AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಹಳ್ಳಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡು ವಿವಾದ ಸೃಷ್ಟಿಸಿದ ‘ತಾಲಿಬಾನ್‘; ಆಯೋಜಕರು ಮಾಡಿದ್ದೇನು?

ಭನಿಯಾನಾ ಹಳ್ಳಿ ಪೋಖ್ರಾನ್​ನಿಂದ 36 ಕಿಮೀ ದೂರದಲ್ಲಿದೆ. ಪೋಖ್ರಾನ್​ ಸುತ್ತಮುತ್ತಲೂ ಅಲ್ಪಸಂಖ್ಯಾತರ ಸಮುದಾಯದವರೇ ಜಾಸ್ತಿ ಜನ ಇದ್ದಾರೆ.

ರಾಜಸ್ಥಾನದ ಹಳ್ಳಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡು ವಿವಾದ ಸೃಷ್ಟಿಸಿದ ‘ತಾಲಿಬಾನ್‘; ಆಯೋಜಕರು ಮಾಡಿದ್ದೇನು?
ಕ್ರಿಕೆಟ್​ ಪಂದ್ಯಾವಳಿ ದೃಶ್ಯ
TV9 Web
| Edited By: |

Updated on:Aug 23, 2021 | 6:42 PM

Share

ಸದ್ಯ ವಿಶ್ವದಾದ್ಯಂತ ಸುದ್ದಿಯಲ್ಲಿರುವುದು ತಾಲಿಬಾನ್​. ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ಕೈವಶ ಮಾಡಿಕೊಂಡಿರುವ ತಾಲಿಬಾನ್ ಉಗ್ರರು ವಿಶ್ವದ ಬಹುತೇಕ ರಾಷ್ಟ್ರಗಳ ಪಾಲಿಗೆ ವಿಲನ್​​ಗಳೇ ಆಗಿದ್ದಾರೆ. ಅವರನ್ನು ಉಗ್ರರು ಎಂದೇ ಕರೆಯಲಾಗುತ್ತಿದ್ದು, ತಾಲಿಬಾನಿಗಳ ಪರವಾಗಿ ಮಾತನಾಡುವುದೂ ಅಪರಾಧ ಎಂದೇ ಹೇಳಲಾಗುತ್ತಿದೆ. ಭಾರತದಲ್ಲೂ ಕೂಡ ಪರಿಸ್ಥಿತಿ ಹೀಗೇ ಇದೆ. ಈಗಾಗಲೇ ತಾಲಿಬಾನ್​ ಪರ ವಹಿಸಿ ಮಾತನಾಡಿದವರ ವಿರುದ್ಧ ಕ್ರಮಕ್ಕೆ ಮುಂದಾಗಲಾಗಿದೆ. ಇಷ್ಟೆಲ್ಲ ಆದ ಮೇಲೆ ರಾಜಸ್ಥಾನದ ಕ್ರಿಕೆಟ್​ ಟೂರ್ನಿಮೆಂಟ್​ಗೆ ತಾಲಿಬಾನ್​ ಬಂದರೆ ಹೇಗಾಗಬೇಡ !-ಇದೀಗ ದೊಡ್ಡ ವಿವಾದ ಸೃಷ್ಟಿಯಾಗಿದೆ. 

ರಾಜಸ್ಥಾನದ ಭನಿಯಾನಾ ಎಂಬ ಹಳ್ಳಿಯಲ್ಲಿ ಕ್ರಿಕೆಟ್​ ಟೂರ್ನಮೆಂಟ್​ ಆಯೋಜಿಸಲಾಗಿತ್ತು. ಅದರಲ್ಲಿ ವಿವಿಧ ತಂಡಗಳು ಪಾಲ್ಗೊಂಡಿದ್ದವು. ಯಾವುದೇ ಪಂದ್ಯಾವಳಿ ಇರಲಿ ತಂಡಕ್ಕೊಂದು ಹೆಸರಿಟ್ಟುಕೊಂಡು ಪಾಲ್ಗೊಳ್ಳುವುದು ಸಹಜ. ಹಾಗೇ, ಭನಿಯಾನಾದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿ ಪಾಲ್ಗೊಂಡ ಒಂದು ತಂಡ ತಾಲಿಬಾನ್​ ಎಂದು ಹೆಸರಿಟ್ಟುಕೊಂಡಿತ್ತು. ಆದರೆ ಕ್ರಿಕೆಟ್​ ತಂಡ ತಾಲಿಬಾನ್​ ಎಂದು ಹೆಸರಿಟ್ಟುಕೊಂಡಿದ್ದು ದೊಡ್ಡ ವಿವಾದಕ್ಕೆ ಕಾರಣವಾಯ್ತು.

ಭನಿಯಾನಾ ಹಳ್ಳಿ ಪೋಖ್ರಾನ್​ನಿಂದ 36 ಕಿಮೀ ದೂರದಲ್ಲಿದೆ. ಪೋಖ್ರಾನ್​ ಸುತ್ತಮುತ್ತಲೂ ಅಲ್ಪಸಂಖ್ಯಾತರ ಸಮುದಾಯದವರೇ ಜಾಸ್ತಿ ಜನ ಇದ್ದಾರೆ. ಪೋಖ್ರಾನ್​ ಫೈರಿಂಗ್​ ವಲಯ ಕೂಡ ಸಮೀಪದಲ್ಲೇ ಇರುವುದರಿಂದ ಇದು ಅತ್ಯಂತ ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಲ್ಪಟ್ಟಿದೆ. ಇಲ್ಲಿ ಭಾರತೀಯ ಸೇನಾ ಯೋಧರ ಚಲನವಲನ ಸಾಮಾನ್ಯವಾಗಿರುತ್ತದೆ.

ತಾಲಿಬಾನ್​ ತಂಡ ಏನಾಯ್ತು? ತಾಲಿಬಾನ್ ಹೆಸರಿನ ತಂಡವನ್ನು ಕಣ್ತಪ್ಪಿನಿಂದ ಪಂದ್ಯಾವಳಿಗೆ ಸೇರಿಸಿಕೊಂಡಿದ್ದೆವು. ಆದರೆ  ನಂತರ ಅವರನ್ನು ತೆಗೆದುಹಾಕಲಾಗಿದೆ. ಅವರಿಗೆ ಟೂರ್ನಮೆಂಟ್​ನಲ್ಲಿ ಆಡಲು ಅವಕಾಶ ನಿರಾಕರಿಸಲಾಯಿತು ಎಂದು ಆಯೋಜಕರು ಹೇಳಿದ್ದಾರೆ. ಅದರಲ್ಲೂ ಮೊದಲ ಪಂದ್ಯ ಅವರು ಆಡಿದ್ದಾರೆ. ನಂತರ ಸಂಪೂರ್ಣವಾಗಿ ನಿಷೇಧ ಹೇರಲಾಯಿತು ಎಂದೂ ಮಾಹಿತಿ ನೀಡಿದ್ದಾರೆ. ತಾಲಿಬಾನ್​ ಎಂದು ಹೆಸರಿಟ್ಟುಕೊಂಡ ಕ್ರಿಕೆಟ್​ ತಂಡದವರೂ ಕೂಡ ನಂತರ ಕ್ಷಮೆಯಾಚಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: 

ದೆಹಲಿಯಲ್ಲಿ ಹೊಂಜು ಗೋಪುರ ಉದ್ಘಾಟಿಸಿದ ಅರವಿಂದ ಕೇಜ್ರಿವಾಲ್

ಅಫ್ಘಾನ್​​ನಿಂದ ಇಂದು ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು; ಆಸ್ಪತ್ರೆಗೆ ದಾಖಲು

Published On - 6:40 pm, Mon, 23 August 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ