AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಫೋಟ: ಸಿಸಿಟಿವಿಯಲ್ಲಿ ಕಾಣಿಸಿಕೊಂಡ ಆ ಇಬ್ಬರು ಯಾರು?

ಸ್ಫೋಟಗೊಂಡ ಜಾಗದಲ್ಲಿ ಪತ್ರವೊಂದು ಸಿಕ್ಕಿದ್ದು, ಅದರದಲ್ಲಿ ಕಳೆದ ವರ್ಷ ಜನವರಿಯಲ್ಲಿ ಅಮೆರಿಕ ಸೇನೆಯ ದಾಳಿ ವೇಳೆ ಹತ್ಯೆಯಾದ ಇರಾನ್​ನ ಮೇಜರ್​ ಜನರಲ್​ ಆಗಿದ್ದ ಖಾಸಿಂ ಸುಲೇಮಾನಿ ಹೆಸರನ್ನು ಬರೆಯಲಾಗಿದೆ.

ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಫೋಟ: ಸಿಸಿಟಿವಿಯಲ್ಲಿ ಕಾಣಿಸಿಕೊಂಡ ಆ ಇಬ್ಬರು ಯಾರು?
ದೆಹಲಿಯಲ್ಲಿ ಪೊಲೀಸ್ ಕಟ್ಟೆಚ್ಚರ
Lakshmi Hegde
| Edited By: |

Updated on: Jan 30, 2021 | 11:45 AM

Share

ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ಇಸ್ರೇಲಿ ರಾಯಭಾರಿ ಕಚೇರಿ ಬಳಿ ನಿನ್ನೆ ನಡೆದ ಸ್ಫೋಟಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ಈ ಮಧ್ಯೆ ನಿನ್ನೆ ಕ್ಯಾಬ್​ನಲ್ಲಿ ಬಂದ ಇಬ್ಬರು ರಾಯಭಾರಿ ಕಚೇರಿ ಎದುರು ಇಳಿದುಕೊಂಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಸ್ಫೋಟದಲ್ಲಿ ಈ ಇಬ್ಬರ ಪಾತ್ರ ಇದೆಯಾ? ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದೊಡ್ಡದಾದ ಯಾವುದೋ ಸ್ಫೋಟದ ಸಂಚಿಗೆ ಪೂರ್ವಭಾವಿಯಾಗಿ ಇದೊಂದು ಪ್ರಯೋಗ ಎಂದು ಮೂಲಗಳು ತಿಳಿಸಿದ್ದು, ಸದ್ಯ ದೆಹಲಿಯಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ನಿನ್ನೆಯ ಸ್ಫೋಟಕದಲ್ಲಿ ಅಮೋನಿಯಂ ನೈಟ್ರೇಟ್​ ಬಳಕೆಯಾಗಿದೆ ಎಂದು ವಿಧಿವಿಜ್ಞಾನ ತಂಡ ತಿಳಿಸಿದೆ. ಅಲ್ಲದೆ, ಸ್ಫೋಟಗೊಂಡ ಜಾಗದಲ್ಲಿ ಸಣ್ಣ ಕಂದಕವೂ ಉಂಟಾಗಿದೆ. ಒಂದೊಮ್ಮೆ ಆರ್​ಡಿಎಕ್​ ಸ್ಫೋಟಕವಾಗಿದ್ದರೆ, ಪರಿಣಾಮ ಇನ್ನೂ ಗಂಭೀರವಾಗಿರುತ್ತಿತ್ತು ಎನ್ನಲಾಗಿದೆ.

ಇನ್ನು ಸ್ಫೋಟಗೊಂಡ ಜಾಗದಲ್ಲಿನ ಪ್ರತ್ಯೇಕ ಸಿಸಿಟಿವಿ ಫೂಟೇಜ್​, ಅರ್ಧ ಸುಟ್ಟ ಗುಲಾಬಿ ಬಣ್ಣದ ಸ್ಕಾರ್ಫ್​ ಮತ್ತು ಇಸ್ರೇಲಿ ರಾಯಭಾರಿ ವಿಳಾಸ ಬರೆದಿದ್ದ ಎನ್ವೆಲಪ್​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲಿಯೇ ಪಕ್ಕದಲ್ಲಿದ್ದ ಮರದ ಹಿಂದೆ ಕ್ಯಾಮರಾವೊಂದನ್ನು ಅಳವಡಿಸಿದ್ದನ್ನು ಪತ್ತೆಹಚ್ಚಲಾಗಿದೆ. ಈ ಕ್ಯಾಮರಾ ಫೂಟೇಜ್​ಗಳು ಸ್ಪಷ್ಟವಾಗಿಲ್ಲ, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೇ ಈ ಎಲ್ಲ ವಸ್ತುಗಳ ಮೇಲಿನ ಫಿಂಗರ್​ಪ್ರಿಂಟ್ ಚೆಕ್​ ಕೂಡ ಮಾಡಲಾಗುತ್ತಿದೆ.

ಇಸ್ರೇಲಿ ರಾಯಭಾರಿ ಕಚೇರಿಗೆ ರಕ್ಷಣೆ ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಕಡಿಮೆ ತೀವ್ರತೆಯ ಸ್ಫೋಟ ಉಂಟಾದ ಬೆನ್ನಲ್ಲೇ, ಕಚೇರಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇಸ್ರೇಲಿ ರಾಯಭಾರಿ ಕಚೇರಿಗೆ ಅಷ್ಟೇ ಅಲ್ಲ, ದೆಹಲಿ ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್​ ಹೆಚ್ಚಿಸಲಾಗಿದೆ.

ಇರಾನಿಯನ್​ ಲಿಂಕ್​ ಸ್ಫೋಟಗೊಂಡ ಜಾಗದಲ್ಲಿ ಪತ್ರವೊಂದು ಸಿಕ್ಕಿದ್ದು, ಅದರದಲ್ಲಿ ಕಳೆದ ವರ್ಷ ಜನವರಿಯಲ್ಲಿ ಅಮೆರಿಕ ಸೇನೆಯ ದಾಳಿ ವೇಳೆ ಹತ್ಯೆಯಾದ ಇರಾನ್​ನ ಮೇಜರ್​ ಜನರಲ್​ ಆಗಿದ್ದ ಖಾಸಿಂ ಸುಲೇಮಾನಿ ಹೆಸರನ್ನು ಬರೆಯಲಾಗಿದೆ. ಅಷ್ಟೇ ಅಲ್ಲ, ಇದು ಟ್ರೇಲರ್​ ಅಷ್ಟೇ ಎಂಬ ಎಚ್ಚರಿಕೆಯ ವಾಕ್ಯವೂ ಇದೆ.

ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್​ ಎಸೆದು ಹೋಗಿರುವ ಶಂಕೆ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್