Sign In

By signing in or creating an account, you agree with Associated Broadcasting Company's Terms & Conditions and Privacy Policy.

Postmortem: ಶವಪರೀಕ್ಷೆ ವೇಳೆ ಎದ್ದು ಕುಳಿತ ಬಾಲಕಿ! ಆಯೋಮಯಗೊಂಡ ವೈದ್ಯ

Postmortem: ಸ್ವಲ್ಪ ಹೊತ್ತಿನಲ್ಲೇ ಬಾಲಕಿಗೆ ಪೂರ್ಣ ಪ್ರಜ್ಞೆ ಬಂದಿದೆ. ಆಕೆಯ ಮಾನಸಿಕ ಸ್ಥಿತಿಯನ್ನೂ ವೈದ್ಯರು ಪರೀಕ್ಷಿಸಿದ್ದಾರೆ. ತನ್ನ ಹೆಸರು, ತಂದೆಯ ಹೆಸರು, ಊರಿನ ಹೆಸರು ಯಾವುದು... ಎಂಬೆಲ್ಲ ವೈದ್ಯರ ಪ್ರಶ್ನೆಗಳಿಗೆ ಬಾಲಕಿ ಸರಿಯಾದ ಉತ್ತರ ನೀಡಿ, ತಾನು ಸಂಪೂರ್ಣ ಆರೋಗ್ಯವಾಗಿದ್ದೇನೆ ಎಂದು ವೈದ್ಯರಿಗೆ ಸಾಬೀತುಪಡಿಸಿದಳು.

Postmortem: ಶವಪರೀಕ್ಷೆ ವೇಳೆ ಎದ್ದು ಕುಳಿತ ಬಾಲಕಿ! ಆಯೋಮಯಗೊಂಡ ವೈದ್ಯ
ಶವ ಪರೀಕ್ಷೆ ವೇಳೆ ಎದ್ದು ಕುಳಿತ ಬಾಲಕಿ!
Follow us
ಸಾಧು ಶ್ರೀನಾಥ್​
|

Updated on: Jun 22, 2023 | 7:01 AM

ಕೆಲವೊಮ್ಮೆ ಕೆಲವು ಸುದ್ದಿಗಳು ನಮ್ಮನ್ನು ಬೆಚ್ಚಿ ಬೀಳಿಸುತ್ತವೆ. ಕೆಲವು ಸುದ್ದಿಗಳು ನಮ್ಮ ಕಣ್ಣು ಮತ್ತು ಕಿವಿಗಳನ್ನು ಆಶ್ಚರ್ಯಗೊಳಿಸುತ್ತದೆ. ಇಲ್ಲಿ ವೈರಲ್ ಆಗುತ್ತಿರುವ ಸುದ್ದಿಯೂ ಇದೇ ಆಗಿದೆ. ವೈರಲ್ ಆಗಿರುವ ಸುದ್ದಿಯ ಸಾರಾಂಶ ಇಷ್ಟು… ಪೋಸ್ಟ್ ಮಾರ್ಟಂಗೆ ಹೋದ ಮೃತ ದೇಹ ಮತ್ತೆ ಎದ್ದು ಕುಳಿತಿದೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ (Postmortem) ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಪೋಸ್ಟ್‌ಮಾರ್ಟಂ ಮಾಡಲು ಸಿದ್ಧವಾಗಿದ್ದ ವೈದ್ಯರು ಆಕೆಯನ್ನು ಮನೆಗೆ ವಾಪಸ್ ಕಳುಹಿಸಿದ್ದಾರೆ. ಇದು ನಿಜಕ್ಕೂ ನಡೆದಿದೆ. ಹೌದು… ಮಿರ್ಜಾಪುರದಲ್ಲಿ ಕಾಲುವೆಗೆ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ನೀರು ನುಂಗಿದ ಬಾಲಕಿ ಸತ್ತಿದ್ದಾಳೆ ಎಂದು ಎಲ್ಲರೂ ಭಾವಿಸಿದ್ದರು. ಪೊಲೀಸರು ಕೂಡ ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಆದರೆ ಮಗುವಿನ ಪೋಷಕರು ತಮ್ಮ ಮಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಂತೆ ಒತ್ತಾಯಿಸಿದರು. ಪೊಲೀಸರು ಆಕೆಯನ್ನು ಮರಣೋತ್ತರ ಪರೀಕ್ಷೆಗಾಗಿ (Girl Body) ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆಗ ಆಕೆ ಬದುಕುಳಿದಿದ್ದಾಳೆ.

ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಹೃದಯ ಬಡಿತವನ್ನು ಪರೀಕ್ಷಿಸಿದ ವೈದ್ಯರು ಮೊದಲು ಆಘಾತಕ್ಕೊಳಗಾದರು. ಹುಡುಗಿಯ ಹೃದಯ ಬಡಿತವನ್ನು ಗಮನಿಸಲಾಯಿತು. ಅಷ್ಟರಲ್ಲಿ ಹುಡುಗಿ ಕಣ್ಣು ತೆರೆದಳು. ಆ ವೈದ್ಯರು ಒಂದು ಕ್ಷಣ ಆಶ್ಚರ್ಯಚಕಿತರಾದರು. ಆದರೆ, ಬಾಲಕಿ ಮೃತಪಟ್ಟಿಲ್ಲ ಎಂದು ತಿಳಿದ ವೈದ್ಯರು ಆಕೆ ಪ್ರಜ್ಞಾಹೀನಳಾಗಿರುವುದನ್ನು ದೃಢಪಡಿಸಿ ತಕ್ಷಣ ತುರ್ತು ಚಿಕಿತ್ಸೆ ಆರಂಭಿಸಿದ್ದಾರೆ. ಬಾಲಕಿ ನುಂಗಿದ್ದ ನೀರನ್ನು ಹೊಟ್ಟೆಯನ್ನು ಒತ್ತಿ ಒತ್ತಿ ಹೊರತೆಗೆದು ಚಿಕಿತ್ಸೆ ನೀಡಲಾಯಿತು.

Also read:  ಅಧಿಕಾರದಲ್ಲಿದ್ದಾಗ 6ರ ಬದಲು 66 ಮರ ಕಡಿಯಲು ಅಕ್ರಮವಾಗಿ ಅನುಮತಿ ನೀಡಿದ್ದ ಐಎಫ್​ಎಸ್​ ಅಧಿಕಾರಿ ಸಸ್ಪೆಂಡ್

ಅದಾದ ಸ್ವಲ್ಪ ಹೊತ್ತಿನಲ್ಲೇ ಬಾಲಕಿಗೆ ಪೂರ್ಣ ಪ್ರಜ್ಞೆ ಬಂದಿದೆ. ಆಕೆಯ ಮಾನಸಿಕ ಸ್ಥಿತಿಯನ್ನೂ ವೈದ್ಯರು ಪರೀಕ್ಷಿಸಿದ್ದಾರೆ. ತನ್ನ ಹೆಸರು, ತಂದೆಯ ಹೆಸರು, ಊರಿನ ಹೆಸರು ಯಾವುದು… ಎಂಬೆಲ್ಲ ವೈದ್ಯರ ಪ್ರಶ್ನೆಗಳಿಗೆ ಬಾಲಕಿ ಸರಿಯಾದ ಉತ್ತರ ನೀಡಿ, ತಾನು ಸಂಪೂರ್ಣ ಆರೋಗ್ಯವಾಗಿದ್ದೇನೆ ಎಂದು ವೈದ್ಯರಿಗೆ ಸಾಬೀತುಪಡಿಸಿದಳು. ಮಿರ್ಜಾಪುರದಲ್ಲಿ ನಡೆದ ಈ ಘಟನೆ ಎಲ್ಲವನ್ನೂ ಬೆಚ್ಚಿ ಬೀಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!