AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ವಾರ್ಡ್​ನಲ್ಲಿ ಸರಳವಾಗಿ ನಡೆಯಿತು ಮದುವೆ; ಪಿಪಿಇ ಕಿಟ್ ಧರಿಸಿ ತಾಳಿ ಕಟ್ಟಿಸಿಕೊಂಡ ವಧು

ಶರತ್ ಮೋನ್​ ಮತ್ತು ಅಭಿರಾಮಿ ಎಂಬುವರು ಕೇರಳದ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ವರ ಶರತ್​ ಮೋನ್​ ಕೊವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕೊವಿಡ್​ ವಾರ್ಡ್​ನಲ್ಲಿ ಸರಳವಾಗಿ ನಡೆಯಿತು ಮದುವೆ; ಪಿಪಿಇ ಕಿಟ್ ಧರಿಸಿ ತಾಳಿ ಕಟ್ಟಿಸಿಕೊಂಡ ವಧು
ಸಾಂದರ್ಭಿಕ ಚಿತ್ರ
Lakshmi Hegde
|

Updated on: Apr 25, 2021 | 3:42 PM

Share

ಕೊವಿಡ್​-19 ಸೋಂಕಿನಿಂದಾಗಿ ಮದುವೆ ಸೇರಿ ಯಾವುದೇ ಶುಭಸಮಾರಂಭಗಳನ್ನು ನಡೆಸುವುದೇ ದೊಡ್ಡ ತಲೆನೋವಾಗಿಬಿಟ್ಟಿದೆ. ಆದರೂ ಜನ ಮಾತ್ರ ಹೊಸಹೊಸ ರೀತಿಯಲ್ಲಿ ಮದುವೆ ಸಮಾರಂಭ ನಡೆಸುತ್ತಲೇ ಇದ್ದಾರೆ. ಇದೀಗ ಕೇರಳದಲ್ಲಿ ಜೋಡಿಯೊಂದು ಕೊವಿಡ್​-19 ಆಸ್ಪತ್ರೆ ವಾರ್ಡ್​​ನಲ್ಲೇ ವಿವಾಹವಾಗಿ ದೇಶದ ಗಮನಸೆಳೆದಿದೆ.

ಶರತ್ ಮೋನ್​ ಮತ್ತು ಅಭಿರಾಮಿ ಎಂಬುವರು ಕೇರಳದ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ವರ ಶರತ್​ ಮೋನ್​ ಕೊವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹಾಗಾಗಿ ಮುಹೂರ್ತ ತಪ್ಪಿಸಲು ಇಷ್ಟವಿಲ್ಲದೆ ವಧು ಪಿಪಿಇ ಕಿಟ್​ ಧರಿಸಿ ಆಸ್ಪತ್ರೆಗೇ ಬಂದು ವಿವಾಹವಾಗಿದ್ದಾರೆ. ಶರತ್​ ಹಾಗೂ ಅಭಿರಾಮಿ ಇಬ್ಬರೂ ಕೈಂಕರಿ ನಿವಾಸಿಗಳಾಗಿದ್ದಾರೆ.

ಶರತ್​ ವಿದೇಶದಲ್ಲಿ ಕೆಲಸ ಮಾಡುತ್ತಾರೆ. ಮದುವೆ ಫಿಕ್ಸ್ ಆಗಿ ಇನ್ನೇನು ಕೆಲವೇ ದಿನ ಇದೆ ಎನ್ನುವಾಗ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಅವರ ತಾಯಿಗೂ ಸೋಂಕು ತಗುಲಿದೆ. ತಾಯಿ-ಮಗ ಇಬ್ಬರನ್ನೂ ಅಲಪ್ಪುಳ ವೈದ್ಯಕೀಯ ಕಾಲೇಜಿನ ಕೊವಿಡ್​ ಸೆಂಟರ್​ನಲ್ಲಿ ದಾಖಲು ಮಾಡಲಾಗಿತ್ತು. ಏಪ್ರಿಲ್​ 25ರಂದು ನಿಶ್ಚಯವಾಗಿದ್ದ ಮದುವೆಯನ್ನು ಮುಂದೂಡುವುದು ಬೇಡ ಎಂದು ಎರಡೂ ಕುಟುಂಬಸ್ಥರು ನಿರ್ಧರಿಸಿ, ಜಿಲ್ಲಾಡಳಿತದಿಂದ ಅನುಮತಿ ಪಡೆದು, ಕೊವಿಡ್ 19 ವಾರ್ಡ್​ನಲ್ಲಿ ವಿವಾಹವಾಗಿದ್ದಾರೆ. ಇಲ್ಲಿ ತುಂಬ ಜನ ಸೇರಿರಲಿಲ್ಲ. ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಲಾಗಿತ್ತು. ಅಲ್ಲೇ ಇದ್ದ ವರನ ತಾಯಿ, ಹೊಸ ಜೋಡಿ ಹೂಗುಚ್ಛ ನೀಡಿ ಶುಭ ಹಾರೈಸಿದರು ಎಂದು ಆಸ್ಪತ್ರೆ ತಿಳಿಸಿದೆ.

ಇದನ್ನೂ ಓದಿ: ವರ್ಷಪೂರ್ತಿ ಬರ್ತ್ ಡೇ ಗಿಫ್ಟ್​​ ಪಡೆಯಲು ಖತರ್ನಾಕ್ ಉಪಾಯ ಮಾಡಿದ್ದವ ಅರೆಸ್ಟ್​; ಈತನ ವಿರುದ್ಧ 35 ಯುವತಿಯರು ಒಗ್ಗಟ್ಟಾಗಿದ್ದೇಕೆ?

ತೆಲುಗಿನಲ್ಲಿ ಮಿಂಚಲಿದ್ದಾರೆ ಮಳಯಾಳಂ ನಟಿ ನಜ್ರಿಯಾ ನಜೀಮ್…!

couple in Kerala tied the knot inside a Covid ward Of Alappuzha Media College after groom testes positive for coronavirus

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ