AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಫೋಟ: ಸಿಸಿಟಿವಿಯಲ್ಲಿ ಕಾಣಿಸಿಕೊಂಡ ಆ ಇಬ್ಬರು ಯಾರು?

ಸ್ಫೋಟಗೊಂಡ ಜಾಗದಲ್ಲಿ ಪತ್ರವೊಂದು ಸಿಕ್ಕಿದ್ದು, ಅದರದಲ್ಲಿ ಕಳೆದ ವರ್ಷ ಜನವರಿಯಲ್ಲಿ ಅಮೆರಿಕ ಸೇನೆಯ ದಾಳಿ ವೇಳೆ ಹತ್ಯೆಯಾದ ಇರಾನ್​ನ ಮೇಜರ್​ ಜನರಲ್​ ಆಗಿದ್ದ ಖಾಸಿಂ ಸುಲೇಮಾನಿ ಹೆಸರನ್ನು ಬರೆಯಲಾಗಿದೆ.

ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಫೋಟ: ಸಿಸಿಟಿವಿಯಲ್ಲಿ ಕಾಣಿಸಿಕೊಂಡ ಆ ಇಬ್ಬರು ಯಾರು?
ದೆಹಲಿಯಲ್ಲಿ ಪೊಲೀಸ್ ಕಟ್ಟೆಚ್ಚರ
Lakshmi Hegde
| Edited By: |

Updated on: Jan 30, 2021 | 11:45 AM

Share

ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ಇಸ್ರೇಲಿ ರಾಯಭಾರಿ ಕಚೇರಿ ಬಳಿ ನಿನ್ನೆ ನಡೆದ ಸ್ಫೋಟಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ಈ ಮಧ್ಯೆ ನಿನ್ನೆ ಕ್ಯಾಬ್​ನಲ್ಲಿ ಬಂದ ಇಬ್ಬರು ರಾಯಭಾರಿ ಕಚೇರಿ ಎದುರು ಇಳಿದುಕೊಂಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಸ್ಫೋಟದಲ್ಲಿ ಈ ಇಬ್ಬರ ಪಾತ್ರ ಇದೆಯಾ? ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದೊಡ್ಡದಾದ ಯಾವುದೋ ಸ್ಫೋಟದ ಸಂಚಿಗೆ ಪೂರ್ವಭಾವಿಯಾಗಿ ಇದೊಂದು ಪ್ರಯೋಗ ಎಂದು ಮೂಲಗಳು ತಿಳಿಸಿದ್ದು, ಸದ್ಯ ದೆಹಲಿಯಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ನಿನ್ನೆಯ ಸ್ಫೋಟಕದಲ್ಲಿ ಅಮೋನಿಯಂ ನೈಟ್ರೇಟ್​ ಬಳಕೆಯಾಗಿದೆ ಎಂದು ವಿಧಿವಿಜ್ಞಾನ ತಂಡ ತಿಳಿಸಿದೆ. ಅಲ್ಲದೆ, ಸ್ಫೋಟಗೊಂಡ ಜಾಗದಲ್ಲಿ ಸಣ್ಣ ಕಂದಕವೂ ಉಂಟಾಗಿದೆ. ಒಂದೊಮ್ಮೆ ಆರ್​ಡಿಎಕ್​ ಸ್ಫೋಟಕವಾಗಿದ್ದರೆ, ಪರಿಣಾಮ ಇನ್ನೂ ಗಂಭೀರವಾಗಿರುತ್ತಿತ್ತು ಎನ್ನಲಾಗಿದೆ.

ಇನ್ನು ಸ್ಫೋಟಗೊಂಡ ಜಾಗದಲ್ಲಿನ ಪ್ರತ್ಯೇಕ ಸಿಸಿಟಿವಿ ಫೂಟೇಜ್​, ಅರ್ಧ ಸುಟ್ಟ ಗುಲಾಬಿ ಬಣ್ಣದ ಸ್ಕಾರ್ಫ್​ ಮತ್ತು ಇಸ್ರೇಲಿ ರಾಯಭಾರಿ ವಿಳಾಸ ಬರೆದಿದ್ದ ಎನ್ವೆಲಪ್​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲಿಯೇ ಪಕ್ಕದಲ್ಲಿದ್ದ ಮರದ ಹಿಂದೆ ಕ್ಯಾಮರಾವೊಂದನ್ನು ಅಳವಡಿಸಿದ್ದನ್ನು ಪತ್ತೆಹಚ್ಚಲಾಗಿದೆ. ಈ ಕ್ಯಾಮರಾ ಫೂಟೇಜ್​ಗಳು ಸ್ಪಷ್ಟವಾಗಿಲ್ಲ, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೇ ಈ ಎಲ್ಲ ವಸ್ತುಗಳ ಮೇಲಿನ ಫಿಂಗರ್​ಪ್ರಿಂಟ್ ಚೆಕ್​ ಕೂಡ ಮಾಡಲಾಗುತ್ತಿದೆ.

ಇಸ್ರೇಲಿ ರಾಯಭಾರಿ ಕಚೇರಿಗೆ ರಕ್ಷಣೆ ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಕಡಿಮೆ ತೀವ್ರತೆಯ ಸ್ಫೋಟ ಉಂಟಾದ ಬೆನ್ನಲ್ಲೇ, ಕಚೇರಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇಸ್ರೇಲಿ ರಾಯಭಾರಿ ಕಚೇರಿಗೆ ಅಷ್ಟೇ ಅಲ್ಲ, ದೆಹಲಿ ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್​ ಹೆಚ್ಚಿಸಲಾಗಿದೆ.

ಇರಾನಿಯನ್​ ಲಿಂಕ್​ ಸ್ಫೋಟಗೊಂಡ ಜಾಗದಲ್ಲಿ ಪತ್ರವೊಂದು ಸಿಕ್ಕಿದ್ದು, ಅದರದಲ್ಲಿ ಕಳೆದ ವರ್ಷ ಜನವರಿಯಲ್ಲಿ ಅಮೆರಿಕ ಸೇನೆಯ ದಾಳಿ ವೇಳೆ ಹತ್ಯೆಯಾದ ಇರಾನ್​ನ ಮೇಜರ್​ ಜನರಲ್​ ಆಗಿದ್ದ ಖಾಸಿಂ ಸುಲೇಮಾನಿ ಹೆಸರನ್ನು ಬರೆಯಲಾಗಿದೆ. ಅಷ್ಟೇ ಅಲ್ಲ, ಇದು ಟ್ರೇಲರ್​ ಅಷ್ಟೇ ಎಂಬ ಎಚ್ಚರಿಕೆಯ ವಾಕ್ಯವೂ ಇದೆ.

ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್​ ಎಸೆದು ಹೋಗಿರುವ ಶಂಕೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ