AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad News: ಶ್ವಾನ ದಾಳಿಯಿಂದ ತಪ್ಪಿಸಲು ಹೋಗಿ 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್​​​

ಡೆಲಿವರ್​​​ ಬಾಯ್​​​ ಗ್ರಾಹಕರ ಮನೆಗೆ ಆರ್ಡರ್​​​​ ತಲುಪಿಸಲು ಹೋದ ಸಮಯದಲ್ಲಿ ಅಲ್ಲಿನ ಸಾಕು ನಾಯಿ ದಾಳಿ ಮಾಡಲು ಮುಂದಾಗಿದೆ. ಅಪಾಯದಿಂದ ಪಾರಾಗಲು ಈತ ಮೂರನೇ ಮುಹಡಿಯಿಂದ ಕೆಳಗೆ ಹಾರಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡಿದ್ದು ಆಸ್ಪ್ರತೆಗೆ ದಾಖಲಿಸಲಾಗಿದೆ.

Hyderabad News: ಶ್ವಾನ ದಾಳಿಯಿಂದ ತಪ್ಪಿಸಲು ಹೋಗಿ 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್​​​
ಶ್ವಾನ ದಾಳಿಯಿಂದ ತಪ್ಪಿಸಲು ಹೋಗಿ 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್Image Credit source: indiatoday.in
Follow us
ಅಕ್ಷತಾ ವರ್ಕಾಡಿ
|

Updated on:May 23, 2023 | 12:57 PM

ಹೈದರಾಬಾದ್‌: ಡೆಲಿವರ್​​​ ಬಾಯ್​​​ ಗ್ರಾಹಕರ ಮನೆಗೆ ಆರ್ಡರ್​​​​ ತಲುಪಿಸಲು ಹೋದ ಸಮಯದಲ್ಲಿ ಅಲ್ಲಿನ ಸಾಕು ನಾಯಿ ದಾಳಿ ಮಾಡಲು ಮುಂದಾಗಿದೆ. ಅಪಾಯದಿಂದ ಪಾರಾಗಲು ಈತ ಮೂರನೇ ಮುಹಡಿಯಿಂದ ಕೆಳಗೆ ಹಾರಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡಿದ್ದು ಆಸ್ಪ್ರತೆಗೆ ದಾಖಲಿಸಲಾಗಿದೆ. ಹೈದರಾಬಾದ್‌ನಲ್ಲಿ ಇಂತಹ ಘಟನೆ ಇದೇ ಮೊದಲೇನಲ್ಲಾ. ಇತ್ತೀಚಿನ ದಿನಗಳಲ್ಲಿ ಹೈದರಾಬಾದ್‌ನಲ್ಲಿ ಇದು ಎರಡನೇ ಘಟನೆಯಾಗಿದೆ. ಹೈದರಾಬಾದ್‌ನ ಡೆಲಿವರಿ ಬಾಯ್​​ ಭಾನುವಾರ ಮಧ್ಯಾಹ್ನ ಗ್ರಾಹಕರ ಸಾಕು ನಾಯಿಯಿಂದ ತನ್ನನ್ನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ ಅಪಾರ್ಟ್ಮೆಂಟ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಈ ವರ್ಷದ ಜನವರಿಯಿಂದ ನಗರದಲ್ಲಿ ವರದಿಯಾದ ಎರಡನೇ ಘಟನೆ ಇದಾಗಿದೆ.

ಹೈದರಾಬಾದ್‌ನ ಪಂಚವಟಿ ಕಾಲೋನಿಯಲ್ಲಿರುವ ಶ್ರೀನಿಧಿ ಹೈಟ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಡೆಲಿವರಿ ಎಕ್ಸಿಕ್ಯೂಟಿವ್, ಆರ್ಡರ್​ ಕೊಡಲು ಬಂದಾಗ ಗ್ರಾಹಕರ ಮನೆಯ ಡಾಬರ್‌ಮ್ಯಾನ್‌ ತಳಿಯ ಶ್ವಾನ ಬೊಗಳಲು ಪ್ರಾರಂಭಿಸಿದೆ. ಇದಾದ ಬಳಿಕ ಏಕಾಏಕಿ ದಾಳಿ ಮಾಡಲು ಮುಂದಾಗಿದೆ. ತನ್ನನ್ನು ನಾಯಿಯಿಂದ ರಕ್ಷಿಸಿಕೊಳ್ಳಲು ಪ್ಯಾರಪೆಟ್ ಗೋಡೆಯ ಮೇಲೆ ಆತ ಹಾರಿದ್ದಾನೆ. ಸಂತ್ರಸ್ತೆಯನ್ನು ತಕ್ಷಣ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ರಾಯದುರ್ಗಂ ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 289 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಮುಂಬೈ ಲೋಕಲ್​ ಟ್ರೇನಿನ ಈ ‘ನಿತ್ಯಪ್ರಯಾಣಿಕ’ನ ವಿಡಿಯೋ ವೈರಲ್

ಇದೇ ರೀತಿಯ ಮತ್ತೊಂದು ಘಟನೆಯಲ್ಲಿ, 23 ವರ್ಷದ ರಿಜ್ವಾನ್ ಎಂಬಾತ ಸಾಕುನಾಯಿ ದಾಳಿಯಿಂದ ಪ್ರಾಣ ರಕ್ಷಿಸಲು ಹೋಗಿ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದರು. ಫುಡ್ ಡೆಲಿವರಿ ಆಪ್ ಸ್ವಿಗ್ಗಿ ಜೊತೆ ಕೆಲಸ ಮಾಡುತ್ತಿದ್ದ ಮೊಹಮ್ಮದ್ ರಿಜ್ವಾನ್ ಅವರು ಪಾರ್ಸೆಲ್ ಡೆಲಿವರಿ ಮಾಡಲು ಬಂಜಾರಾ ಹಿಲ್ಸ್‌ನ ಅಪಾರ್ಟ್‌ಮೆಂಟ್ ಕಟ್ಟಡಕ್ಕೆ ಹೋಗಿದ್ದರು. ಬಂಜಾರ ಹಿಲ್ಸ್ ಪೊಲೀಸರು ನಾಯಿ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದು, ನಂತರ ಸಂತ್ರಸ್ತೆ ಮತ್ತು ಆರೋಪಿಗಳು ಇತ್ಯರ್ಥಕ್ಕೆ ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 12:54 pm, Tue, 23 May 23

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ