AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಸ್ಫೋಟಕ ಹೊತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದ ಪೊಲೀಸರು

Jammu and Kashmir: ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಡ್ರೋನ್ ಒಂದನ್ನು ಹೊಡೆದುರುಳಿಸಲಾಗಿದೆ. ಅದು ಸ್ಫೋಟಕ ಸಾಮಗ್ರಿಗಳನ್ನು ಒಳಗೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಸ್ಫೋಟಕ ಹೊತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದ ಪೊಲೀಸರು
ವಶಪಡಿಸಿಕೊಂಡ ಡ್ರೋನ್
TV9 Web
| Edited By: |

Updated on:Jul 23, 2021 | 11:17 AM

Share

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಡ್ರೋನ್​ ಒಂದನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಅದರಲ್ಲಿ ಸುಧಾರಿತ ಸ್ಫೋಟಕ ಸಾಮಗ್ರಿಗಳಿದ್ದವು; ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದು, ಉಳಿದ ಮಾಹಿತಿಗಳು ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಎನ್​ಐ ವರದಿ ಮಾಡಿದೆ. 

ಡ್ರೋನ್ ಹೆಕ್ಸಾಕಾಪ್ಟರ್ ಮಾದರಿಯಲ್ಲಿದ್ದು, ಗಡಿಯಿಂದ ಆರು ಕಿಲೋಮೀಟರ್ ಒಳಗೆ ಪತ್ತೆಯಾಗಿದೆ. ಅಂದಾಜು 5ಕೆಜಿಯಷ್ಟು ಸುಧಾರಿತ ಸ್ಫೋಟಕವನ್ನು ಅದರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಎನ್​ಐ ವರದಿ ಮಾಡಿರುವ ಟ್ವೀಟ್ ಇಲ್ಲಿದೆ:

ಘಟನೆಯನ್ನು ಹೆಚ್ಚುವರಿ ಪೊಲೀಸ್ ನಿರ್ದೇಶಕ ಮುಕೇಶ್ ಸಿಂಗ್ ಖಚಿತಪಡಿಸಿದ್ದು, ವಶಪಡಿಸಿಕೊಂಡ ಸುಧಾರಿತ ಸ್ಫೋಟಕಗಳನ್ನು ನಾಶಪಡಿಸಲಾಗಿದೆ ಎಂದಿದ್ದಾರೆ. ಕೃತ್ಯದ ಹಿಂದೆ ಲಷ್ಕರ್-ಎ-ತಯ್ಬಾ ಸಂಘಟನೆಯ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಹೆಚ್ಚಾಗಿ ಡ್ರೋನ್​ಗಳಲ್ಲಿ ಸ್ಫೋಟಕ ಪತ್ತೆಯಾಗುತ್ತಿದೆ. ಇತ್ತೀಚೆಗೆ ಭಾರತೀಯ ವಾಯುನೆಲೆಯ ಮೇಲೆ ಡ್ರೋನ್ ದಾಳಿ ನಡೆದ ನಂತರ ಕಾಶ್ಮೀರದಲ್ಲಿ ಡ್ರೋನ್​ಗಳ ಹಾರಾಟವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Internet Outage: ಅಮೆಜಾನ್, ಝೊಮ್ಯಾಟೋ ಸೇರಿದಂತೆ ಹಲವು ಪ್ರಮುಖ ವೆಬ್​ಸೈಟ್​ಗಳಲ್ಲಿ ಇಂಟರ್​ನೆಟ್ ಸಮಸ್ಯೆ

ಇದನ್ನೂ ಓದಿ: ಸಂಸ್ಥೆಗಳು ಅವುಗಳ ಕೆಲಸ ಮಾಡುತ್ತಿವೆ, ನಮ್ಮ ಹಸ್ತಕ್ಷೇಪ ಇಲ್ಲ: ಮಾಧ್ಯಮಗಳ ವಿರುದ್ಧ ಐಟಿ ದಾಳಿ ಬಗ್ಗೆ ಕೇಂದ್ರ ಪ್ರತಿಕ್ರಿಯೆ

(A drone was shot down in Kanachak area says JK Police officials)

Published On - 10:58 am, Fri, 23 July 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ