AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ, ಉದ್ಯೋಗ ಕೊಟ್ಟಿದ್ದ ಸಹಾಯಕ ಪ್ರಾಧ್ಯಾಪಕನ ಪತ್ನಿಯನ್ನೇ ಕೊಲೆ ಮಾಡಿದ ಕಾರು ಚಾಲಕ !

ಆರೋಪಿಯೇ ಸಂತ್​ ನಗರದಲ್ಲಿರುವ ಮಹಿಳೆಯ ಮನೆಯನ್ನೂ ಪೊಲೀಸರಿಗೆ ತೋರಿಸಿದ್ದಾನೆ.  ಮೃತದೇಹವನ್ನು ಪರಿಶೀಲಿಸಿದ ಬಳಿಕ ಪೊಲೀಸರು ಆರೋಪಿ ರಾಕೇಶ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮನೆ, ಉದ್ಯೋಗ ಕೊಟ್ಟಿದ್ದ ಸಹಾಯಕ ಪ್ರಾಧ್ಯಾಪಕನ ಪತ್ನಿಯನ್ನೇ ಕೊಲೆ ಮಾಡಿದ ಕಾರು ಚಾಲಕ !
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 10, 2021 | 3:29 PM

Share

ದೆಹಲಿ: ಇಲ್ಲಿನ ಯೂನಿವರ್ಸಿಟಿಯಲ್ಲಿನ ಸಹಾಯಕ ಪ್ರಾಧ್ಯಾಪಕರೊಬ್ಬರ ಪತ್ನಿಯನ್ನು ಹತ್ಯೆ ಮಾಡಿದ 31 ವರ್ಷದ ವ್ಯಕ್ತಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ.  ಮೃತಳನ್ನು ಪಿಂಕಿ ಎಂದು ಗುರುತಿಸಲಾಗಿದ್ದು, ಆಕೆಗೆ 32 ವರ್ಷ. ರಾಕೇಶ್​ ಎಂಬಾತ ಆರೋಪಿ. ಈತ ಪಿಂಕಿಯ ಕತ್ತು ಹಿಸುಕಿದ್ದಲ್ಲದೆ, ಆಕೆಗೆ ವಿದ್ಯುತ್​ ಶಾಕ್​ ಕೊಟ್ಟು ಕೊಂದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ರಾಕೇಶ್​ ಮಹಿಳೆಯನ್ನು ಕೊಂದ ಬಳಿಕ ಗಾಬರಿಯಿಂದ ದೆಹಲಿಯ ಬುರಾರಿ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಕುಳಿತಿದ್ದ. ನಂತರ ಪೊಲೀಸರ ಎದುರು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ನಾನು ನನ್ನ ಅತ್ತಿಗೆಯಂತಿರುವ ಮಹಿಳೆಯನ್ನು ಹತ್ಯೆ ಮಾಡಿದ್ದಾಗಿ ಹೇಳಿಕೊಂಡಿದ್ದಾನೆ. 

ಆರೋಪಿಯೇ ಸಂತ್​ ನಗರದಲ್ಲಿರುವ ಮಹಿಳೆಯ ಮನೆಯನ್ನೂ ಪೊಲೀಸರಿಗೆ ತೋರಿಸಿದ್ದಾನೆ.  ಮೃತದೇಹವನ್ನು ಪರಿಶೀಲಿಸಿದ ಬಳಿಕ ಪೊಲೀಸರು ಆರೋಪಿ ರಾಕೇಶ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ, ನಾನು ಹತ್ಯೆ ಮಾಡಿದ ಮಹಿಳೆ ಪಿಂಕಿಯ ಪತಿ ವೀರೇಂದ್ರ ಕುಮಾರ್​ ಕಳೆದ ಮೂರು ವರ್ಷಗಳ ಹಿಂದೆ ನನಗಿಲ್ಲಿ ವಾಸಿಸಲು ಅವಕಾಶ ಮಾಡಿಕೊಟ್ಟಿದ್ದರು. ನಾನು ಈ ಮನೆಯ ಕೊನೇ ಫ್ಲೋರ್​​ನಲ್ಲಿ ವಾಸಿಸುತ್ತಿದ್ದೆ. ನನ್ನ ಕೈಯಲ್ಲಿ ಕೆಲಸವಿರಲಿಲ್ಲ. ಆಗಲೂ ಸಹ ವೀರೇಂದ್ರ ಕುಮಾರ್​ ಸಹಾಯ ಮಾಡಿದರು. ತಮ್ಮ ಕಾರನ್ನು ನನಗೆ ಬಾಡಿಗೆಗೆ ಕೊಟ್ಟು ಅದರಲ್ಲಿ ಬಾಡಿಗೆ ಹೊಡೆದು ಹಣ ಸಂಪಾದನೆ ಮಾಡಿಕೋ ಎಂದು ಹೇಳಿದ್ದರು ಎಂಬುದಾಗಿ ರಾಕೇಶ್​ ತಿಳಿಸಿದ್ದಾನೆ.

ತಾನ್ಯಾಕೆ ಪಿಂಕಿಯನ್ನು ಹತ್ಯೆ ಮಾಡಿದೆ ಎಂಬ ಬಗ್ಗೆ ವಿವರಿಸಿದ ಆತ,   2021ರ ಫೆಬ್ರವರಿಯಲ್ಲಿ ವೀರೇಂದ್ರ ಕುಮಾರ್ ಈ ಪಿಂಕಿಯವರನ್ನು ಮದುವೆಯಾಗಿದ್ದರು. ಆದರೆ ನನಗೆ ಇತ್ತೀಚೆಗೆ ಆದಾಯ ಅಷ್ಟು ಇರಲಿಲ್ಲ. ಇದರಿಂದಾಗಿ ವೀರೇಂದ್ರ ಕುಮಾರ್​ ಅವರಿಗೆ ಮನೆ ಬಾಡಿಗೆ ನೀಡಲು ನನಗೆ ಸಾಧ್ಯವಾಗುತ್ತಿರಲಿಲ್ಲ. ಈ ಕಾರಣಕ್ಕೆ ಪಿಂಕಿ ನನ್ನನ್ನು ಮನೆಯಿಂದ ಹೊರಹಾಕಿದ್ದರು. ಇದು ನನಗೆ ಕೆಟ್ಟ ಕೋಪ ತರಿಸಿತ್ತು. ಕುಮಾರ್​ ಮನೆಯಲ್ಲಿ ಇಲ್ಲದ ಹೊತ್ತಲ್ಲಿ ಹೋಗಿ ಹತ್ಯೆ ಮಾಡಿದೆ ಎಂದು ರಾಕೇಶ್​ ಹೇಳಿದ್ದಾನೆ.

ಇದನ್ನೂ ಓದಿ:  ಪ್ರಿಯಾಂಕ್ ಖರ್ಗೆ ವಸೂಲಿ ಕಿಂಗ್, ಬಿಟ್ ಕಾಯಿನ್ ದಂಧೆ ಕುರಿತು ದಾಖಲೆಯಿದ್ದರೆ ಬಹಿರಂಗಪಡಿಸಲಿ; ಸಚಿವ ಈಶ್ವರಪ್ಪ ಸವಾಲ್

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ