AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಮನ್ ಕಿ ಬಾತ್ ಪಯಣ.. ರಾಷ್ಟ್ರಪತಿ ದ್ರೌಪದಿಗೆ ಶತ ಸಂಚಿಕೆಗಳ ಪುಸ್ತಕ ಹಸ್ತಾಂತರ

PM Modi Mann Ki Baat: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ರೇಡಿಯೋ ಪ್ರಸಾರದ, ವೆಸ್ಟ್‌ಲ್ಯಾಂಡ್ ಪ್ರಕಟಿಸಿದ ಪುಸ್ತಕವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವೀಕರಿಸಿದರು. ನವೆಂಬರ್ 10 'ಇಗ್ನೈಟಿಂಗ್ ಕಲೆಕ್ಟಿವ್ ಗುಡ್‌ನೆಸ್: ಮನ್ ಕಿ ಬಾತ್ @ 100' ಪ್ರತಿಯನ್ನು ಬ್ಲೂಕ್ರಾಫ್ಟ್ ಸಿಇಒ ಅಖಿಲೇಶ್ ಮಿಶ್ರಾ ಅವರು ರಾಷ್ಟ್ರಪತಿ ಮುರ್ಮುಗೆ ಹಸ್ತಾಂತರಿಸಿದರು.

ಪ್ರಧಾನಿ ಮೋದಿ ಮನ್ ಕಿ ಬಾತ್ ಪಯಣ.. ರಾಷ್ಟ್ರಪತಿ ದ್ರೌಪದಿಗೆ ಶತ ಸಂಚಿಕೆಗಳ ಪುಸ್ತಕ ಹಸ್ತಾಂತರ
ಪ್ರಧಾನಿ ಮೋದಿ ಮನ್ ಕಿ ಬಾತ್ ಪಯಣ.. ರಾಷ್ಟ್ರಪತಿ ದ್ರೌಪದಿಗೆ ಶತ ಸಂಚಿಕೆಗಳ ಪುಸ್ತಕ ಹಸ್ತಾಂತರ
ಸಾಧು ಶ್ರೀನಾಥ್​
|

Updated on: Nov 11, 2023 | 12:15 PM

Share

ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮ ಜನರಿಗೆ ತುಂಬಾ ಹತ್ತಿರವಾಗಿದೆ. ದೇಶದ ಜನರೊಂದಿಗೆ ಸಂಪರ್ಕ ಸಾಧಿಸುವ ಉದ್ದೇಶದಿಂದ ಪ್ರಾರಂಭವಾಗಿರುವ ಈ ರೇಡಿಯೋ ಕಾರ್ಯಕ್ರಮದ ಮೂಲಕ ಪ್ರಧಾನಿ ಮೋದಿ ತಿಂಗಳ ಕೊನೆಯ ಭಾನುವಾರದಂದು ವಿವಿಧ ವಿಷಯಗಳ ಕುರಿತು ಜನರನ್ನು ಉದ್ದೇಶಿಸಿ ಮಾತನಾಡುತ್ತಾರೆ. ಅಂತಾರಾಷ್ಟ್ರೀಯ ಸಮಸ್ಯೆಗಳು, ದೇಶದ ದೂರದ ಪ್ರದೇಶಗಳಲ್ಲಿ ನಡೆಯುತ್ತಿರುವ ಸಂಗತಿಗಳು, ಭಾರತೀಯರ ಸಾಧನೆಗಳು ಸೇರಿದಂತೆ ಹಲವಾರು ವಿಷಯಗಳನ್ನು ಪ್ರಧಾನಿ ಮೋದಿ ಜನರೊಂದಿಗೆ ಹಂಚಿಕೊಳ್ಳುತ್ತಾರೆ. ಮೋದಿಯವರು ಪ್ರತಿಷ್ಠಿತವಾಗಿ ನಿರ್ವಹಿಸುವ ಈ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮ ಬಹಳಷ್ಟು ಕೇಳುಗರನ್ನು ಪಡೆದಿದೆ. ಇತ್ತೀಚೆಗೆ ‘ಮನ್ ಕಿ ಬಾತ್’ 100 ಸಂಚಿಕೆಗಳನ್ನು ಪೂರೈಸಿದೆ. ಈ ನಿಟ್ಟಿನಲ್ಲಿ, ವೆಸ್ಟ್‌ಲ್ಯಾಂಡ್, ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಪುಸ್ತಕವನ್ನು ಪ್ರಕಟಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ರೇಡಿಯೋ ಪ್ರಸಾರದ, ವೆಸ್ಟ್‌ಲ್ಯಾಂಡ್ ಪ್ರಕಟಿಸಿದ ಪುಸ್ತಕವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವೀಕರಿಸಿದರು. ನವೆಂಬರ್ 10 ‘ಇಗ್ನೈಟಿಂಗ್ ಕಲೆಕ್ಟಿವ್ ಗುಡ್‌ನೆಸ್: ಮನ್ ಕಿ ಬಾತ್ @ 100’ ಪ್ರತಿಯನ್ನು ಬ್ಲೂಕ್ರಾಫ್ಟ್ ಸಿಇಒ ಅಖಿಲೇಶ್ ಮಿಶ್ರಾ ಅವರು ರಾಷ್ಟ್ರಪತಿ ಮುರ್ಮುಗೆ ಹಸ್ತಾಂತರಿಸಿದರು. ಈ ನಿಟ್ಟಿನಲ್ಲಿ ಅಖಿಲೇಶ್ ಮಿಶ್ರಾ ಅವರು ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷ ಮುರ್ಮು ಅವರನ್ನು ಭೇಟಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದ 100 ಸಂಚಿಕೆಗಳನ್ನು ಈ ಪುಸ್ತಕದಲ್ಲಿ ಪ್ರಸ್ತುತಪಡಿಸಲಾಗಿದೆ. ರೇಡಿಯೋ ಶೋ ಪ್ರಯಾಣಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳೊಂದಿಗೆ ಈ ಪುಸ್ತಕವನ್ನು ಸಿದ್ಧಪಡಿಸಲಾಗಿದೆ.

‘ಇಗ್ನೈಟಿಂಗ್ ಕಲೆಕ್ಟಿವ್ ಗುಡ್‌ನೆಸ್: ಮನ್ ಕಿ ಬಾತ್ @100’ ಮೌಲ್ಯಯುತವಾದ ಒಳನೋಟಗಳನ್ನು ಒದಗಿಸುತ್ತದೆ. ವಿಸ್ತೃತ ಕ್ಷೇತ್ರಗಳು, ವ್ಯಾಪಕವಾಗಿ ಎಲ್ಲ ಪ್ರದೇಶಗಳನ್ನು ಒಳಗೊಂಡಿರುವ, ಅಧ್ಯಾಯ ವಾರು ವಿಶ್ಲೇಷಣೆಯನ್ನು ಈ ಪುಸ್ತಕ ಒದಗಿಸುತ್ತದೆ. ಮೊದಲ ವಿಭಾಗವು ತನ್ನ ಮತ್ತು ದೇಶದ ನಡುವೆ ಪರಿಣಾಮಕಾರಿ ದ್ವಿಮುಖ ಸಂವಹನವನ್ನು ಸ್ಥಾಪಿಸಲು ಪ್ರಧಾನಿ ಮೋದಿ ಅನುಸರಿಸಿದ ವಿಶೇಷ ವಿಧಾನವನ್ನು ಎತ್ತಿ ತೋರಿಸುತ್ತದೆ.

ಎರಡನೇ ವಿಭಾಗ, ಸಾಮಾಜಿಕ ಬದಲಾವಣೆಗಾಗಿ ಪ್ರಧಾನಿ ಮೋದಿಯವರ ಮನವಿಯು ದೇಶದ ನಾಗರಿಕರನ್ನು ಹೇಗೆ ಪ್ರತಿಧ್ವನಿಸುತ್ತದೆ ಎಂಬುದಾಗಿದೆ. ಮೂರನೇ ವಿಭಾಗವು ಭಾರತೀಯ ಪೌರತ್ವ, ಶ್ರೇಷ್ಠತೆಗೆ ಸಂಬಂಧಿಸಿದ ಅಂಕಿಅಂಶಗಳ ಡೇಟಾವನ್ನು ಪ್ರದರ್ಶಿಸುತ್ತದೆ ಮತ್ತು ಕೊನೆಯ ವಿಭಾಗವು ಜನಪ್ರಿಯ ರೇಡಿಯೊ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಅಂಕಿಅಂಶಗಳ ಡೇಟಾವನ್ನು ಪ್ರದರ್ಶಿಸುತ್ತದೆ. ಹೆಚ್ಚುವರಿಯಾಗಿ, ಈ ವಿಭಾಗವು ಪ್ರೇಕ್ಷಕರು ಮತ್ತು ಸಂಚಿಕೆ ವಿಷಯದ ಗುಣಾತ್ಮಕ ಮತ್ತು ಪರಿಮಾಣಾತ್ಮಕ ವಿಶ್ಲೇಷಣೆಯನ್ನು ಸಹ ಒದಗಿಸುತ್ತದೆ.

‘ಇಗ್ನೈಟಿಂಗ್ ಕಲೆಕ್ಟಿವ್ ಗುಡ್‌ನೆಸ್: ಮನ್ ಕಿ ಬಾತ್ @100’ ಪುಸ್ತಕ ಈಗ ಆನ್‌ಲೈನ್‌ನಲ್ಲಿಯೂ ಲಭ್ಯವಿದೆ. ಪ್ರಧಾನಿ ಮೋದಿ ಬರೆದ ವಿಶೇಷ ಮುನ್ನುಡಿ ಇದೆ.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?