AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಸಿಆರ್​​ಪಿಎಫ್ ಎಸ್​ಐಯನ್ನು ಗುಂಡು ಹಾರಿಸಿ ಕೊಂದು, ಅದೇ ಗನ್​ನಿಂದ ಶೂಟ್ ಮಾಡಿಕೊಂಡ ಹೆಡ್​ಕಾನ್ಸ್ಟೇಬಲ್

CRPF | Mulugu District: ಸಿಆರ್​ಪಿಎಫ್ ಹೆಡ್​ ಕಾನ್ಸ್ಟೇಬಲ್ ಒಬ್ಬ ಎಸ್​ಐ ಮೇಲೆ ಗುಂಡು ಹಾರಿಸಿ ಕೊಂದಿದ್ದಾನೆ. ನಂತರ ತನ್ನ ಮೇಲೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತೆಲಂಗಾಣ: ಸಿಆರ್​​ಪಿಎಫ್ ಎಸ್​ಐಯನ್ನು ಗುಂಡು ಹಾರಿಸಿ ಕೊಂದು, ಅದೇ ಗನ್​ನಿಂದ ಶೂಟ್ ಮಾಡಿಕೊಂಡ ಹೆಡ್​ಕಾನ್ಸ್ಟೇಬಲ್
ಪ್ರಾತಿನಿಧಿಕ ಚಿತ್ರ
shivaprasad.hs
|

Updated on:Dec 26, 2021 | 11:23 AM

Share

ತೆಲಂಗಾಣ: ಹೈದರಾಬಾದ್​ನಿಂದ ಸುಮಾರು 285 ಕಿಮೀ ದೂರದಲ್ಲಿರುವ ಮುಲುಗು (Mulugu) ಜಿಲ್ಲೆಯ ವೆಂಕಟಾಪುರಂ ಗ್ರಾಮದಲ್ಲಿ ಸಿಆರ್‌ಪಿಎಫ್‌ನಲ್ಲಿ (CRPF) ಕೆಲಸ ಮಾಡುತ್ತಿದ್ದ ಒಬ್ಬ ಯೋಧ ತನ್ನ ಸಹದ್ಯೋಗಿ ಮೇಲೆ ಗುಂಡು ಹಾರಿಸಿದ್ದಾನೆ. ಅಲ್ಲದೇ ಅದೇ ಗನ್​ನಿಂದ ತನ್ನ ಮೇಲೂ ಗುಂಡು ಹಾರಿಸಿಕೊಂಡಿದ್ದಾನೆ. ವೆಂಕಟಾಪುರಂ ಮಂಡಲ ಕೇಂದ್ರದ 39 ಬೆಟಾಲಿಯನ್​ನಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗ್ರಾಮ್ ಸಿಂಗ್ ಪಿಟಿಐಗೆ ಮಾಹಿತಿ ನೀಡಿದ್ದು, ಸ್ಟೀಫನ್ ಎಂಬ ಹೆಡ್​​ಕಾನ್ಸ್ಟೇಬಲ್ ಮತ್ತು ಎಸ್​​ಐ ಉಮೇಶ್ ಚಂದ್ರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸ್ಟೀಫನ್​ ತನ್ನ ಗನ್​ನಿಂದ ಉಮೇಶ್ ಚಂದ್ರ ಮೇಲೆ ಫೈರ್ ಮಾಡಿದ್ದಾನೆ. ನಂತರ ಅದೇ ಗನ್​ನಿಂದ ಗುಂಡು ಹಾರಿಸಿಕೊಂಡು, ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದಿದ್ದಾರೆ.

ಘಟನೆಯಲ್ಲಿ ಎಸ್​​ಐ ಉಮೇಶ್ ಚಂದ್ರ ಸಾವನ್ನಪ್ಪಿದ್ದು, ಹೆಡ್ ಕಾನ್ಸ್ಟೇಬಲ್ ಸ್ಟೀಫನ್​ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ:

Night Curfew In Karnataka: ಕರ್ನಾಟಕದಲ್ಲಿ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ! ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ಒಮಿಕ್ರಾನ್ ಭೀತಿ; ಶನಿವಾರ ಒಂದೇ ದಿನ 14 ಮಂದಿಗೆ ಸೋಂಕು ಧೃಡ

Published On - 11:11 am, Sun, 26 December 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ