AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ, ಉದ್ಯೋಗ ಕೊಟ್ಟಿದ್ದ ಸಹಾಯಕ ಪ್ರಾಧ್ಯಾಪಕನ ಪತ್ನಿಯನ್ನೇ ಕೊಲೆ ಮಾಡಿದ ಕಾರು ಚಾಲಕ !

ಆರೋಪಿಯೇ ಸಂತ್​ ನಗರದಲ್ಲಿರುವ ಮಹಿಳೆಯ ಮನೆಯನ್ನೂ ಪೊಲೀಸರಿಗೆ ತೋರಿಸಿದ್ದಾನೆ.  ಮೃತದೇಹವನ್ನು ಪರಿಶೀಲಿಸಿದ ಬಳಿಕ ಪೊಲೀಸರು ಆರೋಪಿ ರಾಕೇಶ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮನೆ, ಉದ್ಯೋಗ ಕೊಟ್ಟಿದ್ದ ಸಹಾಯಕ ಪ್ರಾಧ್ಯಾಪಕನ ಪತ್ನಿಯನ್ನೇ ಕೊಲೆ ಮಾಡಿದ ಕಾರು ಚಾಲಕ !
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 10, 2021 | 3:29 PM

Share

ದೆಹಲಿ: ಇಲ್ಲಿನ ಯೂನಿವರ್ಸಿಟಿಯಲ್ಲಿನ ಸಹಾಯಕ ಪ್ರಾಧ್ಯಾಪಕರೊಬ್ಬರ ಪತ್ನಿಯನ್ನು ಹತ್ಯೆ ಮಾಡಿದ 31 ವರ್ಷದ ವ್ಯಕ್ತಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ.  ಮೃತಳನ್ನು ಪಿಂಕಿ ಎಂದು ಗುರುತಿಸಲಾಗಿದ್ದು, ಆಕೆಗೆ 32 ವರ್ಷ. ರಾಕೇಶ್​ ಎಂಬಾತ ಆರೋಪಿ. ಈತ ಪಿಂಕಿಯ ಕತ್ತು ಹಿಸುಕಿದ್ದಲ್ಲದೆ, ಆಕೆಗೆ ವಿದ್ಯುತ್​ ಶಾಕ್​ ಕೊಟ್ಟು ಕೊಂದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ರಾಕೇಶ್​ ಮಹಿಳೆಯನ್ನು ಕೊಂದ ಬಳಿಕ ಗಾಬರಿಯಿಂದ ದೆಹಲಿಯ ಬುರಾರಿ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಕುಳಿತಿದ್ದ. ನಂತರ ಪೊಲೀಸರ ಎದುರು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ನಾನು ನನ್ನ ಅತ್ತಿಗೆಯಂತಿರುವ ಮಹಿಳೆಯನ್ನು ಹತ್ಯೆ ಮಾಡಿದ್ದಾಗಿ ಹೇಳಿಕೊಂಡಿದ್ದಾನೆ. 

ಆರೋಪಿಯೇ ಸಂತ್​ ನಗರದಲ್ಲಿರುವ ಮಹಿಳೆಯ ಮನೆಯನ್ನೂ ಪೊಲೀಸರಿಗೆ ತೋರಿಸಿದ್ದಾನೆ.  ಮೃತದೇಹವನ್ನು ಪರಿಶೀಲಿಸಿದ ಬಳಿಕ ಪೊಲೀಸರು ಆರೋಪಿ ರಾಕೇಶ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ, ನಾನು ಹತ್ಯೆ ಮಾಡಿದ ಮಹಿಳೆ ಪಿಂಕಿಯ ಪತಿ ವೀರೇಂದ್ರ ಕುಮಾರ್​ ಕಳೆದ ಮೂರು ವರ್ಷಗಳ ಹಿಂದೆ ನನಗಿಲ್ಲಿ ವಾಸಿಸಲು ಅವಕಾಶ ಮಾಡಿಕೊಟ್ಟಿದ್ದರು. ನಾನು ಈ ಮನೆಯ ಕೊನೇ ಫ್ಲೋರ್​​ನಲ್ಲಿ ವಾಸಿಸುತ್ತಿದ್ದೆ. ನನ್ನ ಕೈಯಲ್ಲಿ ಕೆಲಸವಿರಲಿಲ್ಲ. ಆಗಲೂ ಸಹ ವೀರೇಂದ್ರ ಕುಮಾರ್​ ಸಹಾಯ ಮಾಡಿದರು. ತಮ್ಮ ಕಾರನ್ನು ನನಗೆ ಬಾಡಿಗೆಗೆ ಕೊಟ್ಟು ಅದರಲ್ಲಿ ಬಾಡಿಗೆ ಹೊಡೆದು ಹಣ ಸಂಪಾದನೆ ಮಾಡಿಕೋ ಎಂದು ಹೇಳಿದ್ದರು ಎಂಬುದಾಗಿ ರಾಕೇಶ್​ ತಿಳಿಸಿದ್ದಾನೆ.

ತಾನ್ಯಾಕೆ ಪಿಂಕಿಯನ್ನು ಹತ್ಯೆ ಮಾಡಿದೆ ಎಂಬ ಬಗ್ಗೆ ವಿವರಿಸಿದ ಆತ,   2021ರ ಫೆಬ್ರವರಿಯಲ್ಲಿ ವೀರೇಂದ್ರ ಕುಮಾರ್ ಈ ಪಿಂಕಿಯವರನ್ನು ಮದುವೆಯಾಗಿದ್ದರು. ಆದರೆ ನನಗೆ ಇತ್ತೀಚೆಗೆ ಆದಾಯ ಅಷ್ಟು ಇರಲಿಲ್ಲ. ಇದರಿಂದಾಗಿ ವೀರೇಂದ್ರ ಕುಮಾರ್​ ಅವರಿಗೆ ಮನೆ ಬಾಡಿಗೆ ನೀಡಲು ನನಗೆ ಸಾಧ್ಯವಾಗುತ್ತಿರಲಿಲ್ಲ. ಈ ಕಾರಣಕ್ಕೆ ಪಿಂಕಿ ನನ್ನನ್ನು ಮನೆಯಿಂದ ಹೊರಹಾಕಿದ್ದರು. ಇದು ನನಗೆ ಕೆಟ್ಟ ಕೋಪ ತರಿಸಿತ್ತು. ಕುಮಾರ್​ ಮನೆಯಲ್ಲಿ ಇಲ್ಲದ ಹೊತ್ತಲ್ಲಿ ಹೋಗಿ ಹತ್ಯೆ ಮಾಡಿದೆ ಎಂದು ರಾಕೇಶ್​ ಹೇಳಿದ್ದಾನೆ.

ಇದನ್ನೂ ಓದಿ:  ಪ್ರಿಯಾಂಕ್ ಖರ್ಗೆ ವಸೂಲಿ ಕಿಂಗ್, ಬಿಟ್ ಕಾಯಿನ್ ದಂಧೆ ಕುರಿತು ದಾಖಲೆಯಿದ್ದರೆ ಬಹಿರಂಗಪಡಿಸಲಿ; ಸಚಿವ ಈಶ್ವರಪ್ಪ ಸವಾಲ್

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ