AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Postmortem: ಶವಪರೀಕ್ಷೆ ವೇಳೆ ಎದ್ದು ಕುಳಿತ ಬಾಲಕಿ! ಆಯೋಮಯಗೊಂಡ ವೈದ್ಯ

Postmortem: ಸ್ವಲ್ಪ ಹೊತ್ತಿನಲ್ಲೇ ಬಾಲಕಿಗೆ ಪೂರ್ಣ ಪ್ರಜ್ಞೆ ಬಂದಿದೆ. ಆಕೆಯ ಮಾನಸಿಕ ಸ್ಥಿತಿಯನ್ನೂ ವೈದ್ಯರು ಪರೀಕ್ಷಿಸಿದ್ದಾರೆ. ತನ್ನ ಹೆಸರು, ತಂದೆಯ ಹೆಸರು, ಊರಿನ ಹೆಸರು ಯಾವುದು... ಎಂಬೆಲ್ಲ ವೈದ್ಯರ ಪ್ರಶ್ನೆಗಳಿಗೆ ಬಾಲಕಿ ಸರಿಯಾದ ಉತ್ತರ ನೀಡಿ, ತಾನು ಸಂಪೂರ್ಣ ಆರೋಗ್ಯವಾಗಿದ್ದೇನೆ ಎಂದು ವೈದ್ಯರಿಗೆ ಸಾಬೀತುಪಡಿಸಿದಳು.

Postmortem: ಶವಪರೀಕ್ಷೆ ವೇಳೆ ಎದ್ದು ಕುಳಿತ ಬಾಲಕಿ! ಆಯೋಮಯಗೊಂಡ ವೈದ್ಯ
ಶವ ಪರೀಕ್ಷೆ ವೇಳೆ ಎದ್ದು ಕುಳಿತ ಬಾಲಕಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 22, 2023 | 7:01 AM

Share

ಕೆಲವೊಮ್ಮೆ ಕೆಲವು ಸುದ್ದಿಗಳು ನಮ್ಮನ್ನು ಬೆಚ್ಚಿ ಬೀಳಿಸುತ್ತವೆ. ಕೆಲವು ಸುದ್ದಿಗಳು ನಮ್ಮ ಕಣ್ಣು ಮತ್ತು ಕಿವಿಗಳನ್ನು ಆಶ್ಚರ್ಯಗೊಳಿಸುತ್ತದೆ. ಇಲ್ಲಿ ವೈರಲ್ ಆಗುತ್ತಿರುವ ಸುದ್ದಿಯೂ ಇದೇ ಆಗಿದೆ. ವೈರಲ್ ಆಗಿರುವ ಸುದ್ದಿಯ ಸಾರಾಂಶ ಇಷ್ಟು… ಪೋಸ್ಟ್ ಮಾರ್ಟಂಗೆ ಹೋದ ಮೃತ ದೇಹ ಮತ್ತೆ ಎದ್ದು ಕುಳಿತಿದೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ (Postmortem) ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಪೋಸ್ಟ್‌ಮಾರ್ಟಂ ಮಾಡಲು ಸಿದ್ಧವಾಗಿದ್ದ ವೈದ್ಯರು ಆಕೆಯನ್ನು ಮನೆಗೆ ವಾಪಸ್ ಕಳುಹಿಸಿದ್ದಾರೆ. ಇದು ನಿಜಕ್ಕೂ ನಡೆದಿದೆ. ಹೌದು… ಮಿರ್ಜಾಪುರದಲ್ಲಿ ಕಾಲುವೆಗೆ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ನೀರು ನುಂಗಿದ ಬಾಲಕಿ ಸತ್ತಿದ್ದಾಳೆ ಎಂದು ಎಲ್ಲರೂ ಭಾವಿಸಿದ್ದರು. ಪೊಲೀಸರು ಕೂಡ ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಆದರೆ ಮಗುವಿನ ಪೋಷಕರು ತಮ್ಮ ಮಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಂತೆ ಒತ್ತಾಯಿಸಿದರು. ಪೊಲೀಸರು ಆಕೆಯನ್ನು ಮರಣೋತ್ತರ ಪರೀಕ್ಷೆಗಾಗಿ (Girl Body) ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆಗ ಆಕೆ ಬದುಕುಳಿದಿದ್ದಾಳೆ.

ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಹೃದಯ ಬಡಿತವನ್ನು ಪರೀಕ್ಷಿಸಿದ ವೈದ್ಯರು ಮೊದಲು ಆಘಾತಕ್ಕೊಳಗಾದರು. ಹುಡುಗಿಯ ಹೃದಯ ಬಡಿತವನ್ನು ಗಮನಿಸಲಾಯಿತು. ಅಷ್ಟರಲ್ಲಿ ಹುಡುಗಿ ಕಣ್ಣು ತೆರೆದಳು. ಆ ವೈದ್ಯರು ಒಂದು ಕ್ಷಣ ಆಶ್ಚರ್ಯಚಕಿತರಾದರು. ಆದರೆ, ಬಾಲಕಿ ಮೃತಪಟ್ಟಿಲ್ಲ ಎಂದು ತಿಳಿದ ವೈದ್ಯರು ಆಕೆ ಪ್ರಜ್ಞಾಹೀನಳಾಗಿರುವುದನ್ನು ದೃಢಪಡಿಸಿ ತಕ್ಷಣ ತುರ್ತು ಚಿಕಿತ್ಸೆ ಆರಂಭಿಸಿದ್ದಾರೆ. ಬಾಲಕಿ ನುಂಗಿದ್ದ ನೀರನ್ನು ಹೊಟ್ಟೆಯನ್ನು ಒತ್ತಿ ಒತ್ತಿ ಹೊರತೆಗೆದು ಚಿಕಿತ್ಸೆ ನೀಡಲಾಯಿತು.

Also read:  ಅಧಿಕಾರದಲ್ಲಿದ್ದಾಗ 6ರ ಬದಲು 66 ಮರ ಕಡಿಯಲು ಅಕ್ರಮವಾಗಿ ಅನುಮತಿ ನೀಡಿದ್ದ ಐಎಫ್​ಎಸ್​ ಅಧಿಕಾರಿ ಸಸ್ಪೆಂಡ್

ಅದಾದ ಸ್ವಲ್ಪ ಹೊತ್ತಿನಲ್ಲೇ ಬಾಲಕಿಗೆ ಪೂರ್ಣ ಪ್ರಜ್ಞೆ ಬಂದಿದೆ. ಆಕೆಯ ಮಾನಸಿಕ ಸ್ಥಿತಿಯನ್ನೂ ವೈದ್ಯರು ಪರೀಕ್ಷಿಸಿದ್ದಾರೆ. ತನ್ನ ಹೆಸರು, ತಂದೆಯ ಹೆಸರು, ಊರಿನ ಹೆಸರು ಯಾವುದು… ಎಂಬೆಲ್ಲ ವೈದ್ಯರ ಪ್ರಶ್ನೆಗಳಿಗೆ ಬಾಲಕಿ ಸರಿಯಾದ ಉತ್ತರ ನೀಡಿ, ತಾನು ಸಂಪೂರ್ಣ ಆರೋಗ್ಯವಾಗಿದ್ದೇನೆ ಎಂದು ವೈದ್ಯರಿಗೆ ಸಾಬೀತುಪಡಿಸಿದಳು. ಮಿರ್ಜಾಪುರದಲ್ಲಿ ನಡೆದ ಈ ಘಟನೆ ಎಲ್ಲವನ್ನೂ ಬೆಚ್ಚಿ ಬೀಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ