಗಲ್ಲ.. ಹೋದರೂ ಗುಟ್ಟಾಗಿ ನೋಡಿ ಬಂದು ಬಿಡುತ್ತೇನೆ; ಸಚಿನ್ ತೆಂಡೂಲ್ಕರ್

Published On - 9:55 am, Sat, 19 February 22

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!