AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ, ಉದ್ಯೋಗ ಕೊಟ್ಟಿದ್ದ ಸಹಾಯಕ ಪ್ರಾಧ್ಯಾಪಕನ ಪತ್ನಿಯನ್ನೇ ಕೊಲೆ ಮಾಡಿದ ಕಾರು ಚಾಲಕ !

ಆರೋಪಿಯೇ ಸಂತ್​ ನಗರದಲ್ಲಿರುವ ಮಹಿಳೆಯ ಮನೆಯನ್ನೂ ಪೊಲೀಸರಿಗೆ ತೋರಿಸಿದ್ದಾನೆ.  ಮೃತದೇಹವನ್ನು ಪರಿಶೀಲಿಸಿದ ಬಳಿಕ ಪೊಲೀಸರು ಆರೋಪಿ ರಾಕೇಶ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮನೆ, ಉದ್ಯೋಗ ಕೊಟ್ಟಿದ್ದ ಸಹಾಯಕ ಪ್ರಾಧ್ಯಾಪಕನ ಪತ್ನಿಯನ್ನೇ ಕೊಲೆ ಮಾಡಿದ ಕಾರು ಚಾಲಕ !
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 10, 2021 | 3:29 PM

Share

ದೆಹಲಿ: ಇಲ್ಲಿನ ಯೂನಿವರ್ಸಿಟಿಯಲ್ಲಿನ ಸಹಾಯಕ ಪ್ರಾಧ್ಯಾಪಕರೊಬ್ಬರ ಪತ್ನಿಯನ್ನು ಹತ್ಯೆ ಮಾಡಿದ 31 ವರ್ಷದ ವ್ಯಕ್ತಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ.  ಮೃತಳನ್ನು ಪಿಂಕಿ ಎಂದು ಗುರುತಿಸಲಾಗಿದ್ದು, ಆಕೆಗೆ 32 ವರ್ಷ. ರಾಕೇಶ್​ ಎಂಬಾತ ಆರೋಪಿ. ಈತ ಪಿಂಕಿಯ ಕತ್ತು ಹಿಸುಕಿದ್ದಲ್ಲದೆ, ಆಕೆಗೆ ವಿದ್ಯುತ್​ ಶಾಕ್​ ಕೊಟ್ಟು ಕೊಂದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ರಾಕೇಶ್​ ಮಹಿಳೆಯನ್ನು ಕೊಂದ ಬಳಿಕ ಗಾಬರಿಯಿಂದ ದೆಹಲಿಯ ಬುರಾರಿ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಕುಳಿತಿದ್ದ. ನಂತರ ಪೊಲೀಸರ ಎದುರು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ನಾನು ನನ್ನ ಅತ್ತಿಗೆಯಂತಿರುವ ಮಹಿಳೆಯನ್ನು ಹತ್ಯೆ ಮಾಡಿದ್ದಾಗಿ ಹೇಳಿಕೊಂಡಿದ್ದಾನೆ. 

ಆರೋಪಿಯೇ ಸಂತ್​ ನಗರದಲ್ಲಿರುವ ಮಹಿಳೆಯ ಮನೆಯನ್ನೂ ಪೊಲೀಸರಿಗೆ ತೋರಿಸಿದ್ದಾನೆ.  ಮೃತದೇಹವನ್ನು ಪರಿಶೀಲಿಸಿದ ಬಳಿಕ ಪೊಲೀಸರು ಆರೋಪಿ ರಾಕೇಶ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ, ನಾನು ಹತ್ಯೆ ಮಾಡಿದ ಮಹಿಳೆ ಪಿಂಕಿಯ ಪತಿ ವೀರೇಂದ್ರ ಕುಮಾರ್​ ಕಳೆದ ಮೂರು ವರ್ಷಗಳ ಹಿಂದೆ ನನಗಿಲ್ಲಿ ವಾಸಿಸಲು ಅವಕಾಶ ಮಾಡಿಕೊಟ್ಟಿದ್ದರು. ನಾನು ಈ ಮನೆಯ ಕೊನೇ ಫ್ಲೋರ್​​ನಲ್ಲಿ ವಾಸಿಸುತ್ತಿದ್ದೆ. ನನ್ನ ಕೈಯಲ್ಲಿ ಕೆಲಸವಿರಲಿಲ್ಲ. ಆಗಲೂ ಸಹ ವೀರೇಂದ್ರ ಕುಮಾರ್​ ಸಹಾಯ ಮಾಡಿದರು. ತಮ್ಮ ಕಾರನ್ನು ನನಗೆ ಬಾಡಿಗೆಗೆ ಕೊಟ್ಟು ಅದರಲ್ಲಿ ಬಾಡಿಗೆ ಹೊಡೆದು ಹಣ ಸಂಪಾದನೆ ಮಾಡಿಕೋ ಎಂದು ಹೇಳಿದ್ದರು ಎಂಬುದಾಗಿ ರಾಕೇಶ್​ ತಿಳಿಸಿದ್ದಾನೆ.

ತಾನ್ಯಾಕೆ ಪಿಂಕಿಯನ್ನು ಹತ್ಯೆ ಮಾಡಿದೆ ಎಂಬ ಬಗ್ಗೆ ವಿವರಿಸಿದ ಆತ,   2021ರ ಫೆಬ್ರವರಿಯಲ್ಲಿ ವೀರೇಂದ್ರ ಕುಮಾರ್ ಈ ಪಿಂಕಿಯವರನ್ನು ಮದುವೆಯಾಗಿದ್ದರು. ಆದರೆ ನನಗೆ ಇತ್ತೀಚೆಗೆ ಆದಾಯ ಅಷ್ಟು ಇರಲಿಲ್ಲ. ಇದರಿಂದಾಗಿ ವೀರೇಂದ್ರ ಕುಮಾರ್​ ಅವರಿಗೆ ಮನೆ ಬಾಡಿಗೆ ನೀಡಲು ನನಗೆ ಸಾಧ್ಯವಾಗುತ್ತಿರಲಿಲ್ಲ. ಈ ಕಾರಣಕ್ಕೆ ಪಿಂಕಿ ನನ್ನನ್ನು ಮನೆಯಿಂದ ಹೊರಹಾಕಿದ್ದರು. ಇದು ನನಗೆ ಕೆಟ್ಟ ಕೋಪ ತರಿಸಿತ್ತು. ಕುಮಾರ್​ ಮನೆಯಲ್ಲಿ ಇಲ್ಲದ ಹೊತ್ತಲ್ಲಿ ಹೋಗಿ ಹತ್ಯೆ ಮಾಡಿದೆ ಎಂದು ರಾಕೇಶ್​ ಹೇಳಿದ್ದಾನೆ.

ಇದನ್ನೂ ಓದಿ:  ಪ್ರಿಯಾಂಕ್ ಖರ್ಗೆ ವಸೂಲಿ ಕಿಂಗ್, ಬಿಟ್ ಕಾಯಿನ್ ದಂಧೆ ಕುರಿತು ದಾಖಲೆಯಿದ್ದರೆ ಬಹಿರಂಗಪಡಿಸಲಿ; ಸಚಿವ ಈಶ್ವರಪ್ಪ ಸವಾಲ್

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು