AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಫೋಟ: ಸಿಸಿಟಿವಿಯಲ್ಲಿ ಕಾಣಿಸಿಕೊಂಡ ಆ ಇಬ್ಬರು ಯಾರು?

ಸ್ಫೋಟಗೊಂಡ ಜಾಗದಲ್ಲಿ ಪತ್ರವೊಂದು ಸಿಕ್ಕಿದ್ದು, ಅದರದಲ್ಲಿ ಕಳೆದ ವರ್ಷ ಜನವರಿಯಲ್ಲಿ ಅಮೆರಿಕ ಸೇನೆಯ ದಾಳಿ ವೇಳೆ ಹತ್ಯೆಯಾದ ಇರಾನ್​ನ ಮೇಜರ್​ ಜನರಲ್​ ಆಗಿದ್ದ ಖಾಸಿಂ ಸುಲೇಮಾನಿ ಹೆಸರನ್ನು ಬರೆಯಲಾಗಿದೆ.

ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಫೋಟ: ಸಿಸಿಟಿವಿಯಲ್ಲಿ ಕಾಣಿಸಿಕೊಂಡ ಆ ಇಬ್ಬರು ಯಾರು?
ದೆಹಲಿಯಲ್ಲಿ ಪೊಲೀಸ್ ಕಟ್ಟೆಚ್ಚರ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 30, 2021 | 11:45 AM

Share

ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ಇಸ್ರೇಲಿ ರಾಯಭಾರಿ ಕಚೇರಿ ಬಳಿ ನಿನ್ನೆ ನಡೆದ ಸ್ಫೋಟಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ಈ ಮಧ್ಯೆ ನಿನ್ನೆ ಕ್ಯಾಬ್​ನಲ್ಲಿ ಬಂದ ಇಬ್ಬರು ರಾಯಭಾರಿ ಕಚೇರಿ ಎದುರು ಇಳಿದುಕೊಂಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಸ್ಫೋಟದಲ್ಲಿ ಈ ಇಬ್ಬರ ಪಾತ್ರ ಇದೆಯಾ? ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದೊಡ್ಡದಾದ ಯಾವುದೋ ಸ್ಫೋಟದ ಸಂಚಿಗೆ ಪೂರ್ವಭಾವಿಯಾಗಿ ಇದೊಂದು ಪ್ರಯೋಗ ಎಂದು ಮೂಲಗಳು ತಿಳಿಸಿದ್ದು, ಸದ್ಯ ದೆಹಲಿಯಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ನಿನ್ನೆಯ ಸ್ಫೋಟಕದಲ್ಲಿ ಅಮೋನಿಯಂ ನೈಟ್ರೇಟ್​ ಬಳಕೆಯಾಗಿದೆ ಎಂದು ವಿಧಿವಿಜ್ಞಾನ ತಂಡ ತಿಳಿಸಿದೆ. ಅಲ್ಲದೆ, ಸ್ಫೋಟಗೊಂಡ ಜಾಗದಲ್ಲಿ ಸಣ್ಣ ಕಂದಕವೂ ಉಂಟಾಗಿದೆ. ಒಂದೊಮ್ಮೆ ಆರ್​ಡಿಎಕ್​ ಸ್ಫೋಟಕವಾಗಿದ್ದರೆ, ಪರಿಣಾಮ ಇನ್ನೂ ಗಂಭೀರವಾಗಿರುತ್ತಿತ್ತು ಎನ್ನಲಾಗಿದೆ.

ಇನ್ನು ಸ್ಫೋಟಗೊಂಡ ಜಾಗದಲ್ಲಿನ ಪ್ರತ್ಯೇಕ ಸಿಸಿಟಿವಿ ಫೂಟೇಜ್​, ಅರ್ಧ ಸುಟ್ಟ ಗುಲಾಬಿ ಬಣ್ಣದ ಸ್ಕಾರ್ಫ್​ ಮತ್ತು ಇಸ್ರೇಲಿ ರಾಯಭಾರಿ ವಿಳಾಸ ಬರೆದಿದ್ದ ಎನ್ವೆಲಪ್​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲಿಯೇ ಪಕ್ಕದಲ್ಲಿದ್ದ ಮರದ ಹಿಂದೆ ಕ್ಯಾಮರಾವೊಂದನ್ನು ಅಳವಡಿಸಿದ್ದನ್ನು ಪತ್ತೆಹಚ್ಚಲಾಗಿದೆ. ಈ ಕ್ಯಾಮರಾ ಫೂಟೇಜ್​ಗಳು ಸ್ಪಷ್ಟವಾಗಿಲ್ಲ, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೇ ಈ ಎಲ್ಲ ವಸ್ತುಗಳ ಮೇಲಿನ ಫಿಂಗರ್​ಪ್ರಿಂಟ್ ಚೆಕ್​ ಕೂಡ ಮಾಡಲಾಗುತ್ತಿದೆ.

ಇಸ್ರೇಲಿ ರಾಯಭಾರಿ ಕಚೇರಿಗೆ ರಕ್ಷಣೆ ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಕಡಿಮೆ ತೀವ್ರತೆಯ ಸ್ಫೋಟ ಉಂಟಾದ ಬೆನ್ನಲ್ಲೇ, ಕಚೇರಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇಸ್ರೇಲಿ ರಾಯಭಾರಿ ಕಚೇರಿಗೆ ಅಷ್ಟೇ ಅಲ್ಲ, ದೆಹಲಿ ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್​ ಹೆಚ್ಚಿಸಲಾಗಿದೆ.

ಇರಾನಿಯನ್​ ಲಿಂಕ್​ ಸ್ಫೋಟಗೊಂಡ ಜಾಗದಲ್ಲಿ ಪತ್ರವೊಂದು ಸಿಕ್ಕಿದ್ದು, ಅದರದಲ್ಲಿ ಕಳೆದ ವರ್ಷ ಜನವರಿಯಲ್ಲಿ ಅಮೆರಿಕ ಸೇನೆಯ ದಾಳಿ ವೇಳೆ ಹತ್ಯೆಯಾದ ಇರಾನ್​ನ ಮೇಜರ್​ ಜನರಲ್​ ಆಗಿದ್ದ ಖಾಸಿಂ ಸುಲೇಮಾನಿ ಹೆಸರನ್ನು ಬರೆಯಲಾಗಿದೆ. ಅಷ್ಟೇ ಅಲ್ಲ, ಇದು ಟ್ರೇಲರ್​ ಅಷ್ಟೇ ಎಂಬ ಎಚ್ಚರಿಕೆಯ ವಾಕ್ಯವೂ ಇದೆ.

ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್​ ಎಸೆದು ಹೋಗಿರುವ ಶಂಕೆ

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ