AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ, ಉದ್ಯೋಗ ಕೊಟ್ಟಿದ್ದ ಸಹಾಯಕ ಪ್ರಾಧ್ಯಾಪಕನ ಪತ್ನಿಯನ್ನೇ ಕೊಲೆ ಮಾಡಿದ ಕಾರು ಚಾಲಕ !

ಆರೋಪಿಯೇ ಸಂತ್​ ನಗರದಲ್ಲಿರುವ ಮಹಿಳೆಯ ಮನೆಯನ್ನೂ ಪೊಲೀಸರಿಗೆ ತೋರಿಸಿದ್ದಾನೆ.  ಮೃತದೇಹವನ್ನು ಪರಿಶೀಲಿಸಿದ ಬಳಿಕ ಪೊಲೀಸರು ಆರೋಪಿ ರಾಕೇಶ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮನೆ, ಉದ್ಯೋಗ ಕೊಟ್ಟಿದ್ದ ಸಹಾಯಕ ಪ್ರಾಧ್ಯಾಪಕನ ಪತ್ನಿಯನ್ನೇ ಕೊಲೆ ಮಾಡಿದ ಕಾರು ಚಾಲಕ !
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Nov 10, 2021 | 3:29 PM

ದೆಹಲಿ: ಇಲ್ಲಿನ ಯೂನಿವರ್ಸಿಟಿಯಲ್ಲಿನ ಸಹಾಯಕ ಪ್ರಾಧ್ಯಾಪಕರೊಬ್ಬರ ಪತ್ನಿಯನ್ನು ಹತ್ಯೆ ಮಾಡಿದ 31 ವರ್ಷದ ವ್ಯಕ್ತಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ.  ಮೃತಳನ್ನು ಪಿಂಕಿ ಎಂದು ಗುರುತಿಸಲಾಗಿದ್ದು, ಆಕೆಗೆ 32 ವರ್ಷ. ರಾಕೇಶ್​ ಎಂಬಾತ ಆರೋಪಿ. ಈತ ಪಿಂಕಿಯ ಕತ್ತು ಹಿಸುಕಿದ್ದಲ್ಲದೆ, ಆಕೆಗೆ ವಿದ್ಯುತ್​ ಶಾಕ್​ ಕೊಟ್ಟು ಕೊಂದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ರಾಕೇಶ್​ ಮಹಿಳೆಯನ್ನು ಕೊಂದ ಬಳಿಕ ಗಾಬರಿಯಿಂದ ದೆಹಲಿಯ ಬುರಾರಿ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಕುಳಿತಿದ್ದ. ನಂತರ ಪೊಲೀಸರ ಎದುರು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ನಾನು ನನ್ನ ಅತ್ತಿಗೆಯಂತಿರುವ ಮಹಿಳೆಯನ್ನು ಹತ್ಯೆ ಮಾಡಿದ್ದಾಗಿ ಹೇಳಿಕೊಂಡಿದ್ದಾನೆ. 

ಆರೋಪಿಯೇ ಸಂತ್​ ನಗರದಲ್ಲಿರುವ ಮಹಿಳೆಯ ಮನೆಯನ್ನೂ ಪೊಲೀಸರಿಗೆ ತೋರಿಸಿದ್ದಾನೆ.  ಮೃತದೇಹವನ್ನು ಪರಿಶೀಲಿಸಿದ ಬಳಿಕ ಪೊಲೀಸರು ಆರೋಪಿ ರಾಕೇಶ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ, ನಾನು ಹತ್ಯೆ ಮಾಡಿದ ಮಹಿಳೆ ಪಿಂಕಿಯ ಪತಿ ವೀರೇಂದ್ರ ಕುಮಾರ್​ ಕಳೆದ ಮೂರು ವರ್ಷಗಳ ಹಿಂದೆ ನನಗಿಲ್ಲಿ ವಾಸಿಸಲು ಅವಕಾಶ ಮಾಡಿಕೊಟ್ಟಿದ್ದರು. ನಾನು ಈ ಮನೆಯ ಕೊನೇ ಫ್ಲೋರ್​​ನಲ್ಲಿ ವಾಸಿಸುತ್ತಿದ್ದೆ. ನನ್ನ ಕೈಯಲ್ಲಿ ಕೆಲಸವಿರಲಿಲ್ಲ. ಆಗಲೂ ಸಹ ವೀರೇಂದ್ರ ಕುಮಾರ್​ ಸಹಾಯ ಮಾಡಿದರು. ತಮ್ಮ ಕಾರನ್ನು ನನಗೆ ಬಾಡಿಗೆಗೆ ಕೊಟ್ಟು ಅದರಲ್ಲಿ ಬಾಡಿಗೆ ಹೊಡೆದು ಹಣ ಸಂಪಾದನೆ ಮಾಡಿಕೋ ಎಂದು ಹೇಳಿದ್ದರು ಎಂಬುದಾಗಿ ರಾಕೇಶ್​ ತಿಳಿಸಿದ್ದಾನೆ.

ತಾನ್ಯಾಕೆ ಪಿಂಕಿಯನ್ನು ಹತ್ಯೆ ಮಾಡಿದೆ ಎಂಬ ಬಗ್ಗೆ ವಿವರಿಸಿದ ಆತ,   2021ರ ಫೆಬ್ರವರಿಯಲ್ಲಿ ವೀರೇಂದ್ರ ಕುಮಾರ್ ಈ ಪಿಂಕಿಯವರನ್ನು ಮದುವೆಯಾಗಿದ್ದರು. ಆದರೆ ನನಗೆ ಇತ್ತೀಚೆಗೆ ಆದಾಯ ಅಷ್ಟು ಇರಲಿಲ್ಲ. ಇದರಿಂದಾಗಿ ವೀರೇಂದ್ರ ಕುಮಾರ್​ ಅವರಿಗೆ ಮನೆ ಬಾಡಿಗೆ ನೀಡಲು ನನಗೆ ಸಾಧ್ಯವಾಗುತ್ತಿರಲಿಲ್ಲ. ಈ ಕಾರಣಕ್ಕೆ ಪಿಂಕಿ ನನ್ನನ್ನು ಮನೆಯಿಂದ ಹೊರಹಾಕಿದ್ದರು. ಇದು ನನಗೆ ಕೆಟ್ಟ ಕೋಪ ತರಿಸಿತ್ತು. ಕುಮಾರ್​ ಮನೆಯಲ್ಲಿ ಇಲ್ಲದ ಹೊತ್ತಲ್ಲಿ ಹೋಗಿ ಹತ್ಯೆ ಮಾಡಿದೆ ಎಂದು ರಾಕೇಶ್​ ಹೇಳಿದ್ದಾನೆ.

ಇದನ್ನೂ ಓದಿ:  ಪ್ರಿಯಾಂಕ್ ಖರ್ಗೆ ವಸೂಲಿ ಕಿಂಗ್, ಬಿಟ್ ಕಾಯಿನ್ ದಂಧೆ ಕುರಿತು ದಾಖಲೆಯಿದ್ದರೆ ಬಹಿರಂಗಪಡಿಸಲಿ; ಸಚಿವ ಈಶ್ವರಪ್ಪ ಸವಾಲ್

Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ