AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ವಾರ್ಡ್​ನಲ್ಲಿ ಸರಳವಾಗಿ ನಡೆಯಿತು ಮದುವೆ; ಪಿಪಿಇ ಕಿಟ್ ಧರಿಸಿ ತಾಳಿ ಕಟ್ಟಿಸಿಕೊಂಡ ವಧು

ಶರತ್ ಮೋನ್​ ಮತ್ತು ಅಭಿರಾಮಿ ಎಂಬುವರು ಕೇರಳದ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ವರ ಶರತ್​ ಮೋನ್​ ಕೊವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕೊವಿಡ್​ ವಾರ್ಡ್​ನಲ್ಲಿ ಸರಳವಾಗಿ ನಡೆಯಿತು ಮದುವೆ; ಪಿಪಿಇ ಕಿಟ್ ಧರಿಸಿ ತಾಳಿ ಕಟ್ಟಿಸಿಕೊಂಡ ವಧು
ಸಾಂದರ್ಭಿಕ ಚಿತ್ರ
Lakshmi Hegde
|

Updated on: Apr 25, 2021 | 3:42 PM

Share

ಕೊವಿಡ್​-19 ಸೋಂಕಿನಿಂದಾಗಿ ಮದುವೆ ಸೇರಿ ಯಾವುದೇ ಶುಭಸಮಾರಂಭಗಳನ್ನು ನಡೆಸುವುದೇ ದೊಡ್ಡ ತಲೆನೋವಾಗಿಬಿಟ್ಟಿದೆ. ಆದರೂ ಜನ ಮಾತ್ರ ಹೊಸಹೊಸ ರೀತಿಯಲ್ಲಿ ಮದುವೆ ಸಮಾರಂಭ ನಡೆಸುತ್ತಲೇ ಇದ್ದಾರೆ. ಇದೀಗ ಕೇರಳದಲ್ಲಿ ಜೋಡಿಯೊಂದು ಕೊವಿಡ್​-19 ಆಸ್ಪತ್ರೆ ವಾರ್ಡ್​​ನಲ್ಲೇ ವಿವಾಹವಾಗಿ ದೇಶದ ಗಮನಸೆಳೆದಿದೆ.

ಶರತ್ ಮೋನ್​ ಮತ್ತು ಅಭಿರಾಮಿ ಎಂಬುವರು ಕೇರಳದ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ವರ ಶರತ್​ ಮೋನ್​ ಕೊವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹಾಗಾಗಿ ಮುಹೂರ್ತ ತಪ್ಪಿಸಲು ಇಷ್ಟವಿಲ್ಲದೆ ವಧು ಪಿಪಿಇ ಕಿಟ್​ ಧರಿಸಿ ಆಸ್ಪತ್ರೆಗೇ ಬಂದು ವಿವಾಹವಾಗಿದ್ದಾರೆ. ಶರತ್​ ಹಾಗೂ ಅಭಿರಾಮಿ ಇಬ್ಬರೂ ಕೈಂಕರಿ ನಿವಾಸಿಗಳಾಗಿದ್ದಾರೆ.

ಶರತ್​ ವಿದೇಶದಲ್ಲಿ ಕೆಲಸ ಮಾಡುತ್ತಾರೆ. ಮದುವೆ ಫಿಕ್ಸ್ ಆಗಿ ಇನ್ನೇನು ಕೆಲವೇ ದಿನ ಇದೆ ಎನ್ನುವಾಗ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಅವರ ತಾಯಿಗೂ ಸೋಂಕು ತಗುಲಿದೆ. ತಾಯಿ-ಮಗ ಇಬ್ಬರನ್ನೂ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ಸೆಂಟರ್​ನಲ್ಲಿ ದಾಖಲು ಮಾಡಲಾಗಿತ್ತು. ಏಪ್ರಿಲ್​ 25ರಂದು ನಿಶ್ಚಯವಾಗಿದ್ದ ಮದುವೆಯನ್ನು ಮುಂದೂಡುವುದು ಬೇಡ ಎಂದು ಎರಡೂ ಕುಟುಂಬಸ್ಥರು ನಿರ್ಧರಿಸಿ, ಜಿಲ್ಲಾಡಳಿತದಿಂದ ಅನುಮತಿ ಪಡೆದು, ಕೊವಿಡ್ 19 ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ತುಂಬ ಜನ ಸೇರಿರಲಿಲ್ಲ. ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಲಾಗಿತ್ತು. ಅಲ್ಲೇ ಇದ್ದ ವರನ ತಾಯಿ, ಹೊಸ ಜೋಡಿ ಹೂಗುಚ್ಛ ನೀಡಿ ಶುಭ ಹಾರೈಸಿದರು ಎಂದು ಆಸ್ಪತ್ರೆ ತಿಳಿಸಿದೆ.

ಇದನ್ನೂ ಓದಿ: ವರ್ಷಪೂರ್ತಿ ಬರ್ತ್ ಡೇ ಗಿಫ್ಟ್​​ ಪಡೆಯಲು ಖತರ್ನಾಕ್ ಉಪಾಯ ಮಾಡಿದ್ದವ ಅರೆಸ್ಟ್​; ಈತನ ವಿರುದ್ಧ 35 ಯುವತಿಯರು ಒಗ್ಗಟ್ಟಾಗಿದ್ದೇಕೆ?

ತೆಲುಗಿನಲ್ಲಿ ಮಿಂಚಲಿದ್ದಾರೆ ಮಳಯಾಳಂ ನಟಿ ನಜ್ರಿಯಾ ನಜೀಮ್…!

couple in Kerala tied the knot inside a Covid ward Of Alappuzha Media College after groom testes positive for coronavirus

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ