Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಫೋಟ: ಸಿಸಿಟಿವಿಯಲ್ಲಿ ಕಾಣಿಸಿಕೊಂಡ ಆ ಇಬ್ಬರು ಯಾರು?

ಸ್ಫೋಟಗೊಂಡ ಜಾಗದಲ್ಲಿ ಪತ್ರವೊಂದು ಸಿಕ್ಕಿದ್ದು, ಅದರದಲ್ಲಿ ಕಳೆದ ವರ್ಷ ಜನವರಿಯಲ್ಲಿ ಅಮೆರಿಕ ಸೇನೆಯ ದಾಳಿ ವೇಳೆ ಹತ್ಯೆಯಾದ ಇರಾನ್​ನ ಮೇಜರ್​ ಜನರಲ್​ ಆಗಿದ್ದ ಖಾಸಿಂ ಸುಲೇಮಾನಿ ಹೆಸರನ್ನು ಬರೆಯಲಾಗಿದೆ.

ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಫೋಟ: ಸಿಸಿಟಿವಿಯಲ್ಲಿ ಕಾಣಿಸಿಕೊಂಡ ಆ ಇಬ್ಬರು ಯಾರು?
ದೆಹಲಿಯಲ್ಲಿ ಪೊಲೀಸ್ ಕಟ್ಟೆಚ್ಚರ
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Jan 30, 2021 | 11:45 AM

ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ಇಸ್ರೇಲಿ ರಾಯಭಾರಿ ಕಚೇರಿ ಬಳಿ ನಿನ್ನೆ ನಡೆದ ಸ್ಫೋಟಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ಈ ಮಧ್ಯೆ ನಿನ್ನೆ ಕ್ಯಾಬ್​ನಲ್ಲಿ ಬಂದ ಇಬ್ಬರು ರಾಯಭಾರಿ ಕಚೇರಿ ಎದುರು ಇಳಿದುಕೊಂಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಸ್ಫೋಟದಲ್ಲಿ ಈ ಇಬ್ಬರ ಪಾತ್ರ ಇದೆಯಾ? ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದೊಡ್ಡದಾದ ಯಾವುದೋ ಸ್ಫೋಟದ ಸಂಚಿಗೆ ಪೂರ್ವಭಾವಿಯಾಗಿ ಇದೊಂದು ಪ್ರಯೋಗ ಎಂದು ಮೂಲಗಳು ತಿಳಿಸಿದ್ದು, ಸದ್ಯ ದೆಹಲಿಯಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ನಿನ್ನೆಯ ಸ್ಫೋಟಕದಲ್ಲಿ ಅಮೋನಿಯಂ ನೈಟ್ರೇಟ್​ ಬಳಕೆಯಾಗಿದೆ ಎಂದು ವಿಧಿವಿಜ್ಞಾನ ತಂಡ ತಿಳಿಸಿದೆ. ಅಲ್ಲದೆ, ಸ್ಫೋಟಗೊಂಡ ಜಾಗದಲ್ಲಿ ಸಣ್ಣ ಕಂದಕವೂ ಉಂಟಾಗಿದೆ. ಒಂದೊಮ್ಮೆ ಆರ್​ಡಿಎಕ್​ ಸ್ಫೋಟಕವಾಗಿದ್ದರೆ, ಪರಿಣಾಮ ಇನ್ನೂ ಗಂಭೀರವಾಗಿರುತ್ತಿತ್ತು ಎನ್ನಲಾಗಿದೆ.

ಇನ್ನು ಸ್ಫೋಟಗೊಂಡ ಜಾಗದಲ್ಲಿನ ಪ್ರತ್ಯೇಕ ಸಿಸಿಟಿವಿ ಫೂಟೇಜ್​, ಅರ್ಧ ಸುಟ್ಟ ಗುಲಾಬಿ ಬಣ್ಣದ ಸ್ಕಾರ್ಫ್​ ಮತ್ತು ಇಸ್ರೇಲಿ ರಾಯಭಾರಿ ವಿಳಾಸ ಬರೆದಿದ್ದ ಎನ್ವೆಲಪ್​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲಿಯೇ ಪಕ್ಕದಲ್ಲಿದ್ದ ಮರದ ಹಿಂದೆ ಕ್ಯಾಮರಾವೊಂದನ್ನು ಅಳವಡಿಸಿದ್ದನ್ನು ಪತ್ತೆಹಚ್ಚಲಾಗಿದೆ. ಈ ಕ್ಯಾಮರಾ ಫೂಟೇಜ್​ಗಳು ಸ್ಪಷ್ಟವಾಗಿಲ್ಲ, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೇ ಈ ಎಲ್ಲ ವಸ್ತುಗಳ ಮೇಲಿನ ಫಿಂಗರ್​ಪ್ರಿಂಟ್ ಚೆಕ್​ ಕೂಡ ಮಾಡಲಾಗುತ್ತಿದೆ.

ಇಸ್ರೇಲಿ ರಾಯಭಾರಿ ಕಚೇರಿಗೆ ರಕ್ಷಣೆ ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಕಡಿಮೆ ತೀವ್ರತೆಯ ಸ್ಫೋಟ ಉಂಟಾದ ಬೆನ್ನಲ್ಲೇ, ಕಚೇರಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇಸ್ರೇಲಿ ರಾಯಭಾರಿ ಕಚೇರಿಗೆ ಅಷ್ಟೇ ಅಲ್ಲ, ದೆಹಲಿ ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್​ ಹೆಚ್ಚಿಸಲಾಗಿದೆ.

ಇರಾನಿಯನ್​ ಲಿಂಕ್​ ಸ್ಫೋಟಗೊಂಡ ಜಾಗದಲ್ಲಿ ಪತ್ರವೊಂದು ಸಿಕ್ಕಿದ್ದು, ಅದರದಲ್ಲಿ ಕಳೆದ ವರ್ಷ ಜನವರಿಯಲ್ಲಿ ಅಮೆರಿಕ ಸೇನೆಯ ದಾಳಿ ವೇಳೆ ಹತ್ಯೆಯಾದ ಇರಾನ್​ನ ಮೇಜರ್​ ಜನರಲ್​ ಆಗಿದ್ದ ಖಾಸಿಂ ಸುಲೇಮಾನಿ ಹೆಸರನ್ನು ಬರೆಯಲಾಗಿದೆ. ಅಷ್ಟೇ ಅಲ್ಲ, ಇದು ಟ್ರೇಲರ್​ ಅಷ್ಟೇ ಎಂಬ ಎಚ್ಚರಿಕೆಯ ವಾಕ್ಯವೂ ಇದೆ.

ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್​ ಎಸೆದು ಹೋಗಿರುವ ಶಂಕೆ

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ