AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಮುಂದುವರಿದ ಕೋಟಿ ಕರಾಮತ್ತು; ಶಾಲಾ ಮಕ್ಕಳಾಯ್ತು, ಈಗ ಬಡ ರೈತನ ಖಾತೆಯಲ್ಲಿ 52 ಕೋಟಿ ರೂಪಾಯಿ

ರಾಮ್​ ಬಹದ್ದೂರ್​ ಶಾ ಪುತ್ರ ಸುಜಿತ್​ ಕುಮಾರ್ ಗುಪ್ತಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಈ ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ಆತಂಕವೂ ಆಗುತ್ತಿದೆ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಮುಂದುವರಿದ ಕೋಟಿ ಕರಾಮತ್ತು; ಶಾಲಾ ಮಕ್ಕಳಾಯ್ತು, ಈಗ ಬಡ ರೈತನ ಖಾತೆಯಲ್ಲಿ 52 ಕೋಟಿ ರೂಪಾಯಿ
ಬಿಹಾರ ರೈತ
TV9 Web
| Edited By: |

Updated on: Sep 17, 2021 | 4:58 PM

Share

ಕಳೆದ ಮೂರ್ನಾಲ್ಕು ದಿನಗಳಿಂದ ಬಿಹಾರ ಭರ್ಜರಿ ಸುದ್ದಿಯಾಗುತ್ತಿದೆ.   ಯಾರ್ಯಾರದ್ದೋ ಬ್ಯಾಂಕ್​ ಅಕೌಂಟ್​ಗಳಿಗೆ ಏಕಾಏಕಿ ಬರುತ್ತಿರುವ ಕೋಟ್ಯಂತರ ರೂಪಾಯಿ ಹಣವೇ ಇದಕ್ಕೆ ಕಾರಣ. ಎರಡು ದಿನಗಳ ಹಿಂದೆ ಖಗಾರಿಯಾ ಎಂಬಲ್ಲಿ ರಂಜಿತ್ ಎಂಬುವರ ಅಕೌಂಟ್​ಗೆ 5.5 ಲಕ್ಷ ರೂಪಾಯಿ ಬಂದಿತ್ತು. ಅದು ದಕ್ಷಿಣ ಗ್ರಾಮೀಣ ಬ್ಯಾಂಕ್​​ನಲ್ಲಾದ ತಾಂತ್ರಿಕ ದೋಷ ಎಂದು ಹೇಳಲಾಗಿತ್ತು. ನಿನ್ನೆ ಇಬ್ಬರು ಶಾಲೆಗೆ ಹೋಗುವ ಬಾಲಕರ ಖಾತೆಗೆ ಕೋಟ್ಯಂತರ ರೂಪಾಯಿ ಜಮಾ ಆಗಿತ್ತು. ಕತಿಹಾರ ಜಿಲ್ಲೆಯ ಪಾಸ್ಟಿಯಾ ಗ್ರಾಮದ ಬಾಲಕ ಅಸಿತ್​ ಕುಮಾರ್ ಖಾತೆಗೆ 900 ಕೋಟಿ ರೂಪಾಯಿ ಬಂದಿದ್ದರೆ, ಗುರುಚಂದ್ರ ವಿಶ್ವಾಸ್​ ಎಂಬುವನ ಖಾತೆಗೆ 60 ಕೋಟಿ ರೂ.ವರ್ಗಾವಣೆಯಾಗಿತ್ತು. ಇವರಿಬ್ಬರೂ ಉತ್ತರ ಗ್ರಾಮೀಣ ಬ್ಯಾಂಕ್​ನಲ್ಲಿ ಖಾತೆ ಹೊಂದಿದ್ದರು. 

ಇಂದು ಬಿಹಾರದಿಂದ ಹೀಗಿದ್ದೇ ಇನ್ನೊಂದು ವರದಿಯಾಗಿದೆ. ಬಡ ರೈತನ ಖಾತೆಗೆ 52 ಕೋಟಿ ರೂಪಾಯಿ ಜಮಾ ಆಗಿದೆ. ಈ ರೈತನ ಪಿಂಚಣಿ ಖಾತೆಗೆ ಬರೋಬ್ಬರಿ 52 ಕೋಟಿ ರೂಪಾಯಿ ಬಂದಿದ್ದು, ಅದರಲ್ಲಿ ಸ್ವಲ್ಪವಾದರೂ ಹಾಗೇ ಉಳಿಸಿ, ನನ್ನ ಜೀವನಕ್ಕೆ ದಿಕ್ಕಾಗುತ್ತದೆ ಎಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.  ಅಂದಹಾಗೇ ಈ ಬಾರಿ ಹೀಗೆ ಅನುಭವ ಆಗಿದ್ದು ರಾಮ್​ಬಹದ್ದೂರ್​ ಶಾ ಎಂಬುವರಿಗೆ.  ರಾಮ್​ ಬಹದ್ದೂರ್ ಶಾ ತಮ್ಮ ಪಿಂಚಣಿಯ ಬಗ್ಗೆ ವಿಚಾರಿಸಲು ಸಮೀಪದ ಗ್ರಾಹಕರ ಸೇವಾ ಕೇಂದ್ರಕ್ಕೆ ಭೇಟಿ ನೀಡಿದ್ದರು. ಅಲ್ಲಿ ಹೋಗಿ ಆಧಾರ್​ ಕಾರ್ಡ್​ ನೀಡಿ, ತಮ್ಮ ಹೆಬ್ಬೆರಳನ್ನು ಪಂಚ್​ ಮಾಡಿ ದೃಢೀಕರಣ ಮಾಡಿದ ಬಳಿಕ ಅಕೌಂಟ್​ನಲ್ಲಿರು ಹಣದ ಮೊತ್ತ ಹೇಳಲಾಯಿತು. ಆ ಮೊತ್ತವನ್ನು ನೋಡಿ ಸಿಎಸ್​ಪಿ ಅಧಿಕಾರಿ ಮತ್ತು ರಾಮ್​ಬಹದ್ದೂರ್ ಶಾ ಇಬ್ಬರಿಗೂ ಸಿಕ್ಕಾಪಟೆ ಶಾಕ್​ ಆಗಿದೆ.  ಈ ಹಣ ಎಲ್ಲಿಂದ ಬಂತು ಎಂಬುದು ಗೊತ್ತಿಲ್ಲ ಎಂದು ರಾಮ್​ ಬಹದ್ದೂರ್​ ಶಾ ತಿಳಿಸಿದ್ದಾರೆ. ನಾನು ಕೃಷಿ ಮಾಡುತ್ತಿದ್ದೇನೆ. ಇದೀಗ ಇಷ್ಟು ಪ್ರಮಾಣದಲ್ಲಿ ಬಂದಿರುವ ಹಣದಲ್ಲಿ ಸ್ವಲ್ಪವನ್ನಾದರೂ ಹಾಗೆಯೇ ಉಳಿಸುವಂತೆ ಸರ್ಕಾರದ ಬಳಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇನ್ನು ರಾಮ್​ ಬಹದ್ದೂರ್​ ಶಾ ಪುತ್ರ ಸುಜಿತ್​ ಕುಮಾರ್ ಗುಪ್ತಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಈ ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ಆತಂಕವೂ ಆಗುತ್ತಿದೆ. ಆದರೆ ಸ್ವಲ್ಪವಾದರೂ ಉಳಿಸಿದರೆ ನಮಗೆ ಸಹಾಯವಾಗುತ್ತದೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಕತ್ರಾ ಪೊಲೀಸ್​ ಠಾಣೆ ಸಬ್​ ಇನ್ಸ್​ಪೆಕ್ಟರ್​ ಮನೋಜ್​ ಪಂಡೇರ್​ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ನಿನ್ನೆ ಶಾಲಾ ಮಕ್ಕಳ ಅಕೌಂಟ್​ಗೆ ಅಷ್ಟು ಹಣ ಹೇಗೆ ಬಂತು ಎಂಬುದನ್ನೂ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಕಲಬುರಗಿ ಪಾಲಿಕೆ ಚುನಾವಣೆ ವಿಚಾರ: ನಾವು ಯಾರ ಬಗ್ಗೆಯೂ ತಲೆಕೆಡಿಸಿಕೊಳ್ಳಲ್ಲ- ಹೆಚ್​ಡಿ ದೇವೇಗೌಡ

ಎಮ್ ಜಿ ಆಸ್ಟರ್ ಎಸ್​ಯುವಿಯ ಬುಕಿಂಗ್ ಆರಂಭವಾಗಿದ್ದು,ಕಾರು ಅಕ್ಟೋಬರ್​ನಲ್ಲಿ ರಸ್ತೆಗಿಳಿಯಲಿದೆ!

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ