AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಸ್ಫೋಟಕ ಹೊತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದ ಪೊಲೀಸರು

Jammu and Kashmir: ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಡ್ರೋನ್ ಒಂದನ್ನು ಹೊಡೆದುರುಳಿಸಲಾಗಿದೆ. ಅದು ಸ್ಫೋಟಕ ಸಾಮಗ್ರಿಗಳನ್ನು ಒಳಗೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಸ್ಫೋಟಕ ಹೊತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದ ಪೊಲೀಸರು
ವಶಪಡಿಸಿಕೊಂಡ ಡ್ರೋನ್
TV9 Web
| Edited By: |

Updated on:Jul 23, 2021 | 11:17 AM

Share

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಡ್ರೋನ್​ ಒಂದನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಅದರಲ್ಲಿ ಸುಧಾರಿತ ಸ್ಫೋಟಕ ಸಾಮಗ್ರಿಗಳಿದ್ದವು; ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದು, ಉಳಿದ ಮಾಹಿತಿಗಳು ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಎನ್​ಐ ವರದಿ ಮಾಡಿದೆ. 

ಡ್ರೋನ್ ಹೆಕ್ಸಾಕಾಪ್ಟರ್ ಮಾದರಿಯಲ್ಲಿದ್ದು, ಗಡಿಯಿಂದ ಆರು ಕಿಲೋಮೀಟರ್ ಒಳಗೆ ಪತ್ತೆಯಾಗಿದೆ. ಅಂದಾಜು 5ಕೆಜಿಯಷ್ಟು ಸುಧಾರಿತ ಸ್ಫೋಟಕವನ್ನು ಅದರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಎನ್​ಐ ವರದಿ ಮಾಡಿರುವ ಟ್ವೀಟ್ ಇಲ್ಲಿದೆ:

ಘಟನೆಯನ್ನು ಹೆಚ್ಚುವರಿ ಪೊಲೀಸ್ ನಿರ್ದೇಶಕ ಮುಕೇಶ್ ಸಿಂಗ್ ಖಚಿತಪಡಿಸಿದ್ದು, ವಶಪಡಿಸಿಕೊಂಡ ಸುಧಾರಿತ ಸ್ಫೋಟಕಗಳನ್ನು ನಾಶಪಡಿಸಲಾಗಿದೆ ಎಂದಿದ್ದಾರೆ. ಕೃತ್ಯದ ಹಿಂದೆ ಲಷ್ಕರ್-ಎ-ತಯ್ಬಾ ಸಂಘಟನೆಯ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಹೆಚ್ಚಾಗಿ ಡ್ರೋನ್​ಗಳಲ್ಲಿ ಸ್ಫೋಟಕ ಪತ್ತೆಯಾಗುತ್ತಿದೆ. ಇತ್ತೀಚೆಗೆ ಭಾರತೀಯ ವಾಯುನೆಲೆಯ ಮೇಲೆ ಡ್ರೋನ್ ದಾಳಿ ನಡೆದ ನಂತರ ಕಾಶ್ಮೀರದಲ್ಲಿ ಡ್ರೋನ್​ಗಳ ಹಾರಾಟವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Internet Outage: ಅಮೆಜಾನ್, ಝೊಮ್ಯಾಟೋ ಸೇರಿದಂತೆ ಹಲವು ಪ್ರಮುಖ ವೆಬ್​ಸೈಟ್​ಗಳಲ್ಲಿ ಇಂಟರ್​ನೆಟ್ ಸಮಸ್ಯೆ

ಇದನ್ನೂ ಓದಿ: ಸಂಸ್ಥೆಗಳು ಅವುಗಳ ಕೆಲಸ ಮಾಡುತ್ತಿವೆ, ನಮ್ಮ ಹಸ್ತಕ್ಷೇಪ ಇಲ್ಲ: ಮಾಧ್ಯಮಗಳ ವಿರುದ್ಧ ಐಟಿ ದಾಳಿ ಬಗ್ಗೆ ಕೇಂದ್ರ ಪ್ರತಿಕ್ರಿಯೆ

(A drone was shot down in Kanachak area says JK Police officials)

Published On - 10:58 am, Fri, 23 July 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು