AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಸಿಆರ್​​ಪಿಎಫ್ ಎಸ್​ಐಯನ್ನು ಗುಂಡು ಹಾರಿಸಿ ಕೊಂದು, ಅದೇ ಗನ್​ನಿಂದ ಶೂಟ್ ಮಾಡಿಕೊಂಡ ಹೆಡ್​ಕಾನ್ಸ್ಟೇಬಲ್

CRPF | Mulugu District: ಸಿಆರ್​ಪಿಎಫ್ ಹೆಡ್​ ಕಾನ್ಸ್ಟೇಬಲ್ ಒಬ್ಬ ಎಸ್​ಐ ಮೇಲೆ ಗುಂಡು ಹಾರಿಸಿ ಕೊಂದಿದ್ದಾನೆ. ನಂತರ ತನ್ನ ಮೇಲೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತೆಲಂಗಾಣ: ಸಿಆರ್​​ಪಿಎಫ್ ಎಸ್​ಐಯನ್ನು ಗುಂಡು ಹಾರಿಸಿ ಕೊಂದು, ಅದೇ ಗನ್​ನಿಂದ ಶೂಟ್ ಮಾಡಿಕೊಂಡ ಹೆಡ್​ಕಾನ್ಸ್ಟೇಬಲ್
ಪ್ರಾತಿನಿಧಿಕ ಚಿತ್ರ
shivaprasad.hs
|

Updated on:Dec 26, 2021 | 11:23 AM

Share

ತೆಲಂಗಾಣ: ಹೈದರಾಬಾದ್​ನಿಂದ ಸುಮಾರು 285 ಕಿಮೀ ದೂರದಲ್ಲಿರುವ ಮುಲುಗು (Mulugu) ಜಿಲ್ಲೆಯ ವೆಂಕಟಾಪುರಂ ಗ್ರಾಮದಲ್ಲಿ ಸಿಆರ್‌ಪಿಎಫ್‌ನಲ್ಲಿ (CRPF) ಕೆಲಸ ಮಾಡುತ್ತಿದ್ದ ಒಬ್ಬ ಯೋಧ ತನ್ನ ಸಹದ್ಯೋಗಿ ಮೇಲೆ ಗುಂಡು ಹಾರಿಸಿದ್ದಾನೆ. ಅಲ್ಲದೇ ಅದೇ ಗನ್​ನಿಂದ ತನ್ನ ಮೇಲೂ ಗುಂಡು ಹಾರಿಸಿಕೊಂಡಿದ್ದಾನೆ. ವೆಂಕಟಾಪುರಂ ಮಂಡಲ ಕೇಂದ್ರದ 39 ಬೆಟಾಲಿಯನ್​ನಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗ್ರಾಮ್ ಸಿಂಗ್ ಪಿಟಿಐಗೆ ಮಾಹಿತಿ ನೀಡಿದ್ದು, ಸ್ಟೀಫನ್ ಎಂಬ ಹೆಡ್​​ಕಾನ್ಸ್ಟೇಬಲ್ ಮತ್ತು ಎಸ್​​ಐ ಉಮೇಶ್ ಚಂದ್ರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸ್ಟೀಫನ್​ ತನ್ನ ಗನ್​ನಿಂದ ಉಮೇಶ್ ಚಂದ್ರ ಮೇಲೆ ಫೈರ್ ಮಾಡಿದ್ದಾನೆ. ನಂತರ ಅದೇ ಗನ್​ನಿಂದ ಗುಂಡು ಹಾರಿಸಿಕೊಂಡು, ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದಿದ್ದಾರೆ.

ಘಟನೆಯಲ್ಲಿ ಎಸ್​​ಐ ಉಮೇಶ್ ಚಂದ್ರ ಸಾವನ್ನಪ್ಪಿದ್ದು, ಹೆಡ್ ಕಾನ್ಸ್ಟೇಬಲ್ ಸ್ಟೀಫನ್​ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ:

Night Curfew In Karnataka: ಕರ್ನಾಟಕದಲ್ಲಿ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ! ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ಒಮಿಕ್ರಾನ್ ಭೀತಿ; ಶನಿವಾರ ಒಂದೇ ದಿನ 14 ಮಂದಿಗೆ ಸೋಂಕು ಧೃಡ

Published On - 11:11 am, Sun, 26 December 21

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ