AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ರಾಷ್ಟ್ರ, ಒಂದು ಚುನಾವಣೆ ಸಾಧಕ-ಭಾದಕ ತಿಳಿಯಲು ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ

one nation, one election: ಒಂದು ರಾಷ್ಟ್ರ, ಒಂದು ಚುನಾವಣೆಯ ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ರಚಿಸಲಿದೆ. ದೆಹಲಿಯ ಜಿ 20 ಶೃಂಗಸಭೆಯ ನಂತರ ವಿಶೇಷ ಅಧಿವೇಶನ ನಡೆಯಲಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಸಾಧಕ-ಭಾದಕ ತಿಳಿಯಲು ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 01, 2023 | 9:55 AM

Share

ದೆಹಲಿ. ಸೆ.1: ಸೆ.18ರಿಂದ ಸೆ.22ರವರೆಗೆ ವಿಶೇಷ ಸಂಸತ್​​ ಸದನ ನಡೆಯಲಿದೆ ಎಂದು ಕೇಂದ್ರ ಸರ್ಕಾರ ನೆನ್ನೆ (ಆ.31) ತಿಸಿಳಿತ್ತು. ಹಲವು ಮಸೂದೆಯನ್ನು ಮಂಡಿಸಲು ಬಾಕಿ ಇರುವ ಕಾರಣ ಈ ವಿಶೇಷ ಅಧಿವೇಶವನ್ನು ಕರೆಯಲಾಗಿದೆ. ಇದೀಗ ಇದಕ್ಕೂ ಮುನ್ನ ಒಂದು ರಾಷ್ಟ್ರ, ಒಂದು ಚುನಾವಣೆ( one nation one election) ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ( Ram Nath Kovind) ನೇತೃತ್ವದ ಸಮಿತಿಯನ್ನು ಕೇಂದ್ರ ರಚಿಸಲಿದೆ. ದೆಹಲಿಯ ಜಿ 20 ಶೃಂಗಸಭೆಯ ನಂತರ ವಿಶೇಷ ಅಧಿವೇಶನ ನಡೆಯಲಿದೆ. ಜಿ.20 ಭಾರತದ ಅಂತರಾಷ್ಟ್ರೀಯ ಸ್ಥಾನಮಾನವನ್ನು ಗುರುತಿಸುವ ಸಂಕೇತವೆಂದು ಸರ್ಕಾರ ಹೇಳಿದೆ.

ಈ ವಿಶೇಷ ಅಧಿವೇಶನದ ಶಾಸಕಾಂಗ ಕಾರ್ಯಸೂಚಿಯ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಈ ಅಧಿವೇಶ ಮುಂದಿನ ಸಾರ್ವತ್ರಿಕ ಚುನಾವಣೆಗಳಿಗೆ ಬಲವಾದ ರಾಜಕೀಯ ಸಂದೇಶವನ್ನು ನೀಡುವಂತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಸೆಪ್ಟೆಂಬರ್​ 18 ರಿಂದ 22ರವರೆಗೆ ಸಂಸತ್ ವಿಶೇಷ ಅಧಿವೇಶನ

ಇನ್ನು ಈಗಾಗಲೇ ಚರ್ಚೆಯಲ್ಲಿರುವ ‘ಒಂದು ರಾಷ್ಟ್ರ-ಒಂದು ಚುನಾವಣೆ’ ಮಸೂದೆಯು ಸ್ವಲ್ಪ ಸಮಯದವರೆಗೆ ಸರ್ಕಾರದ ಕಾರ್ಯಸೂಚಿಯಲ್ಲಿರಲಿದೆ. ಈ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡುತ್ತದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ರಾಜ್ಯ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವ ರೀತಿಯ ಅಭಿಪ್ರಾಯ ಇದೆ ಜತೆಗೆ ಕೇಂದ್ರದ ಈ ನಿಲುವಿನ ಬಗ್ಗೆ ಪಕ್ಷಗಳು ಹಾಗೂ ಸಾರ್ವಜನಿಕ ವಲಯದಲ್ಲಿ ಯಾವ ರೀತಿಯಲ್ಲಿ ಚರ್ಚೆಯಾಗುತ್ತಿದೆ ಎಂಬುದನ್ನು ಅಧ್ಯಯನ ನಡೆಸಲು ಕೇಂದ್ರವು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯೊಂದನ್ನು ರಚಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ