Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ವಾರ್ಡ್​ನಲ್ಲಿ ಸರಳವಾಗಿ ನಡೆಯಿತು ಮದುವೆ; ಪಿಪಿಇ ಕಿಟ್ ಧರಿಸಿ ತಾಳಿ ಕಟ್ಟಿಸಿಕೊಂಡ ವಧು

ಶರತ್ ಮೋನ್​ ಮತ್ತು ಅಭಿರಾಮಿ ಎಂಬುವರು ಕೇರಳದ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ವರ ಶರತ್​ ಮೋನ್​ ಕೊವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕೊವಿಡ್​ ವಾರ್ಡ್​ನಲ್ಲಿ ಸರಳವಾಗಿ ನಡೆಯಿತು ಮದುವೆ; ಪಿಪಿಇ ಕಿಟ್ ಧರಿಸಿ ತಾಳಿ ಕಟ್ಟಿಸಿಕೊಂಡ ವಧು
ಸಾಂದರ್ಭಿಕ ಚಿತ್ರ
Follow us
Lakshmi Hegde
|

Updated on: Apr 25, 2021 | 3:42 PM

ಕೊವಿಡ್​-19 ಸೋಂಕಿನಿಂದಾಗಿ ಮದುವೆ ಸೇರಿ ಯಾವುದೇ ಶುಭಸಮಾರಂಭಗಳನ್ನು ನಡೆಸುವುದೇ ದೊಡ್ಡ ತಲೆನೋವಾಗಿಬಿಟ್ಟಿದೆ. ಆದರೂ ಜನ ಮಾತ್ರ ಹೊಸಹೊಸ ರೀತಿಯಲ್ಲಿ ಮದುವೆ ಸಮಾರಂಭ ನಡೆಸುತ್ತಲೇ ಇದ್ದಾರೆ. ಇದೀಗ ಕೇರಳದಲ್ಲಿ ಜೋಡಿಯೊಂದು ಕೊವಿಡ್​-19 ಆಸ್ಪತ್ರೆ ವಾರ್ಡ್​​ನಲ್ಲೇ ವಿವಾಹವಾಗಿ ದೇಶದ ಗಮನಸೆಳೆದಿದೆ.

ಶರತ್ ಮೋನ್​ ಮತ್ತು ಅಭಿರಾಮಿ ಎಂಬುವರು ಕೇರಳದ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ವರ ಶರತ್​ ಮೋನ್​ ಕೊವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹಾಗಾಗಿ ಮುಹೂರ್ತ ತಪ್ಪಿಸಲು ಇಷ್ಟವಿಲ್ಲದೆ ವಧು ಪಿಪಿಇ ಕಿಟ್​ ಧರಿಸಿ ಆಸ್ಪತ್ರೆಗೇ ಬಂದು ವಿವಾಹವಾಗಿದ್ದಾರೆ. ಶರತ್​ ಹಾಗೂ ಅಭಿರಾಮಿ ಇಬ್ಬರೂ ಕೈಂಕರಿ ನಿವಾಸಿಗಳಾಗಿದ್ದಾರೆ.

ಶರತ್​ ವಿದೇಶದಲ್ಲಿ ಕೆಲಸ ಮಾಡುತ್ತಾರೆ. ಮದುವೆ ಫಿಕ್ಸ್ ಆಗಿ ಇನ್ನೇನು ಕೆಲವೇ ದಿನ ಇದೆ ಎನ್ನುವಾಗ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಅವರ ತಾಯಿಗೂ ಸೋಂಕು ತಗುಲಿದೆ. ತಾಯಿ-ಮಗ ಇಬ್ಬರನ್ನೂ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ಸೆಂಟರ್​ನಲ್ಲಿ ದಾಖಲು ಮಾಡಲಾಗಿತ್ತು. ಏಪ್ರಿಲ್​ 25ರಂದು ನಿಶ್ಚಯವಾಗಿದ್ದ ಮದುವೆಯನ್ನು ಮುಂದೂಡುವುದು ಬೇಡ ಎಂದು ಎರಡೂ ಕುಟುಂಬಸ್ಥರು ನಿರ್ಧರಿಸಿ, ಜಿಲ್ಲಾಡಳಿತದಿಂದ ಅನುಮತಿ ಪಡೆದು, ಕೊವಿಡ್ 19 ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ತುಂಬ ಜನ ಸೇರಿರಲಿಲ್ಲ. ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಲಾಗಿತ್ತು. ಅಲ್ಲೇ ಇದ್ದ ವರನ ತಾಯಿ, ಹೊಸ ಜೋಡಿ ಹೂಗುಚ್ಛ ನೀಡಿ ಶುಭ ಹಾರೈಸಿದರು ಎಂದು ಆಸ್ಪತ್ರೆ ತಿಳಿಸಿದೆ.

ಇದನ್ನೂ ಓದಿ: ವರ್ಷಪೂರ್ತಿ ಬರ್ತ್ ಡೇ ಗಿಫ್ಟ್​​ ಪಡೆಯಲು ಖತರ್ನಾಕ್ ಉಪಾಯ ಮಾಡಿದ್ದವ ಅರೆಸ್ಟ್​; ಈತನ ವಿರುದ್ಧ 35 ಯುವತಿಯರು ಒಗ್ಗಟ್ಟಾಗಿದ್ದೇಕೆ?

ತೆಲುಗಿನಲ್ಲಿ ಮಿಂಚಲಿದ್ದಾರೆ ಮಳಯಾಳಂ ನಟಿ ನಜ್ರಿಯಾ ನಜೀಮ್…!

couple in Kerala tied the knot inside a Covid ward Of Alappuzha Media College after groom testes positive for coronavirus

ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್