AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್​​ನಲ್ಲಿ ಇಬ್ಬರು ಪ್ರೇಮಿಗಳೊಂದಿಗೆ ವೈದ್ಯೆಯ ರೊಮ್ಯಾನ್ಸ್, ಫಿಲ್ಮಿ ಸ್ಟೈಲ್​​ನಲ್ಲಿ ಎಂಟ್ರಿ ಕೊಟ್ಟ ಪತಿ

ವೈದ್ಯೆಯೊಬ್ಬರು ಇಬ್ಬರು ಪ್ರೇಮಿಗಳೊಂದಿಗೆ ಹೋಟೆಲ್​​​ವೊಂದರಲ್ಲಿ ರೊಮ್ಯಾನ್ಸ್ ಮಾಡುತ್ತಿದ್ದ ವೇಳೆ ವೈದ್ಯೆಯ ಪತಿಯ ಎಂಟ್ರಿಯಾಗಿದೆ. ಇದರಿಂದ ಅಘಾತಗೊಂಡ ಪತಿ, ಪತ್ನಿ ಹಾಗೂ ಇಬ್ಬರು ಪ್ರೇಮಿಗಳಿಗೂ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ.

ಹೋಟೆಲ್​​ನಲ್ಲಿ ಇಬ್ಬರು ಪ್ರೇಮಿಗಳೊಂದಿಗೆ ವೈದ್ಯೆಯ ರೊಮ್ಯಾನ್ಸ್, ಫಿಲ್ಮಿ ಸ್ಟೈಲ್​​ನಲ್ಲಿ ಎಂಟ್ರಿ ಕೊಟ್ಟ ಪತಿ
ಅಕ್ಷಯ್​ ಪಲ್ಲಮಜಲು​​
|

Updated on: May 11, 2024 | 10:43 AM

Share

ಉತ್ತರ ಪ್ರದೇಶದ (uttar pradesh) ಕಾಸ್‌ಗಂಜ್‌ನಲ್ಲಿರುವ ಹೋಟೆಲ್​​ವೊಂದರಲ್ಲಿ ವೈದ್ಯೆಯೊಬ್ಬಳು ತನ್ನ ಇಬ್ಬರು ಪ್ರೇಮಿಗಳೊಂದಿಗೆ ರೊಮ್ಯಾನ್ಸ್ ಮಾಡುತ್ತಿದ್ದ ವೇಳೆ ಆಕೆಯ ಗಂಡ ಎಂಟ್ರಿ ನೀಡಿದ್ದಾನೆ. ತನ್ನ ಹೆಂಡತಿಯನ್ನು ಇತರ ಪುರುಷರೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ನೋಡಿದ ಪತಿ ಆಘಾತಕ್ಕೊಳಗಾಗಿದ್ದಾನೆ. ಇದನ್ನು ನೋಡಲಾದೆ ಪತಿ ವೈದ್ಯೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಆಕೆ ಜತೆಗೆ ಇದ್ದ ಇಬ್ಬರು ವ್ಯಕ್ತಿಗಳಿಗೂ ಹೊಡೆದಿದ್ದಾನೆ ಎಂದು ಹೇಳಲಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಹೋಟೆಲ್​​​ಗೆ ವೈದ್ಯೆಯ ಗಂಡನ ಜತೆಗೆ ಆತನ ಕುಟುಂಬದವರು ಕೂಡ ಬಂದಿದ್ದಾರೆ. ಈ ವೇಳೆ ಈ ಮೂರವರಿಗೆ ಎಲ್ಲರೂ ಸೇರಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಮಹಿಳೆ ಮತ್ತು ಇಬ್ಬರು ಪ್ರೇಮಿಗಳನ್ನು ಬಂಧಿಸಿದ್ದಾರೆ. ಪೊಲೀಸರು ತಿಳಿಸಿರುವ ಪ್ರಕಾರ, ಪತಿ-ಪತ್ನಿಯರ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿತ್ತು. ಕಳೆದ ಎರಡು ವರ್ಷಗಳಿಂದ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಈ ಕಾರಣಕ್ಕಾಗಿ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಇಬ್ಬರು ಕೂಡ ವೈದ್ಯ ವೃತ್ತಿಯನ್ನು ಮಾಡುತ್ತಿದ್ದರು.

ವೈದ್ಯರ ಪತ್ನಿ ಕಾಸ್ಗಂಜ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಸುಮಾರು ದಿನಗಳಿಂದ ಪತ್ನಿಯ ಮೇಲೆ ಈ ರೀತಿಯ ಅನುಮಾನಗಳು ಇತ್ತು ಎಂದು ಪತಿ ಪೊಲೀಸರಿಗೆ ಹೇಳಿದ್ದಾನೆ. ಪತ್ನಿಯ ನಡವಳಿಕೆಯನ್ನು ಪತ್ತೆ ಮಾಡಲು ಬುಧವಾರ ಹೋಟೆಲ್​​​​ಗೆ ಬಂದಿದ್ದಾನೆ. ಆಗಾ ವೈದ್ಯೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾಳೆ. ಈ ವಿಚಾರ ಆತನ ಕುಟುಂಬಕ್ಕೂ ತಿಳಿದು ಹೋಟೆಲ್​​​ಗೆ ಬಂದಿದ್ದಾರೆ. ಈ ವೇಳೆ ಅಲ್ಲಿ ತೀವ್ರ ವಾಗ್ವಾದ ನಡೆದು ಕೈ-ಕೈ ಮಿಲಾಯಿಸಿದ್ದಾರೆ.

ಇದನ್ನೂ ಓದಿ: ಜಮ್ಮು – ಕಾಶ್ಮೀರದಲ್ಲಿ ದೇವಸ್ಥಾನಕ್ಕೆ ರಸ್ತೆ ನಿರ್ಮಿಸಲು ತಮ್ಮ ಭೂಮಿಯನ್ನು ದಾನವಾಗಿ ನೀಡಿದ ಇಬ್ಬರು ಮುಸ್ಲಿಮರು

2013ರಲ್ಲಿ ಮದುವೆಯಾದ ಈ ಇಬ್ಬರು ವೈದ್ಯ ದಂಪತಿಗಳ ನಡುವೆ ಕೆಲವೊಂದು ಬಿರುಕು ಉಂಟಾಗಿದೆ. ಆಕೆ ಯುವಕರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಆರೋಪ ಕೂಡ ಇತ್ತು. ಈ ವಿಚಾರವಾಗಿ ಅವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಆದರೆ ಮನೆಯವರೆಲ್ಲ ಸೇರಿ ಅವರಿಬ್ಬರನ್ನು ಜತೆಯಾಗಿ ಜೀವನ ನಡೆಸಲು ಒತ್ತಾಯಿಸಿದ್ದಾರೆ. ಆದರೆ ಆಕೆ ಯಾವುದಕ್ಕೂ ಒಪ್ಪಿಲ್ಲ. ಪತಿ ಮತ್ತು ಆತ ತಾಯಿ ಮೇಲೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪತಿಯಿಂದ ಎರಡು ವರ್ಷಗಳ ಹಿಂದೆ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದಾಳೆ. ಆದರೆ ಇಬ್ಬರಿಗೂ ವಿಚ್ಛೇದನ ಆಗಿಲ್ಲ ಎಂದು ಹೇಳಲಾಗಿದೆ. ಗಂಡನ ಹೇಳಿಕೆ ಆಧಾರದ ಮೇಲೆ ದೂರು ದಾಖಲಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!