AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ವಾರ್ಡ್​ನಲ್ಲಿ ಸರಳವಾಗಿ ನಡೆಯಿತು ಮದುವೆ; ಪಿಪಿಇ ಕಿಟ್ ಧರಿಸಿ ತಾಳಿ ಕಟ್ಟಿಸಿಕೊಂಡ ವಧು

ಶರತ್ ಮೋನ್​ ಮತ್ತು ಅಭಿರಾಮಿ ಎಂಬುವರು ಕೇರಳದ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ವರ ಶರತ್​ ಮೋನ್​ ಕೊವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕೊವಿಡ್​ ವಾರ್ಡ್​ನಲ್ಲಿ ಸರಳವಾಗಿ ನಡೆಯಿತು ಮದುವೆ; ಪಿಪಿಇ ಕಿಟ್ ಧರಿಸಿ ತಾಳಿ ಕಟ್ಟಿಸಿಕೊಂಡ ವಧು
ಸಾಂದರ್ಭಿಕ ಚಿತ್ರ
Lakshmi Hegde
|

Updated on: Apr 25, 2021 | 3:42 PM

Share

ಕೊವಿಡ್​-19 ಸೋಂಕಿನಿಂದಾಗಿ ಮದುವೆ ಸೇರಿ ಯಾವುದೇ ಶುಭಸಮಾರಂಭಗಳನ್ನು ನಡೆಸುವುದೇ ದೊಡ್ಡ ತಲೆನೋವಾಗಿಬಿಟ್ಟಿದೆ. ಆದರೂ ಜನ ಮಾತ್ರ ಹೊಸಹೊಸ ರೀತಿಯಲ್ಲಿ ಮದುವೆ ಸಮಾರಂಭ ನಡೆಸುತ್ತಲೇ ಇದ್ದಾರೆ. ಇದೀಗ ಕೇರಳದಲ್ಲಿ ಜೋಡಿಯೊಂದು ಕೊವಿಡ್​-19 ಆಸ್ಪತ್ರೆ ವಾರ್ಡ್​​ನಲ್ಲೇ ವಿವಾಹವಾಗಿ ದೇಶದ ಗಮನಸೆಳೆದಿದೆ.

ಶರತ್ ಮೋನ್​ ಮತ್ತು ಅಭಿರಾಮಿ ಎಂಬುವರು ಕೇರಳದ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ವರ ಶರತ್​ ಮೋನ್​ ಕೊವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹಾಗಾಗಿ ಮುಹೂರ್ತ ತಪ್ಪಿಸಲು ಇಷ್ಟವಿಲ್ಲದೆ ವಧು ಪಿಪಿಇ ಕಿಟ್​ ಧರಿಸಿ ಆಸ್ಪತ್ರೆಗೇ ಬಂದು ವಿವಾಹವಾಗಿದ್ದಾರೆ. ಶರತ್​ ಹಾಗೂ ಅಭಿರಾಮಿ ಇಬ್ಬರೂ ಕೈಂಕರಿ ನಿವಾಸಿಗಳಾಗಿದ್ದಾರೆ.

ಶರತ್​ ವಿದೇಶದಲ್ಲಿ ಕೆಲಸ ಮಾಡುತ್ತಾರೆ. ಮದುವೆ ಫಿಕ್ಸ್ ಆಗಿ ಇನ್ನೇನು ಕೆಲವೇ ದಿನ ಇದೆ ಎನ್ನುವಾಗ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಅವರ ತಾಯಿಗೂ ಸೋಂಕು ತಗುಲಿದೆ. ತಾಯಿ-ಮಗ ಇಬ್ಬರನ್ನೂ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ಸೆಂಟರ್​ನಲ್ಲಿ ದಾಖಲು ಮಾಡಲಾಗಿತ್ತು. ಏಪ್ರಿಲ್​ 25ರಂದು ನಿಶ್ಚಯವಾಗಿದ್ದ ಮದುವೆಯನ್ನು ಮುಂದೂಡುವುದು ಬೇಡ ಎಂದು ಎರಡೂ ಕುಟುಂಬಸ್ಥರು ನಿರ್ಧರಿಸಿ, ಜಿಲ್ಲಾಡಳಿತದಿಂದ ಅನುಮತಿ ಪಡೆದು, ಕೊವಿಡ್ 19 ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ತುಂಬ ಜನ ಸೇರಿರಲಿಲ್ಲ. ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಲಾಗಿತ್ತು. ಅಲ್ಲೇ ಇದ್ದ ವರನ ತಾಯಿ, ಹೊಸ ಜೋಡಿ ಹೂಗುಚ್ಛ ನೀಡಿ ಶುಭ ಹಾರೈಸಿದರು ಎಂದು ಆಸ್ಪತ್ರೆ ತಿಳಿಸಿದೆ.

ಇದನ್ನೂ ಓದಿ: ವರ್ಷಪೂರ್ತಿ ಬರ್ತ್ ಡೇ ಗಿಫ್ಟ್​​ ಪಡೆಯಲು ಖತರ್ನಾಕ್ ಉಪಾಯ ಮಾಡಿದ್ದವ ಅರೆಸ್ಟ್​; ಈತನ ವಿರುದ್ಧ 35 ಯುವತಿಯರು ಒಗ್ಗಟ್ಟಾಗಿದ್ದೇಕೆ?

ತೆಲುಗಿನಲ್ಲಿ ಮಿಂಚಲಿದ್ದಾರೆ ಮಳಯಾಳಂ ನಟಿ ನಜ್ರಿಯಾ ನಜೀಮ್…!

couple in Kerala tied the knot inside a Covid ward Of Alappuzha Media College after groom testes positive for coronavirus

Follow Us
Lakshmi Hegde
Lakshmi Hegde
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ